ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ತರಗತಿ ಆರಂಭ
Team Udayavani, May 3, 2018, 6:00 AM IST
ಬೆಂಗಳೂರು: ಉಪನ್ಯಾಸಕರ ತೀವ್ರ ವಿರೋಧದ ನಡುವೆಯೇ ಇಲಾಖೆ 2018-19ನೇ ಸಾಲಿನ ದ್ವಿತೀಯ ಪಿಯುಸಿ
ತರಗತಿಯನ್ನು ಆರಂಭಿಸಿದೆ.ಅದರಂತೆ ಬಹುತೇಕ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕರು ಕಾಲೇಜಿಗೆ ಹೋಗಿದ್ದರೂ ತರಗತಿಗಳನ್ನು ತೆಗೆದುಕೊಂಡಿಲ್ಲ.
ಉಪನ್ಯಾಸಕರ ರಜೆಯ ಹಕ್ಕನ್ನು ಇಲಾಖೆ ಕಸಿದುಕೊಂಡಿದೆ. ಹೀಗಾಗಿ ಪಿಯು ಇಲಾಖೆಯನ್ನು ರಜೆ ರಹಿತ ಇಲಾಖೆಯಾಗಿ ಘೋಷಣೆ ಮಾಡಬೇಕು ಎಂದು ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಹೇಳಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ ಬಂದು ಎರಡು ದಿನವಾಗಿದೆ. ಮೌಲ್ಯಮಾಪನ ಇತ್ತೀಚೆಗಷ್ಟೇ ಮುಗಿದಿದೆ. 2017-18ನೇ
ಸಾಲಿನ ಆಡಳಿತಾತ್ಮಕ ಕೆಲಸ ಇನ್ನೂ ಮುಗಿದಿಲ್ಲ. ಈ ಮಧ್ಯೆ 2018-19ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಿಸಿದ್ದಾರೆ. ಉಪನ್ಯಾಸಕರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ, ಇಲಾಖೆ ತನ್ನ ನಿಲುವು ಸಡಿಲಿಸಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದಲಾದರೂ ಇಲಾಖೆ ತನ್ನ ನಿರ್ಧಾರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಭಾನುವಾರದ ತರಗತಿ, ವಿಶೇಷ ತರಗತಿ ಹೀಗೆ ಅನೇಕ ಕಾರಣದಿಂದ ಪಿಯು ಕಾಲೇಜಿನ ಉಪನ್ಯಾಸಕರಿಗೆ 2017-18ನೇ ಸಾಲಿನಲ್ಲಿ ಸರಿಯಾಗಿ ರಜೆ ನೀಡಿಲ್ಲ. ಬೇಸಿಗೆ ರಜೆಯನ್ನೂ ಕಸಿದುಕೊಳ್ಳುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ