ನಟ ಉಪೇಂದ್ರ ಹೊಸ ಪಕ್ಷ “ಯುಪಿಪಿ’
Team Udayavani, Sep 19, 2018, 6:00 AM IST
ಬೆಂಗಳೂರು: ನಟ ಉಪೇಂದ್ರ “ಉತ್ತಮ ಪ್ರಜಾಕೀಯ ಪಕ್ಷ (ಯುಪಿಪಿ) ಎಂಬ ನೂತನ ರಾಜಕೀಯ ಪಕ್ಷ ಸ್ಥಾಪಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಗುರಿಯಾಗಿಸಿ ಕೊಂಡು ತಮ್ಮ ಹೊಸ ಪಕ್ಷವು ಕಾರ್ಯ ನಿರ್ವಹಿಸಲಿದೆ ಎಂದು ಉಪೇಂದ್ರ ಹೇಳಿದ್ದಾರೆ.
ಉಪೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಮಂಗಳವಾರ ಹೊಸ ಪಕ್ಷ ಅಧಿಕೃತವಾಗಿ ಉದ್ಘಾಟಿಸಲಾಯಿತು. ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಸೇರಿ ಹಲವು ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದು ಶುಭ ಕೋರಿದರು. ಕಳೆದ ವರ್ಷ ಉಪೇಂದ್ರ ಅವರು ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ (ಕೆಪಿಜೆಪಿ) ಪಕ್ಷದಿಂದ ರಾಜಕೀಯ ಪ್ರವೇಶ ಮಾಡಿ, ವಿಧಾನಸಭೆ ಚುನಾವಣೆಯಲ್ಲಿ ಪಕ್ಷವು ಸ್ಪರ್ಧಿಸಲಿದೆ ಎಂದು ಘೋಷಿಸಿದ್ದರು. ಆದರೆ, ಅದಾಗಿ ಕೆಲವು ತಿಂಗಳುಗಳಲ್ಲೇ ಆಂತರಿಕ ಭಿನ್ನಾಭಿಪ್ರಾಯದಿಂದ ಕೆಪಿಜೆಪಿಯಿಂದ ಹೊರಬಂದು ಹೊಸ ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದರು. ವಿಧಾನಸಭಾ ಚುನಾವಣೆ ಪ್ರಕ್ರಿಯೆಯಿಂದ ದೂರವೇ ಉಳಿದಿದ್ದ ಉಪೇಂದ್ರ, ಕೊನೆಗೆ ಉತ್ತಮ ಪ್ರಜಾಕೀಯ ಪಕ್ಷ (ಯುಪಿಪಿ) ಎಂಬ ನೂತನ ರಾಜಕೀಯ
ಪಕ್ಷವನ್ನು ಸ್ಥಾಪಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಉಪೇಂದ್ರ, ನಮ್ಮ ಪಕ್ಷ ಸೇರಬಯಸುವವರು ತಮ್ಮ ಕ್ಷೇತ್ರಗಳ ಸಮಸ್ಯೆಗಳು, ಅವುಗಳನ್ನು ಬಗೆಹರಿಸುವ ವಿಧಾನಗಳು, ತಗಲುವ ವೆಚ್ಚದ ಬಗ್ಗೆ ವಿಡಿಯೋ ಮಾಡಿ ಯುಪಿಪಿ ವೆಬ್ಸೈಟ್ಗೆ ಕಳುಹಿಸಬೇಕು. ನಮಗೆ ಬಂದ ಮಾಹಿತಿ ಯನ್ನು ಪಕ್ಷದ ಕಾರ್ಯಕರ್ತರ ಜತೆಗೆ ಚರ್ಚಿಸಿ, ಅಭ್ಯರ್ಥಿ ಗಳನ್ನು ಲಿಖೀತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ