ಮೇಲ್ವಿಚಾರಕನ ಕೊಂದ ಸೆಕ್ಯೂರಿಟಿ ಗಾರ್ಡ್ ಬಂಧನ
Team Udayavani, Dec 8, 2018, 11:55 AM IST
ಬೆಂಗಳೂರು: ಕೆಲಸದ ವೇಳೆ ವಿನಾಕಾರಣ ಬೈಯುತ್ತಿದ್ದ ಹಾಗೂ ಅನಗತ್ಯ ಕೆಲಸ ಹೇಳುತ್ತಿದ್ದ ಎಂಬ ಕಾರಣಕ್ಕೆ ಕೋಪಗೊಂಡಿದ್ದ ಸೆಕ್ಯೂರಿಟಿ ಗಾರ್ಡ್ ಒಬ್ಬ, ತನ್ನ ಮೇಲ್ವಿಚಾರಕ (ಸೂಪರ್ವೈಸರ್)ನ ತಲೆಗೆ ಕಲ್ಲಿನಿಂದ ಹೊಡೆದು ಕೊಲೆಮಾಡಿರುವ ಘಟನೆ ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಬಿಹಾರ ಮೂಲದ ಶಿವಕುಮಾರ್ (28) ಕೊಲೆಯಾದವರು. ಕೊಲೆ ಆರೋಪಿ ಉತ್ತರ ಪ್ರದೇಶ ಮೂಲದ ಸೌರಭ್ ರಾಯ್ (24)ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲ ಸಮೀಪದ ಖಾಸಗಿ ಕಂಪನಿಯೊಂದರಲ್ಲಿ ಶಿವಕುಮಾರ್ ಸೆಕ್ಯೂರಿಟಿ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದು, ಕಳೆದ ಒಂದು ತಿಂಗಳ ಹಿಂದಷ್ಟೇ ಸೆಕ್ಯೂರಿಟಿಯಾಗಿ ಸೌರಭ್ ರಾಯ್ ಸೇರಿಕೊಂಡಿದ್ದ.
ಶಿವಕುಮಾರ್ ಕೆಲಸದ ವಿಚಾರದಲ್ಲಿ ಕಿರುಕುಳ ನೀಡುತ್ತಾರೆ ಎಂದು ಸೌರಭ್ ಕಂಪೆನಿಯ ಅಧಿಕಾರಿಗಳಿಗೆ ತಿಳಿಸಿದ್ದು, ಅಧಿಕಾರಿಗಳು ಇಬ್ಬರನ್ನು ಕರೆದು ಬುದ್ಧಿವಾದ ಹೇಳಿದ್ದರು. ಇಷ್ಟಕ್ಕೂ ಸುಮ್ಮನಾಗದೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಗುರುವಾರ ರಾತ್ರಿ ಮೊದಲ ಶಿಫ್ಟ್ ಕೆಲಸ ಮುಗಿದ ಬಳಿಕ ಇಬ್ಬರು ಜತೆಯಲ್ಲಿಯೇ ಹೋಗಿ ಮದ್ಯಪಾನ ಮಾಡಿದ್ದಾರೆ.
ರಾತ್ರಿ 12:30ರ ಸುಮಾರಿಗೆ ವಿವೇಕ್ನಗರ ಹೊರವರ್ತುಲ ರಸ್ತೆ ಸಮೀಪ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಸೌರಭ್, ಕಲ್ಲಿನಿಂದ ಶಿವಕುಮಾರ್ ತಲೆಗೆ ಹೊಡೆದಿದ್ದಾನೆ. ಮದ್ಯದ ಅಮಲಿನಲ್ಲಿದ್ದ ಆತ ಕೆಳಗೆ ಬೀಳುತ್ತಲೇ ಪುನ: ಕಲ್ಲು ಎತ್ತಿಹಾಕಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಸೌರಭ್ನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ಕೆಲಸದ ವೇಳೆ ಶಿವಕುಮಾರ್ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಕೊಲೆ ಮಾಡಿದ್ದಾಗಿ ಹೇಳಿದ್ದಾನೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ