ಭದ್ರತೆ, ಸುರಕ್ಷೆ ತಂತ್ರಜ್ಞಾನ ಎಕ್ಸ್ಪೋಗೆ ಚಾಲನೆ
Team Udayavani, Oct 24, 2018, 12:32 PM IST
ಬೆಂಗಳೂರು: ಇನ್ಫೋನಿಟಿ ಎಕ್ಸ್ಪೊಸಿಷನ್ಸ್ ವತಿಯಿಂದ ನಗರದ ನಿಮ್ಹಾನ್ಸ್ ಕನ್ವೆಂಕ್ಷನ್ ಸೆಂಟರ್ನಲ್ಲಿ “ಅಗ್ನಿ ಅನಾಹುತ ಸುರಕ್ಷತಾ ತಂತ್ರಜ್ಞಾನ ಹಾಗೂ ಸಂಚಾರ ದಟ್ಟಣೆ ನಿಯಂತ್ರಣ ಉಪಕರಣಗಳ’ ಪ್ರದರ್ಶನ ಮೇಳ ನಡೆಯುತ್ತಿದೆ.
ಮೇಳದಲ್ಲಿ 15ಕ್ಕೂ ಹೆಚ್ಚು ಖಾಸಗಿ ಸಂಸ್ಥೆಗಳು ತಮ್ಮ ಭದ್ರತಾ ಉಪಕರಣಗಳೊಂದಿಗೆ ಭಾಗವಹಿಸಿವೆ. ಜತೆಗೆ ಜನಸಾಮಾನ್ಯರಲ್ಲಿ ಅಗ್ನಿ ಅವಘಡ ಮತ್ತು ರಕ್ಷಣೆ, ಖಾಸಗಿ ಭದ್ರತೆ, ಸೈಬರ್ ಅಪರಾಧಗಳು, ಸಂಚಾರ ನಿಯಮ ಮತ್ತು ನಿಯಂತ್ರಣದಂತ ಅನೇಕ ವಿಷಯಗಳ ಬಗೆಗೆ ಅರಿವು ಮೂಡಿಸಲಾಗುತ್ತಿದೆ.
ಮೂರು ದಿನಗಳ ಕಾಲ ನಡೆಯುತ್ತಿರುವ ಈ ಪ್ರದರ್ಶನ ಮೇಳಕ್ಕೆ ಅಗ್ನಿ ಹಾಗೂ ತುರ್ತು ಸೇವೆಗಳ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸುನಿಲ್ ಅಗರ್ವಾಲ್ ಸೋಮವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಅಗ್ನಿ ಅವಘಡ ಹಾಗೂ ತುರ್ತು ಸೇವೆಗಳನ್ನು ಇನ್ನಷ್ಟು ಉತ್ತಮಗೊಳಿಸುವ ನೂತನ ತಂತ್ರಜ್ಞಾನ ಅತ್ಯವಶ್ಯಕ.
ಹೊಸ ಆವಿಷ್ಕಾರಗಳನ್ನು ಪರಿಶೀಲಿಸಿ ಅವುಗಳನ್ನು ಅಳವಡಿಸಿಕೊಳ್ಳುವ ಮೂಲಕ ಭದ್ರತೆಯನ್ನು ಇನ್ನಷ್ಟು ಬಲ ಪಡಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಸಾಕಷ್ಟು ಉಪಯುಕ್ತ ತಂತ್ರಜ್ಞಾನ ಮಾದರಿ ಉಪಕರಣಗಳು ಈ ಮೇಳದಲ್ಲಿವೆ. ಇವುಗಳ ಅಳವಡಿಕೆ ಹಾಗೂ ಬಳಕೆಗೆ ಬಿಲ್ಡರ್ ಅಸೋಸಿಯೇಷನ್ಗೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ