ನಿಮ್ಮದೇ ದೃಷ್ಟಿಯಲ್ಲಿ ಸಂಸ್ಕೃತಿ ನೋಡಿ


Team Udayavani, Jun 23, 2018, 11:38 AM IST

nimmade.jpg

ಬೆಂಗಳೂರು: ಭಾರತೀಯರು ಪಾಶ್ಚಿಮಾತ್ಯರ ದೃಷ್ಟಿಕೋನದಿಂದ ಭಾರತದ ಸಂಸ್ಕೃತಿ ಮತ್ತು ನಾಗರಿಕತೆ ನೋಡುವುದರಿಂದ ಇಲ್ಲಿನ ಮೂಲ ಸಂಸ್ಕೃತಿ ನಶಿಸುವ ಅಪಾಯವಿದೆ ಎಂದು ಕೃಷಿ ವಿಜ್ಞಾನಿ ಡಾ.ಕೆ.ಎನ್‌.ಗಣೇಶಯ್ಯ ಅಭಿಪ್ರಾಯಪಟ್ಟರು.

ಬಿ.ಪಿ.ವಾಡಿಯಾ ಸಭಾಂಗಣದಲ್ಲಿ ಶುಕ್ರವಾರ ನಡೆದ, ವಸಂತ ಪ್ರಕಾಶನ ಹೊರತಂದಿರುವ ರಾಜೀವ್‌ ಮಲ್ಹೋತ್ರ ಅವರ ಸಂಸ್ಕೃತಕ್ಕಾಗಿ ಹೋರಾಟ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಭಾರತ ತನ್ನನ್ನು ತನ್ನ ಆಯಾಮದಿಂದಲೇ ಕಂಡುಕೊಂಡರೆ ಯಾವುದೇ ಅಪಾಯವಿರುವುದಿಲ್ಲ.

ಆದರೆ, ಅನ್ಯರು ನೀಡುವ ಕನ್ನಡಿಯಿಂದ ನೋಡಿಕೊಂಡರೆ ಇಲ್ಲಿನ ನಾಗರಿಕತೆ, ಸಂಸ್ಕೃತಿ ನಶಿಸುವ ಸಾಧ್ಯತೆ ಇರುತ್ತದೆ. ಪಾಶ್ಚಿಮಾತ್ಯರು ತಮಗೆ ಅನುಕೂಲವಾಗುವ ರೀತಿಯಲ್ಲಿ ಭಾರತದ ಸಂಸ್ಕೃತಿ ಚಿತ್ರಿಸಿ ನಮಗೆ ತೋರಿಸುತ್ತಾರೆ ಎಂದರು.

ನಿಂದನೆ ನಂಬಬೇಡಿ: ಸಂಸ್ಕೃತ ಕೆಲವೇ ಜನರ ಭಾಷೆಯಾಗಿತ್ತು. ಅದನ್ನು ವರ್ಗಭೇದಕ್ಕಾಗಿ ಬಳಸಿದರು. ರಾಮಾಯಣವನ್ನು ತನ್ನ ಶತ್ರುಗಳ ವಿರುದ್ಧ ಬಳಸಲಾಗುತ್ತಿತ್ತು ಎಂದೆಲ್ಲಾ ಆಪಾದಿಸುತ್ತಿದ್ದ ಕಾಲದಲ್ಲಿ ಭಾರತದ ಸಂಸ್ಕೃತಿ ಎಷ್ಟು ಸರ್ವ ಶ್ರೇಷ್ಠ ಸ್ಥಾನದಲ್ಲಿತ್ತು ಎಂಬುದನ್ನು ಅನೇಕರು ಸಂಶೋಧನೆ ಮಾಡಿ ಸಾಬೀತುಪಡಿಸಿದ್ದಾರೆ.

ಈ ರೀತಿ ಪಾಶ್ಚಿಮಾತ್ಯರು ಭಾರತ ಕೀಳಾಗಿ ಬಿಂಬಿಸುತ್ತಿರುತ್ತಾರೆ. ಅದನ್ನು ನಾವು ನಂಬಿದರೆ ನಾಗರಿಕತೆಯ ನಾಶ ಕಟ್ಟಿಟ್ಟಬುತ್ತಿ ಎಂದು ಎಚ್ಚರಿಸಿದರು. ಹಿಂದುತ್ವದಲ್ಲಿ ಜಾತಿ ಹಾಗೂ ಅಸ್ಪೃಶ್ಯತೆ ಪದ್ಧತಿಯಿಂದಾಗಿ ಬೌದ್ಧ ಧರ್ಮ ಜನ್ಮ ತಾಳಿತು ಎನ್ನುತ್ತಾರೆ.

ಆದರೆ, ಬೌದ್ಧ ಧರ್ಮ 6ನೇ ಶತಮಾನದಲ್ಲಿ ಉದಯವಾದಾಗ  ಆಗಿನ್ನೂ ಅಸ್ಪೃಶ್ಯತೆ ಇರಲಿಲ್ಲ ಎಂಬುದನ್ನು ಮನಗಾಣಬೇಕು ಎಂದು ತಿಳಿಸಿದರು. ಲೇಖಕ ರಾಜೀವ್‌ ಮಲ್ಹೋತ್ರ ಮಾತನಾಡಿ, ಭಾರತೀಯ ವೈಜ್ಞಾನಿಕ ಕೊಡುಗೆ, ಸಂಸ್ಕೃತಿ, ಪೂರ್ವಪಕ್ಷ ಕುರಿತು ಈಗಾಗಲೇ ಸಿದ್ಧವಿರುವ ಪುಸ್ತಕಗಳ ಜತೆಗೆ ಇನ್ನೂ 8-10 ಪುಸ್ತಕ ಪ್ರಕಟಿಸುವ ಬಗ್ಗೆ ಚಿಂತಿಸಲಾಗುತ್ತಿದೆ.

ಆದರೆ, ಇದಕ್ಕೆ ಸಾಕಷ್ಟು ಅಧ್ಯಯನ, ಸಂಶೋಧನೆ ನಡೆಸಿ ಸಿದ್ಧತೆ ಮಾಡಬೇಕಾಗಿದ್ದು, ನುರಿತ ತಜ್ಞರು ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್‌ ನಿವೃತ್ತ ನ್ಯಾ.ಎಂ.ಎನ್‌.ವೆಂಕಟಾಚಲಯ್ಯ, ವಿಧಾನಪರಿಷತ್‌ ಮಾಜಿ ಸದಸ್ಯೆ ಡಾ.ಎಸ್‌.ಆರ್‌.ಲೀಲಾ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.