ದುಸ್ಥಿತಿ ವಾಹನಗಳ ಎತ್ತಂಗಡಿ


Team Udayavani, Jun 14, 2019, 12:30 PM IST

bng-tdy-3..

ಸಂಚಾರ ಪೊಲೀಸ್‌ ಅಧಿಕಾರಿಗಳೊಂದಿಗೆ ಬಿಂಗೀಪುರ ಲ್ಯಾಂಡ್‌ಫೀಲ್ ಪ್ರದೇಶವನ್ನು ಮೇಯರ್‌ ಗಂಗಾಂಬಿಕೆ ಪರಿಶೀಲಿಸಿದರು.

ಬೆಂಗಳೂರು: ನಗರದ ಸಂಚಾರಿ ಪೊಲೀಸ್‌ ಠಾಣೆಗಳ ಮುಂದೆ ನಿಲುಗಡೆ ಮಾಡಿರುವ ವಾಹನಗಳನ್ನು ಬೊಮ್ಮನಹಳ್ಳಿ ವಲಯದ ಬಿಂಗೀಪುರ ಲ್ಯಾಂಡ್‌ಫಿಲ್ ಪ್ರದೇಶಕ್ಕೆ ಸ್ಥಳಾಂತರ ಮಾಡುವ ಕುರಿತು ಸಂಚಾರ ಪೊಲೀಸ್‌ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಮೇಯರ್‌ ಗಂಗಾಂಬಿಕೆ ಹೇಳಿದರು.

ಬಿಂಗೀಪುರ ಲ್ಯಾಂಡ್‌ಫೀಲ್ ಪ್ರದೇಶದಲ್ಲಿ ಸಂಚಾರ ಪೊಲೀಸರಿಗೆ 10 ಎಕರೆ ಜಾಗವನ್ನು ನಿಗದಿಗೊಳಿಸಲಾಗಿದೆ. ಅದರಂತೆ ಗುರುವಾರ ಸಂಚಾರ ಪೊಲೀಸ್‌ ಅಧಿಕಾರಿ ಗಳೊಂದಿಗೆ ಸ್ಥಳ ಪರಿಶೀಲಿಸಿದ ಅವರು, ಈಗಾಗಲೇ ಭೂಮಿಯನ್ನು ಸಮತಟ್ಟುಗೊಳಿಸುವ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಆ ಹಿನ್ನೆಲೆಯಲ್ಲಿ ಠಾಣೆಗಳ ಮುಂದಿರುವ ವಾಹನಗಳನ್ನು ಸ್ಥಳಾಂತರಿಸಲು ಚರ್ಚಿಸಲಾಗುವುದು ಎಂದರು.

ಸುಮಾರು 23 ಎಕರೆ ಪ್ರದೇಶವಿರುವ ಬಿಂಗೀಪುರ ಲ್ಯಾಂಡ್‌ಫಿಲ್ನಲ್ಲಿ ಪಾಲಿಕೆಯಿಂದ ಈಗಾಗಲೇ 4.50 ಎಕರೆ ಪ್ರದೇಶದಲ್ಲಿ ಟ್ರೀ ಪಾರ್ಕ್‌ ಅಭಿವೃದ್ಧಿಪಡಿಸಲಾಗಿದ್ದು, 2 ಎಕರೆ ಜಾಗವನ್ನು ಗೋಶಾಲೆ ನಿರ್ಮಿಸಲು ಕಾಯ್ದಿರಿ ಸಲಾಗಿದೆ. ಅದೇ ರೀತಿ 10 ಎಕರೆ ಜಾಗದಲ್ಲಿ ಅನುಪಯುಕ್ತ ಹಾಗೂ ಸೀಜ್‌ ಮಾಡಿದ ವಾಹನಗಳನ್ನು ನಿಲುಗಡೆ ಮಾಡಲು ಸಂಚಾರ ಪೋಲಿಸರಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ನಗರದ ಪೊಲೀಸ್‌ ಠಾಣೆಗಳ ಮುಂಭಾಗ ಹಾಗೂ ಪಾದಚಾರಿ ಮಾರ್ಗದಲ್ಲಿ ವಾಹನಗಳನ್ನು ನಿಲುಗಡೆ ಮಾಡಿರುವುದರಿಂದ ಸಾರ್ವಜನಿಕರೊಂದಿಗೆ ತೊಂದರೆ ಯಾಗುತ್ತಿದ್ದು, ದಟ್ಟಣೆಗೂ ಕಾರಣವಾಗಿದೆ. ಆ ಹಿನ್ನೆಲೆಯಲ್ಲಿ ಕೂಡಲೇ ಠಾಣೆಗಳ ಮುಂಭಾಗದಲ್ಲಿ ದುಸ್ಥಿತಿ ಯಲ್ಲಿರುವ ವಾಹನಗಳನ್ನು ಬಿಂಗೀಪುರಕ್ಕೆ ಸ್ಥಳಾಂತರ ಮಾಡುವಂತೆ ಸಂಚಾರ ಪೊಲೀಸ್‌ ಹಿರಿಯ ಅಧಿಕಾರಿ ಗಳನ್ನು ಕೋರಲಾಗುವುದು ಎಂದು ಗಂಗಾಂಬಿಕೆ ತಿಳಿಸಿದರು. ಉಪಮೇಯರ್‌ ಭದ್ರೇಗೌಡ ಸೇರಿದಂತೆ ಸಂಚಾರ ಪೊಲೀಸ್‌ ಪಾಲಿಕೆಯ ಅಧಿಕಾರಿಗಳಿದ್ದರು.

10 ಲಕ್ಷ ಪರಿಹಾರ, ಉದ್ಯೋಗ ಕೊಡಿ:

ನಾಗವಾರ ಮುಖ್ಯರಸ್ತೆ ಕಾಡುಗೊಂಡನಹಳ್ಳಿ ಬಳಿ ಹಳೇ ಬಾವಿಗೆ ಬಿದ್ದು ಮೃತಪಟ್ಟಿದ್ದ ಇಬ್ಬರಿಗೆ ತಲಾ 10 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೀಡುವಂತೆ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ್‌ ಹಿರೇಮಣಿ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಳೆದ ಏ.27 ರಂದು ಕಾಡುಗೊಂಡನಹಳ್ಳಿ ಹತ್ತಿರದ ಅಂಗಡಿಯೊಂದರಲ್ಲಿ ಹಳೇ ಬಾವಿ ಸ್ವಚ್ಛಗೊಳಿಸಲು ಬಂದಿದ್ದ ಅಫ್ತಾಬ್‌ ಎಂಬ ಕಾರ್ಮಿಕ ಬಾವಿಗೆ ಬಿದ್ದಿದ್ದ. ಆತನನ್ನು ಕಾಪಾಡಲು ಗಫ‌ೂರ್‌ ಎಂಬಾತನೂ ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದು, ಇಬ್ಬರೂ ಮೃತಪಟ್ಟಿದ್ದರು. ಹಿರೇಮಣಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಸಾರಕ್ಕಿ ವಾರ್ಡ್‌ ಪೌರಕಾರ್ಮಿಕ ರಾದ ಅಂಡಾಳಮ್ಮ ಎಂಬುವವರು ಏ.29 ರಂದು ಹೃದಯಾಘಾತ ದಿಂದ ಮೃತಪಟ್ಟಿದ್ದರು. ಈ ಸಂಬಂಧ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಅಂಡಾಳಮ್ಮ ಮಗ ದಕ್ಷಿಣಾ ಮೂರ್ತಿಗೆ 10 ಲಕ್ಷ ರೂ. ಚೆಕ್‌ವಿತರಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.