ಶಿಥಿಲ ಕಟ್ಟಡ ಸ್ವಯಂ ಪರೀಕ್ಷೆ ಮಾಡಿಬಿಡಿ
ಸರಳವಾಗಿ ಕಟ್ಟಡದ ಶಿಥಿಲತೆ ಪರೀಕ್ಷೆ ಸಾಧ್ಯ ಯಾರೆಲ್ಲಾ ಪರೀಕ್ಷೆ ಮಾಡಿಸಬೇಕು, ಶಿಥಿಲ ಲಕ್ಷಣಗಳೇನು?
Team Udayavani, Oct 21, 2021, 4:57 PM IST
ಬೆಂಗಳೂರು: ನಿಮ್ಮ ಕಟ್ಟಡಕ್ಕೆ 30 ವರ್ಷ ತುಂಬಿದೆಯೇ? ನೀರು ತೊಟ್ಟಿಕ್ಕುತ್ತಿದೆ, ಗೋಡೆ ಬಿರುಕಾಗಿದೆಯೇ? ಅಥವಾ ಅನುಮತಿಗಿಂತ ಅಧಿಕ ಅಂತಸ್ತು ನಿರ್ಮಿಸಿ ದ್ದೀರಾ? ಹಾಗಿದ್ದರೆ, ಯಾವ ಸ್ಥಿಯಲ್ಲಿದೆ ಎಂಬುದನ್ನು ಪರೀಕ್ಷಿಸಿಕೊಳ್ಳಿ ಎನ್ನುತ್ತಾರೆ ತಜ್ಞರು. – ಇನ್ನು ಶಿಥಿಲ ಪರೀಕ್ಷೆ ವಿಧಾನ ಕೂಡಾ ತುಂಬಾ ಸರಳವಾಗಿದೆ ಎಂದೂ ಸ್ಪಷ್ಟಪಡಿಸುತ್ತಾರೆ.
ನಗರದಲ್ಲಿ ಸಾಲು ಸಾಲಾಗಿ ಕುಸಿತ ಕಾಣುತ್ತಿರುವ ಕಟ್ಟಡಗಳಲ್ಲಿ ಬಹುತೇಕ ಶಿಥಿಲಗೊಂಡ ಕಟ್ಟಗಳೇ ಆಗಿವೆ. ಈ ಹಿನ್ನೆಲೆ ಬಿಬಿಎಂಪಿಯೂ ಶಿಥಿಲ ಕಟ್ಟಡಗಳ ಸಮೀಕ್ಷೆ ನಡೆಸುತ್ತಿದೆ. ಆದರೆ, ಈ ಸಮೀಕ್ಷೆಯು ಕೇವಲ ಕಾಗದ ಪತ್ರ ದಾಖಲಾತಿ, ಬಾಹ್ಯನೋಟಕ್ಕೆ ಸೀಮಿತವಾಗಿದೆ. ಹೀಗಾಗಿಯೇ, ಎರಡು ವರ್ಷಗಳ ಹಿಂದೆ ನಡೆಸಿದ್ದ ಸಮೀಕ್ಷೆಯ ವರದಿಯಲ್ಲಿಲ್ಲದ ಕಟ್ಟಡಗಳು ಕುಸಿಯುತ್ತಿವೆ.
ಅಲ್ಲದೆ, ಅನುಮತಿಗಿಂತ ಅಧಿಕ ಅಂತಸ್ತು ನಿರ್ಮಿಸಿದ 5000ಕ್ಕೂ ಅಧಿಕ ಕಟ್ಟಡಗಳು ನಗರದಲ್ಲಿವೆ. ಇದು ಕೂಡಾ ಕುಸಿತಕ್ಕೆ ಪ್ರಮುಖ ಕಾರಣವಾಗಿವೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕಟ್ಟಡ ಮಾಲೀಕರು, ನಿವಾಸಿಗಳೇ ತಮ್ಮ ಕಟ್ಟಡಗಳನ್ನು ಶಿಥಿಲ ಲಕ್ಷಣಗಳನ್ನು ಹೊಂದಿವೆಯೇ ಎಂದು ಪರೀಕ್ಷಿಸಿಕೊಳ್ಳಬಹುದಾಗಿದೆ. ಒಂದು ವೇಳೆ ಭಾಗಶಃ ಶಿಥಿಲಗೊಂಡಿದ್ದರೆ ದುರಸ್ತಿ ಮಾಡಿಸಬಹುದು.
ಪೂರ್ಣ ಪ್ರಮಾಣದಲ್ಲಿ ಶಿಥಿಲವಾಗಿದ್ದರೆ ಮಾತ್ರ ನೆಲಸಮ ಅನಿವಾರ್ಯವಾಗುತ್ತದೆ. ಸಾಮಾನ್ಯವಾಗಿ ಕಟ್ಟಡ ಶಿಥಿಲ ಪತ್ತೆಗೆ ಆರ್ಕಿಟೆಕ್ಚರ್, ಎಂಜಿನಿಯರ್ಗಳ ಮೊರೆಹೋಗಬೇಕಾಗುತ್ತದೆ. ಅಲ್ಲದೆ, ನಗರದಲ್ಲಿ ಹಲವು ಕಡೆ ಕಟ್ಟಡ ಸಾಮರ್ಥ್ಯ ಪರೀಕ್ಷಾ ಕೇಂದ್ರಗಳಿವೆ. ಜತೆಗೆ ಖಾಸಗಿ ಪ್ರಯೋಗಾಲಯಗಳಿವೆ. ಇಲ್ಲಿ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಮಣ್ಣಿನ ಸಾಮರ್ಥ್ಯ ಪರೀಕ್ಷೆ ನಡೆಸಲಾಗುತ್ತದೆ.
ಇದನ್ನೂ ಓದಿ;– ಹಾವು ಕಡಿದು ಯುವಕ ಸಾವು
ಕಟ್ಟಡ ನಿರ್ಮಾಣವಾಗಿದ್ದರೆ ಅದರ ಗೋಡೆಯ ಹೊಡೆದು ಅಲ್ಲಿನ ಮಣ್ಣು, ಸಿಮೆಂಟ್ ಪರೀಕ್ಷೆಗೊಳಪಡಿಸಲಾಗುತ್ತದೆ. ಭಾರೀ ಪ್ರಮಾಣದಲ್ಲಿ ಶಿಥಿಲಗೊಂಡ ಕಟ್ಟಡಗಳಿಗೆ ಲೋಡ್ ಬೇರಿಂಗ್ ಟೆಸ್ಟ್ ಮಾಡಲಿದ್ದು, ಅಧಿಕ ಭಾರವನ್ನು ಕಟ್ಟಡದ ಮೇಲ್ಭಾಗದಲ್ಲಿ ಹಾಕಿ ಸಾಮರ್ಥ್ಯ ಅಳೆಯವಾಗುತ್ತದೆ. ಇವುಗಳ ಹೊರತಾಗಿಗೂ ಸಾಮಾನ್ಯ ಮಾನದಂಡಗಳಿಂದ, ಯಾವುದೇ ಖರ್ಚು ಇಲ್ಲದೆ ಶಿಥಿಲ ಪತ್ತೆ ಮಾಡಿಕೊಳ್ಳಬಹುದಾಗಿದೆ.
ಯಾವ ಕಟ್ಟಡಗಳನ್ನು ಪರೀಕ್ಷೆ ಮಾಡಿಸಬೇಕು?: ಪ್ರಮುಖವಾಗಿ ಕಟ್ಟಡವು 30 ವರ್ಷ ಮೇಲ್ಪಟ್ಟಿದ್ದರೆ ಸುರಕ್ಷತೆ ದೃಷ್ಟಿಯಿಂದ ಒಮ್ಮೆ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ. ಮಣ್ಣಿನ ಕಟ್ಟಡವಾಗಿದ್ದರೆ, ಅನುಮತಿ ಪಡೆದ್ದಕ್ಕಿಂತ ಹೆಚ್ಚುವರಿ ಅಂತಸು§ ನಿರ್ಮಾಣವಾದ ಕಟ್ಟಡ, ರಾಜಕಾಲುವೆ, ಕರೆಯ ಆಸುಪಾಸಿನಲ್ಲಿರುವ ಕಟ್ಟಡ, 8-10 ವರ್ಷದಿಂದ ಸೂಕ್ತ ನಿರ್ವಹಣೆ ಇಲ್ಲದ ಕಟ್ಟಡ, ಇತ್ತೀಚೆಗೆ ಧರೆಗುರುಳಿದ ಕಟ್ಟಡದ ಆಸುಪಾಸಿನ ಕಟ್ಟಡ, ನೆರೆಯ ಕಾಮಗಾರಿಗಳಿಂದ ಹಾನಿಗೊಳಗಾಗಿರುವ ಕಟ್ಟಡಗಳು, ನೀರು ತೊಟ್ಟಿಕ್ಕುವ, ಗೋಡೆ ಬಿರುಕು ಬಿಟ್ಟಿರುವ ಕಟ್ಟಡಗಳು.
ಕಣ್ಣಳತೆಯೆ ಪರೀಕ್ಷೆಗೆ ಸೀಮಿತವಾಯಿಯೇ ಬಿಬಿಎಂಪಿ?: ಸದ್ಯ ಬಿಬಿಎಂಪಿ ಅಧಿಕಾರಿಗಳು ಶಿಥಿಲ ಕಟ್ಟಡ ಸಮೀಕ್ಷೆ ನಡೆಸುತ್ತಿದ್ದು, ಈಗಾಗಲೇ ಪ್ರಾಥಮಿಕ ಸಮೀಕ್ಷೆ ಮುಗಿದು 500ಕ್ಕೂ ಅಧಿಕ ಕಟ್ಟಡಗಳಿಗೆ ನೋಟಿಸ್ ನೀಡಲಾಗುತ್ತಿದೆ. ಆದರೆ, ಕೇವಲ ಕಟ್ಟಡ ನಿರ್ಮಾಣವಾಗಿರುವ ವರ್ಷ, ಅನುಮತಿಗಿಂತ ಅಧಿಕ ಅಂತಸ್ತು ನಿರ್ಮಿಸಿರುವ ಕಟ್ಟಡಗಳನ್ನು ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೆ, ಕಟ್ಟಡ ಸಾಮರ್ಥ್ಯ ಪರೀಕ್ಷೆಗೆ ಲೋಡ್ ಬೇರಿಂಗ್ ಟೆಸ್ಟ್ ಸೇರಿದಂತೆ ಇತರೆ ಪರೀಕ್ಷಾ ವಿಧಾನವನ್ನು ಅನುಸರಿಸುತ್ತಿಲ್ಲ. ಹೀಗಾಗಿಯೇ, ಕಳೆದ ಎರಡು ವರ್ಷದ ಹಿಂದಿನ ಸಮೀಕ್ಷೆಯಲ್ಲಿರದ ಕಟ್ಟಡಗಳು ಕುಸಿಯುತ್ತಿವೆ ಎಂದು ಆರೋಪ ಕೇಳಿಬಂದಿವೆ.
ಶಿಥಿಲಗೊಂಡ ಲಕ್ಷಣಗಳು-ಸ್ವಯಂ ಪರೀಕ್ಷೆ:-
ಪ್ರಾಥಮಿಕವಾಗಿ ಮಳೆಬಂದಾಗ ಅಥವಾ ಮಹಡಿ ಮೇಲೆ ನೀರು ನಿಂತಾಗ ಕಟ್ಟಡದ ಗೋಡೆ ಅಥವಾ ಸೀಲಿಂಗ್ನಿಂದ ನೀರು ತೊಟ್ಟಿಕ್ಕುತ್ತಿರುವುದು, ಗೋಡೆಗಳು ಬಿರುಕು ಬಿಟ್ಟಿರುವುದು, ಗೋಡೆ ವಾಲಿರುವುದು, ಫೌಂಡೇಷನ್ ಸುತ್ತ ಮಣ್ಣು ಎದ್ದಿರುವದು ಅಥವಾ ನೆಲ ಬಿರುಕಾಗಿರುವುದು, ಭಾರೀ ತೂಕದ ಸಾಮಗ್ರಿಯನ್ನು ಕಟ್ಟಡದ ಮೇಲೆ ಅಥವಾ ಒಳಗೆ ಇಟ್ಟಾಗ ಕಂಪನದ ಅನುಭವಾಗುವುದು ಶಿಥಿಲಗೊಳ್ಳುತ್ತಿರುವ ಸೂಚನೆಯಾಗಿವೆ. ಇಂತಹ ಸಮಸ್ಯೆಗಳು ಕಂಡುಬಂದರೆ ಕೂಡಲೇ ಸ್ಥಳೀಯ ಎಂಜಿನಿಯರ್ ಕರೆಸಿ ಹೆಚ್ಚುವರಿಗೆ ಪರೀಕ್ಷೆ ಅಥವಾ ದುರಸ್ತಿಗೆ ಮುಂದಾಗಬೇಕು ಎನ್ನುತ್ತಾರೆ ಬಿಬಿಎಂಪಿ ನಿವೃತ್ತ ಎಂಜಿನಿಯರ್ ಮತ್ತು ನಗರ ಯೋಜನೆ ತಜ್ಞರು.
ಅನುಮತಿ ಪಡೆದದ್ದಕ್ಕಿಂತ ಅಧಿಕ ಅಂತಸ್ತು ನಿರ್ಮಿಸಿರುತ್ತಾರೆ. ಆದರೆ, ಅಡಿಪಾಯ ಮಾತ್ರ ಒಂದು ಅಥವಾ ಎರಡು ಮಹಡಿ ಸಾಮರ್ಥಯ ಹೊಂದಿರುತ್ತದೆ. ಇಂತಹ ಕಟ್ಟಡಗಳು ಹಾನಿಗೊಳಗಾಗುತ್ತಿವೆ. ಇಂತಹ ಕಟ್ಟಡಗಳ ಮಾಲೀಕರು ಕಟ್ಟಡ ಸಾಮರ್ಥಯ ಪರೀಕ್ಷೆ ಮಾಡಿಸಿ ಅಗತ್ಯ ಕ್ರಮಕೈಗೊಳ್ಳಬೇಕು. – ಅಂಜನ್ ಸಾಯಿಪ್ರಸಾದ್, ಸ್ಟ್ರಕ್ಚರ್ ಎಂಜಿನಿಯ್, ಖಾಸಗಿ ಕಂಪನಿ
ಮುಂಜಾಗ್ರತಾ ಕ್ರಮವಾಗಿ ಮೂರ್ನಾಲ್ಕು ದಶಕದ ಹಳೆಯ ಕಟ್ಟಡಗಳು, ಶಿಥಿಲ ಲಕ್ಷಣಗಳನ್ನು ಹೊಂದಿರುವ ಕಟ್ಟಡಗಳು, ನಿರ್ವಹಣೆ ಇಲ್ಲದ ಕಟ್ಟಡಗಳು ಸ್ವಯಂ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ. ಅನುಮಾನ/ ಅಗತ್ಯವಿದ್ದರೆ ಹೆಚ್ಚುವರಿ ಪರೀಕ್ಷೆ, ದುರಸ್ತಿಗೆ ಮುಂದಾಗಬಹುದು.
– ಹನುಮಂತೇ ಗೌಡ, ಪಾಲಿಕೆ ನಿವೃತ್ತ ಎಂಜಿನಿಯರ್/ ನಗರ ಯೋಜನೆ ತಜ್ಞರು
– ●ಜಯಪ್ರಕಾಶ್ ಬಿರಾದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
MUST WATCH
ಹೊಸ ಸೇರ್ಪಡೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ