ಕಪಾಲಿ ಮೋಹನ್ ವಿರುದ್ಧಸ್ವಯಂ ಪ್ರೇರಿತ ದೂರು ದಾಖಲು
Team Udayavani, Oct 16, 2018, 1:58 PM IST
ಬೆಂಗಳೂರು: ಅಕ್ರಮ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಆರೋಪ ಹೊತ್ತಿರುವ ಸಿನಿಮಾ ನಿರ್ಮಾಪಕ ಕಪಾಲಿ ಮೋಹನ್ ವಿರುದ್ಧ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ವೈಯಾಲಿ ಕಾವಲ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.
ಸದ್ಯ ಆರೋಪಿ ಕಪಾಲಿ ಮೋಹನ್ ತಲೆಮರೆಸಿಕೊಂಡಿದ್ದು, ಈತನ ಪತ್ತೆಗಾಗಿ ಶೋಧ ನಡೆಯುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದರು. ಲೇವಾದೇವಿ ವ್ಯವಹಾರ ನಡೆಸುತ್ತಿರುವ ಕಪಾಲಿ ಮೋಹನ್, ಸಾಲದ ರೂಪದಲ್ಲಿ ಸಾರ್ವಜನಿಕರಿಗೆ ಹಣ ನೀಡಿ, ಅವರಿಂದ ಅಧಿಕ ಪ್ರಮಾಣದ ಬಡ್ಡಿ ಪಡೆಯುತ್ತಿದ್ದರು. ಭದ್ರತೆಗಾಗಿ ಖಾಲಿ ಚೆಕ್ ಮತ್ತು ಆನ್ ಡಿಮ್ಯಾಂಡ್ ಪತ್ರಗಳ ಮೇಲೆ ಹೆಚ್ಚಿನ ಮೊತ್ತದ ಹಣ ಬರೆದುಕೊಂಡು ವಂಚಿಸುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸದಾಶಿವನಗರದ ಮನೆ, ಪಿ.ಜಿ.ಹಳ್ಳಿಯಲ್ಲಿರುವ ಶ್ರೀಬಾಲಾಜಿ ಫೈನಾನ್ಸ್ಗಳ ಮೇಲೆ ಶನಿವಾರ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.
ಈತನ ಮನೆ ಮತ್ತು ಫೈನಾನ್ಸ್ನಲ್ಲಿ ಸಾರ್ವಜನಿಕರಿಂದ ಸಹಿ ಮಾಡಿಸಿರುವ ವಿವಿಧ ಬ್ಯಾಂಕಿನ ಚೆಕ್ಗಳು, ಆಸ್ತಿ ಹಾಗೂ ಇತರೆ ದಾಖಲೆಗಳು ಪತ್ತೆಯಾಗಿವೆ. ಈ ದಾಖಲೆಗಳನ್ನು ಅಡಮಾನ ಇರಿಸಿಕೊಂಡು ಮಾಸಿಕ ಶೇ.10-20ರ ಪ್ರಮಾಣದಲ್ಲಿ ಬಡ್ಡಿ ವಸೂಲಿ ಮಾಡುತ್ತಿದ್ದರು. ಈ ಮೂಲಕ
ಅಮಾಯಕ ಜನರಿಗೆ ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಕರ್ನಾಟಕ ಲೇವಾದೇವಿ ಕಾಯ್ದೆ-1961 ಮತ್ತು ದುಬಾರಿ ಬಡ್ಡಿ ನಿಯಂತ್ರಣ ಕಾಯ್ದೆ-2004ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಕಪಾಲಿ ಮೋಹನ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿಲ್ಲ. ವಂಚನೆ (420) ಪ್ರಕರಣ ದಾಖಲಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
Motivational: ಪಿಯುನಲ್ಲಿ 2 ಬಾರಿ ಫೇಲ್, ಯುಪಿಎಸ್ಸಿ ಪಾಸ್
Bike Theft: ಹಗಲಲ್ಲಿ ಫುಡ್ಡೆಲಿವರಿ ಕೆಲಸ, ರಾತ್ರಿ ಬೈಕ್ಗಳ ಕಳವು: ಆರೋಪಿ ಬಂಧನ