ದೇಶಿ ತಳಿ ಅಭಿವೃದ್ಧಿಯಿಂದ ಸ್ವಾವಲಂಬನೆ: ರಾಮಸ್ವಾಮಿ


Team Udayavani, Sep 14, 2017, 1:01 PM IST

14-BAN-1.jpg

ಬೆಂಗಳೂರು: ಸ್ವಾಭಾವಿಕವಾಗಿ ರೋಗ ನಿಯಂತ್ರಕ ಶಕ್ತಿ ಇರುವ ದೇಶೀಯ ಹಣ್ಣು ಮತ್ತು ತರಕಾರಿ ತಳಿಗಳನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಕೊಯಮತ್ತೂರಿನ ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ರಾಮಸ್ವಾಮಿ ತಿಳಿಸಿದರು. 

ನಗರದ ತೋಟಗಾರಿಕಾ ಮಹಾ ವಿದ್ಯಾಲಯದಲ್ಲಿ ಮಂಗಳವಾರ ಬಾಗಲಕೋಟೆ ತೋಟಗಾರಿಕೆ ವಿಶ್ವ ವಿದ್ಯಾಲಯ ಹಾಗೂ ಸಸ್ಯರೋಗಶಾಸ್ತ್ರ ಸೊಸೈಟಿ ಸಂಯುಕ್ತವಾಗಿ “ಹವಾಮಾನ ಬದಲಾವಣೆ ಸನ್ನಿವೇಶದಲ್ಲಿ ಸಸ್ಯ ಆರೋಗ್ಯ ನಿರ್ವಹಣೆಗೆ ಅನುಸರಿಸುತ್ತಿರುವ ಇತ್ತೀಚಿನ ವಿಧಾನಗಳು’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಸಮರ್ಪಕ ಹಣ್ಣು-ತರಕಾರಿಗಾಗಿ  ಈಗಲೂ ನಾವು ನೆರೆಯ ದೇಶಗಳನ್ನು ಅವಲಂಬಿಸಿದ್ದೇವೆ. ಹೇರಳವಾಗಿ ತರಕಾರಿ-ಹಣ್ಣು ಆಮದು ಮಾಡಿ ಕೊಳ್ಳುವುದರ ಪರಿಣಾಮ ತೈವಾನ್‌ ದೇಶದ ಒಟ್ಟಾರೆ ಆಂತರಿಕ ವೃದ್ಧಿ ದರ (ಜಿಡಿಪಿ) ಶೇ. 5ರಷ್ಟು ಹೆಚ್ಚಳವಾಗಿದೆ.
ಈ ನಿಟ್ಟಿನಲ್ಲಿ ಸ್ವಾವಲಂಬನೆ ಸಾಧಿಸುವ ಅಗತ್ಯವಿದ್ದು, ಇದಕ್ಕಾಗಿ ಸ್ವಾಭಾವಿಕ ವಾಗಿ ರೋಗಗಳನ್ನು ತಡೆದುಕೊಳ್ಳುವ
ಸಾಮರ್ಥ್ಯ ಇರುವ ದೇಶೀಯ ತಳಿಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಹೇಳಿದರು. ಅಲ್ಲದೆ, ಹಣ್ಣು ಮತ್ತು ತರಕಾರಿ ಕ್ಷೇತ್ರವು ಮುಂದುವರಿದ ತಂತ್ರಜ್ಞಾನ  ಬಳಕೆ ಮತ್ತು ಹೆಚ್ಚಿನ ಬಂಡವಾಳ ಹೂಡಿಕೆ ನಿರೀಕ್ಷೆಯಲ್ಲಿದೆ. ಸಂಶೋಧ ನೆಗೆ ಒತ್ತುಕೊಡುವ ಹಾಗೂ ಇದಕ್ಕಾಗಿ ಪ್ರತ್ಯೇಕವಾಗಿ ಹೆಚ್ಚಿನ ಅನುದಾನ ಮೀಸಲಿಡುವ ಕೆಲಸ ಆಗಬೇಕು. ಇಸ್ರೇಲ್‌, ನೆದರ್‌ಲ್ಯಾಂಡ್‌ನ‌ಂತಹ ದೇಶಗಳಲ್ಲಿ ಮಣ್ಣುರಹಿತ ಕೃಷಿ ಮಾಡುತ್ತಿದ್ದಾರೆ. ಆದರೆ, ನಮ್ಮಲ್ಲಿ ಸಾಕಷ್ಟು ಸಂಪನ್ಮೂಲವಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಅದರ ಸದ್ಬಳಕೆ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇಸ್ರೇಲ್‌, ನೆದರ್‌ಲ್ಯಾಂಡ್‌ನ‌ಂತಹ ದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಕೃಷಿ ತಂತ್ರಜ್ಞಾನಗಳ ಅಧ್ಯಯನ ಮಾಡಬೇಕು. ನಂತರ ಅದನ್ನು ನಮ್ಮಲ್ಲಿ ಅನು ಷ್ಠಾನಗೊಳಿಸಬೇಕು. ಆದರೆ, ವಿದೇಶ ಗಳ ಭೇಟಿ ಬರೀ ಪ್ರವಾಸಕ್ಕೆ ಸೀಮಿತ ವಾಗಿದೆ ಎಂದರು.

ಸುಸ್ಥಿರತೆ ಹೋಯ್ತು: ಹಿಸ್ಸಾರ್‌ ಹರಿಯಾಣ ಕೃಷಿ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ (ಸಂಶೋಧನೆ) ಡಾ.ಬಿ.ಎಲ್‌. ಜಲಾಲಿ ಮಾತನಾಡಿ, ದೇಶದಲ್ಲಿ ಒಟ್ಟಾರೆ ಕೃಷಿ ಭೂಮಿಯಲ್ಲಿ ಶೇ. 5ರಷ್ಟು ಮಾತ್ರ ಹತ್ತಿ ಬೆಳೆಯಲಾಗುತ್ತಿದೆ. ಆದರೆ, ದೇಶದಲ್ಲಿ ಬಳಕೆ ಯಾಗುವ ಒಟ್ಟಾರೆ ಕೀಟನಾಶಕದಲ್ಲಿ ಶೇ. 40ರಷ್ಟು ಹತ್ತಿಗೆ ಸಿಂಪರಣೆ ಮಾಡ ಲಾಗುತ್ತಿದೆ. ಇದು ಹಸಿರು ಕ್ರಾಂತಿಯ ಕೊಡುಗೆ ಎಂದು ಹೇಳಿದರು.

ಹಸಿರು ಕ್ರಾಂತಿಯಿಂದ ದೇಶದಲ್ಲಿ ಆಹಾರ ಉತ್ಪಾದನೆ ಪ್ರಮಾಣ ಹೆಚ್ಚಾಗಿರಬಹುದು. ಕೃಷಿಯಲ್ಲಿ ಸುಸ್ಥಿರತೆ ಕಳೆದುಹೋಗಿದೆ. ಕೀಟನಾಶಕಗಳ ಅತಿಯಾದ ಬಳಕೆಯಿಂದ ಹವಾ ಮಾನ ಬದಲಾವಣೆ, ಒಣಬೇಸಯ ಹೆಚ್ಚಾ ಯಿತು. ಇದು ಕೃಷಿ ಮೇಲೆ ಒತ್ತಡಕ್ಕೂ ಕಾರಣವಾಯಿತು ಎಂದು ಬೇಸರ ವ್ಯಕ್ತ ಪಡಿಸಿದ ಅವರು, ಶೂನ್ಯ ಬೇಸಾಯ ಪದ್ಧತಿ, ಮಲಿcಂಗ್‌ ಮತ್ತಿ ತರ ತಂತ್ರಜ್ಞಾನ ಗಳು ಹೆಚ್ಚು ಆಗ ಬೇಕು ಎಂದರು. 

ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿ ಡಾ.ಡಿ.ಎಲ್‌. ಮಹೇಶ್ವರ ಮಾತನಾಡಿ, ಮಳೆ ಮತ್ತು ವಾತಾವರಣವನ್ನು ಆಧರಿಸಿ ಯಾವ ಬೆಳೆ ಬೆಳೆಯ ಬೇಕು ಎನ್ನುವುದನ್ನು ನಿರ್ಧರಿಸು ವಂತಾಗಬೇಕು. ಈ ನಿಟ್ಟಿನಲ್ಲಿ ವಿಜ್ಞಾನಿಗಳ ಪಾತ್ರ ಬಹುಮುಖ್ಯ. ರೈತರಿಗೆ ಈ ಮಾಹಿತಿ ನೀಡುವಂತಾದರೆ, ರೈತರಿಗೆ ಆಗುತ್ತಿ ರುವ ನಷ್ಟವನ್ನು ತಗ್ಗಿಸಬಹುದು ಎಂದು ಹೇಳಿದರು.

ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಎಚ್‌. ಶಿವಣ್ಣ, ದೆಹಲಿಯ ಇಂಡಿಯನ್‌ ಫಿಟೋಪ್ಯಾಥಲಾಜಿಕಲ್‌ ಸೊಸೈಟಿ ಕಾರ್ಯದರ್ಶಿ ಡಾ.ದಿನೇಶ್‌ ಸಿಂಗ್‌ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.