Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ


Team Udayavani, May 29, 2024, 11:37 AM IST

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

ಬೆಂಗಳೂರು: ಮೊಬೈಲ್‌ ಕರೆಗಳ ವಿವರ(ಸಿಡಿಆರ್‌) ಸಂಗ್ರಹಿಸಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದ್ದ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದ ಖಾಸಗಿ ಪತ್ತೆದಾರಿ ಏಜೆನ್ಸಿಗಳ ಮೇಲೆ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳು, ಈ ಮೂರು ಎಜೆನ್ಸಿಗಳ ಮಾಲೀಕರು ಸೇರಿ 10 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ.

ಕೆಂಗೇರಿ ಉಪ ನಗರದ ಡೈಮಂಡ್‌ ಸ್ಟ್ರೀಟ್‌ ನಿವಾಸಿ ಪುರುಷೋತ್ತಮ್‌ (43), ಮಾರತ್ತಹಳ್ಳಿಯ ಜಿ.ಕೆ.ತಿಪ್ಪೇಸ್ವಾಮಿ (48), ಭಾರತ್‌ ನಗರದ ಮಹಾಂತಗೌಡ ಪಾಟೀಲ್‌ (46), ವಿಜಯನಗರದ ರೇವಂತ (25), ದಾಸನಪುರದ ಅಡಕಮಾರನಹಳ್ಳಿಯ ಗುರುಪಾದಸ್ವಾಮಿ (38), ಕೊತ್ತನೂರಿನ ರಾಜಶೇಖರ್‌ (32), ಕೊತ್ತನೂರು ದಿಣ್ಣೆ ನಿವಾಸಿ ಸತೀಶ್‌ ಕುಮಾರ್‌(39), ಜೆ.ಸಿ.ನಗರ ಕುರುಬರಹಳ್ಳಿಯ ವಿ.ಶ್ರೀನಿವಾಸ್‌(46), ಭರತ್‌(28) ಹಾಗೂ ಮಹಾರಾಷ್ಟ್ರದ ಪುಣೆ ಮೂಲದ ಪ್ರಸನ್ನ ದತ್ತಾತ್ರೇಯ ಗರುಡ(36) ಬಂಧಿತರು.

ಆರೋಪಿಗಳಿಂದ 43 ಮೊಬೈಲ್‌ ಸಂಖ್ಯೆಗಳ ಸಿಡಿಆರ್‌ ವಿವರ ಹಾಗೂ ಕೆಲ ಎಲೆಕ್ಟ್ರಾನಿಕ್‌ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದರು.

ಎಲ್ಲೆಲ್ಲಿ ದಾಳಿ?:  ಗೋವಿಂದರಾಜನಗರ ಬಳಿ ಪ್ರಶಾಂತ್‌ನಗರದಲ್ಲಿರುವ ಮಹಾನಗರಿ ಡಿಟೆಕ್ಟಿವ್‌ ಮತ್ತು ಸೆಕ್ಯೂರಿಟಿ ಸಲ್ಯೂಷನ್‌, ರಾಜಧಾನಿ ಕಾರ್ಪೋರೆಟ್‌ ಸರ್ವೀಸ್‌ ಹಾಗೂ ಬಸವೇಶ್ವರನಗರದಲ್ಲಿರುವ ಸ್ನೇಕ್‌ ಐಕ್ಯೂ ಸೆಲ್ಯೂಷನ್‌ ಪ್ರೈವೇಟ್‌ ಲಿಮಿಟೆಟ್‌ ಮತ್ತು ಎಲಿಗೆಂಟ್‌ ಡಿಟೆಕ್ಟಿವ್‌ ಏಜೆನ್ಸಿಗಳ ಮೇಲೆ ದಾಳಿ ನಡೆಸಲಾಗಿತ್ತು. ಆರೋಪಿಗಳ ಪೈಕಿ ಪುರುಷೋತ್ತಮ್‌, ರಾಜಧಾನಿ ಕಾರ್ಪೋರೆಷನ್‌ ಏಜೆನ್ಸಿ ಮಾಲೀಕನಾಗಿದ್ದು, ಸತೀಶ್‌ ಕುಆರ್‌ ಮಹಾನಗರಿ ಡಿಟೆಕ್ಟಿವ್‌ ಏಜೆನ್ಸಿ ಮತ್ತು ಶ್ರೀನಿವಾಸ ಹಾಗೂ ಭರತ್‌ ಸ್ನೇಕ್‌ ಐಕ್ಯೂ ಸೆಲ್ಯೂಷನ್‌ ಪ್ರೈವೇಟ್‌ ಲಿಮಿಟೆಟ್‌ ಮತ್ತು ಎಲಿಗೆಂಟ್‌ ಡಿಟೆಕ್ಟಿವ್‌ ಏಜೆನ್ಸಿಗಳ ಮಾಲೀಕರಾಗಿದ್ದಾರೆ. ಈ ಆರೋಪಿಗಳು ಏಜೆನ್ಸಿ ನಡೆಸಲು ಸರ್ಕಾರದಿಂದ ಯಾವುದೇ ಅನುಮತಿ ಪಡೆದಿಲ್ಲ ಎಂಬುದು ಗೊತ್ತಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಇನ್ನು ಆರೋಪಿಗಳ ಪೈಕಿ ಸತೀಶ್‌, ಈ ಹಿಂದೆ ರಾಜಧಾನಿ ಕಾರ್ಪೋರೆಷನ್‌ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ. ಕೆಲ ತಿಂಗಳ ಹಿಂದೆಯಷ್ಟೇ ಕೆಲಸ ಬಿಟ್ಟಿದ್ದ ಈತ, ಮಹಾನಗರಿ ಡಿಟೆಕ್ಟಿವ್‌ ಏಜೆನ್ಸಿ ಆರಂಭಿಸಿದ್ದ. ಜನರನ್ನು ಬ್ಲ್ಯಾಕ್‌ವೆುàಲ್‌ ಮಾಡುತ್ತಿದ್ದ ಆರೋಪದಡಿ ಈತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ದೂರುಗಳು ದಾಖಲಾಗಿವೆ ಎಂದು ಹೇಳಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಅಪರಾಧ, ಕೌಟುಂಬಿಕ ಕಲಹ, ವೈಷಮ್ಯ, ಹಣಕಾಸು ವ್ಯವಹಾರ ಸೇರಿ ಹಲವು ಬಗೆಯ ಪ್ರಕರಣಗಳ ದೂರುದಾರರು ಹಾಗೂ ಆರೋಪಿಗಳನ್ನು ಬಂಧಿತರು ಸಂಪರ್ಕಿಸುತ್ತಿದ್ದರು. ಪೊಲೀಸರು ಮಾಡುವ ಕೆಲಸಕ್ಕೆ ತಾವೇ ಮಾಡಿಕೊಡುವುದಾಗಿ ಹೇಳಿ ನಂಬಿಸುತ್ತಿದ್ದರು. ಆಂತರಿಕ ತನಿಖೆ ನಡೆಸಿ ಪುರಾವೆ ಸಮೇತ ವರದಿ ನೀಡುವುದಾಗಿ ಹೇಳುತ್ತಿದ್ದರು. ಅದಕ್ಕಾಗಿ ಶುಲ್ಕ ಸಹ ನಿಗದಿಪಡಿಸಿದ್ದರು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಗ್ರಾಹಕರ ಸೋಗಿನಲ್ಲಿ ದಾಳಿ: ಸಿಸಿಬಿ ಇನ್‌ಸ್ಪೆಕ್ಟರ್‌ ರಾಜು ನೇತೃತ್ವದ ತಂಡ ಆರೋಪಿಗಳ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ, 3 ಪ್ರತ್ಯೇಕ ತಂಡ ರಚಿಸಿಕೊಂಡು ಮೂರು ಎಜೆನ್ಸಿಗಳಮೇಲೆ ಏಕಕಾಲಕ್ಕೆ ಸಿಡಿಆರ್‌ ಬೇಕೆಂದು ಗ್ರಾಹಕರ ಸೋಗಿನಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದರು.

ಸಿಡಿಆರ್‌ ಪಡೆಯುತ್ತಿದ್ದದ್ದು ಹೇಗೆ?

ನಗರದ ಖಾಸಗಿ ಏಜೆನ್ಸಿ ಮಾಲೀಕರು ಪುಣೆಯ ಪ್ರಸನ್ನ ದತ್ತಾತ್ರೆಯ ಗರುಡನನ್ನು ಸಂಪರ್ಕಿಸಿ, ನಿರ್ದಿಷ್ಟ ಮೊಬೈಲ್‌ ನಂಬರ್‌ ನೀಡಿ, ಅದರ ಸಿಡಿಆರ್‌ ಪಡೆಯುತ್ತಿದ್ದರು. ಅದಕ್ಕಾಗಿ ಆತನಿಗೆ 7-10 ಸಾವಿರ ರೂ. ನೀಡುತ್ತಿದ್ದರು. ಆದರೆ, ಏಜೆನ್ಸಿ ಮಾಲೀಕರು ಅದನ್ನು 30-40 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. ಹೀಗೆ ಅದನ್ನು ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದ್ದ ವ್ಯಕ್ತಿ ಗಳಿಗೂ ಮಾರಾಟ ಮಾಡಿದ್ದಾರೆ. ಹೀಗಾಗಿ ಬಂಧಿ ತರ ಬ್ಯಾಂಕ್‌ ಖಾತೆಗಳ ಪರಿಶೀಲನೆ ನಡೆಯುತ್ತಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಪೊಲೀಸ್‌ ಅಧಿಕಾರಿಗಳು ಭಾಗಿ ಶಂಕೆ?:

ಯಾವುದೇ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಮೊಬೈಲ್‌ ಕರೆಗಳ ವಿವರ ಪಡೆಯಲು ಪೊಲೀಸ್‌ ಅಧಿಕಾರಿಗಳಿಗೆ ಮಾತ್ರ ಅಧಿಕಾರ ಇದೆ. ಅದರಲ್ಲೂ ಜಿಲ್ಲಾ ಮಟ್ಟದಲ್ಲಿ ಎಸ್ಪಿ ಹಾಗೂ ನಗರ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಆಯುಕ್ತರು ನೇಮಿಸಿರುವ ನೋಡಲ್‌ ಅಧಿಕಾರಿಗಳಿಗೆ (ಎಸಿಪಿ ಅಥವಾ ಡಿಸಿಪಿ) ಮಾತ್ರ ಅಧಿಕಾರ ಇದೆ. ಅವರ ಅನುಮತಿ ಪಡೆಯದೇ ಸಿಡಿಆರ್‌ ಪಡೆಯುವಂತಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಪೊಲೀಸ್‌ ಅಧಿಕಾರಿಗಳು ಶಾಮೀಲಾಗಿರುವ ಸಾಧ್ಯತೆಯಿದ್ದು, ತನಿಖೆ ನಡೆ ಯುತ್ತಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

 

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-bng

Bengaluru: ರೈಲ್ವೆ ನಿಲ್ದಾಣದಲ್ಲಿ ನಾಯಿ ಮಾಂಸ ಗಲಾಟೆ

5-bng-crime

Bengaluru: ಬಾಡಿಗೆ ಮನೆಯಲಿದ್ದ ಗೆಳತಿಯನ್ನು ಪಿಜಿಗೆ ಕರೆತಂದಿದ್ದಕ್ಕೆ ಯುವತಿ ಹತ್ಯೆ?

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.