ಹೂಡಿಕೆ ನೆಪದಲ್ಲಿ ಲಿಂಕ್‌ ಕಳುಹಿಸಿ ವಂಚನೆ


Team Udayavani, Oct 1, 2022, 2:01 PM IST

ಹೂಡಿಕೆ ನೆಪದಲ್ಲಿ ಲಿಂಕ್‌ ಕಳುಹಿಸಿ ವಂಚನೆ

ಬೆಂಗಳೂರು: ನಕಲಿ ಸಿಮ್‌ ಕಾರ್ಡ್‌ ಬಳಸಿಕೊಂಡು ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಲಿಂಕ್‌ ಕಳುಹಿಸಿ ಸಾರ್ವಜನಿಕರ ಬ್ಯಾಂಕ್‌ ಖಾತೆಗೆ ಕನ್ನ ಹಾಕುತ್ತಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೇರಳ ಕಣ್ಣೂರು ಮೂಲದ ಶಾನೀದ್‌ ಅಬ್ದುಲ್‌ ಅಮೀದ್‌ (29) ಬಂಧಿತ. ಆರೋಪಿಯಿಂದ 222 ಸಿಮ್‌ ಕಾರ್ಡ್‌, 10 ಮೊಬೈಲ್‌, 10 ಡೆಬಿಟ್‌ ಕಾರ್ಡ್‌, ಪಾಸ್‌ಬುಕ್‌, ಚೆಕ್‌ಬುಕ್‌ ಜಪ್ತಿ ಮಾಡಲಾಗಿದೆ. ತಲೆಮರೆಸಿಕೊಂಡಿರುವ ಶಾನೀದ್‌ ಸ್ನೇಹಿತ ಮೊಹಮ್ಮದ್‌ ನಿಹಾಲ್‌ ಹಾಗೂ ಇತರರು ದುಬೈನಲ್ಲಿರುವ ಸುಳಿವು ಸಿಕ್ಕಿದ್ದು, ಇವರಿಗೆ ಪೊಲೀಸರು ನೋಟಿಸ್‌ ಕಳುಹಿಸಲು ಸಿದ್ಧತೆ ನಡೆಸಿದ್ದಾರೆ.

ಪ್ರಕರಣದ ವಿವರ: ಆರೋಪಿಯು ಕೆಲ ಟೆಲಿಗ್ರಾಂ ಗ್ರೂಪ್‌ ರಚಿಸಿಕೊಂಡಿದ್ದ. ಆ ಗ್ರೂಪ್‌ನಲ್ಲಿದ್ದ ಶಾನೀದ್‌ನ ಪರಿಚಿತ ಕೆಲ ವ್ಯಕ್ತಿಗಳು ನಕಲಿ ಸಿಮ್‌ ಕಾರ್ಡ್‌ ಹಾಗೂ ನಕಲಿ ಬ್ಯಾಂಕ್‌ ಖಾತೆಗಳ ಮಾಹಿತಿಯನ್ನು ಕೊರಿಯರ್‌ ಮೂಲಕ ಆತನಿಗೆ ಕಳುಹಿಸುತ್ತಿದ್ದರು. ಸ್ನೇಹಿತ ನಿಹಾಲ್‌ ಜತೆ ಸೇರಿಕೊಂಡು ಆರೋಪಿಯು ಈ ನಕಲಿ ಸಿಮ್‌ ಹಾಗೂ ಬ್ಯಾಂಕ್‌ ಖಾತೆ ಬಳಸಿಕೊಂಡು ಸಾರ್ವಜನಿಕರಿಗೆ ಲಿಂಕ್‌ ಕಳುಹಿಸುತ್ತಿದ್ದ. ಜತೆಗೆ, ಕ್ರಿಪ್ಟೋ ಕರೆನ್ಸಿ ಬಗ್ಗೆ ಮಾಹಿತಿಗಳನ್ನು ಶೇರ್‌ ಮಾಡುವುದು, ಇದರಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಬರಲಿದೆ ಎಂದು ನಂಬಿಸಿ ಸಾರ್ವಜನಿಕರನ್ನು ತನ್ನತ್ತ ಸೆಳೆಯಲು ಹಲವಾರು ಮೆಸೇಜ್‌ಗಳನ್ನು ಪೋಸ್ಟ್‌ ಮಾಡುತ್ತಿದ್ದ.

ಟ್ರೇಡಿಂಗ್‌ ನಡೆಸಲು ಲಿಂಕ್‌ ಕ್ಲಿಕ್‌ ಮಾಡಬೇಕು ಎಂದು ಒಂದು ಲಿಂಕ್‌ ಅನ್ನೂ ಕಳುಹಿಸುತ್ತಿದ್ದ. ಲಿಂಕ್‌ ಅನ್ನು ಕ್ಲಿಕ್‌ ಮಾಡಿದರೆ ಸಾರ್ವಜನಿಕರ ಬ್ಯಾಂಕ್‌ ಖಾತೆ ವಿವರ, ಮೊಬೈಲ್‌ ನಂಬರ್‌ ಸೇರಿ ಎಲ್ಲ ಮಾಹಿತಿಗಳೂ ಆತನಿಗೆ ಸಿಗುತ್ತಿದ್ದವು. ಕೂಡಲೇ ಆ ಮಾಹಿತಿ ಬಳಿಸಿಕೊಂಡು ಬ್ಯಾಂಕ್‌ ಖಾತೆಗೆ ಕನ್ನ ಹಾಕುತ್ತಿದ್ದ. ವಂಚನೆಗೊಳಗಾದವರು ಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಾಂತ್ರಿಕ ಕಾರ್ಯಾಚರಣೆ ನಡೆಸಿದಾಗ ಆರೋಪಿ ಶಾನೀದ್‌ನ ಸುಳಿವು ಸಿಕ್ಕಿತ್ತು. ಶಾನೀದ್‌ನ ಮನೆಗೆ ತೆರಳಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ದುಬೈನಲ್ಲಿ ಕಿಂಗ್‌ಪಿನ್‌? : ಪ್ರಕರಣದ ಕಿಂಗ್‌ಪಿನ್‌ ದುಬೈನಲ್ಲಿ ತಲೆಮರೆಸಿಕೊಂಡಿರುವ ಸುಳಿವು ಸಿಕ್ಕಿದೆ. ಈ ಗ್ಯಾಂಗ್‌ನ ಸದಸ್ಯರು ದುಬೈನಲ್ಲಿ ಕುಳಿತುಕೊಂಡೇ ಶಾನೀದ್‌ನನ್ನು ಬಳಸಿಕೊಂಡು ಕೃತ್ಯ ಎಸಗುತ್ತಿದ್ದರು ಎಂದು ಹೇಳಲಾಗುತ್ತಿದೆ. ಆರೋಪಿಗಳು ಒಟ್ಟು 3 ಪ್ರತ್ಯೇಕ ಗಂಪು ರಚಿಸಿಕೊಂಡು ಸೈಬರ್‌ ಅಪರಾಧಗಳಲ್ಲಿ ತೊಡಗಿಸಿಕೊಂಡು, ನೂರಾರು ಮಂದಿಗೆ ಲಕ್ಷಾಂತರ ರೂ. ವಂಚಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕೆಲಸ ಕೊಡಿಸುವುದು, ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಮಾಡಬಹುದಾದದ ನಕಲಿ ಸ್ಕೀಂಗಳು, ಕಡಿಮೆ ಬೆಲೆಗೆ ಕೆಲ ವಸ್ತುಗಳನ್ನು ಕೊಡುವುದಾಗಿ ಅಂತರ್ಜಾಲದ ಕೆಲ ವೆಬ್‌ಸೈಟ್‌ಗಳಲ್ಲಿ ಸುಳ್ಳು ಮಾಹಿತಿ ಹಾಕುತ್ತಿದ್ದರು. ಇದನ್ನು ನಂಬಿ ಸಾರ್ವಜನಿಕರು ಇವರನ್ನು ಸಂಪರ್ಕಿಸಿದರೆ ಲಿಂಕ್‌ ಕಳುಹಿಸಿ ಬ್ಯಾಂಕ್‌ ಖಾತೆಗೆ ಕನ್ನ ಹಾಕುವುದು, ತಮ್ಮ ಖಾತೆಗೆ ಮುಂಗಡ ಹಣ ಜಮೆ ಮಾಡುವಂತೆ ಹೇಳಿ ವಂಚಿಸುವ ಕೃತ್ಯ ಎಸಗುತ್ತಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ

ಟಾಪ್ ನ್ಯೂಸ್

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.