ಕೆಎಸ್ಆರ್ಟಿಸಿಯಿಂದ ಹಿರಿಯ ನಾಗರಿಕರ ವಿಶೇಷ ಗುರುತಿನ ಚೀಟಿ ಸ್ಥಗಿತ
Team Udayavani, Jan 23, 2018, 6:10 AM IST
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ದಿಂದ ಈ ಮೊದಲು ವಿತರಿಸಲಾಗುತ್ತಿದ್ದ ಹಿರಿಯ ನಾಗರಿಕರ ವಿಶೇಷ ಗುರುತಿನ ಚೀಟಿಯನ್ನು ಈಗ ಸ್ಥಗಿತಗೊಳಿಸಲಾಗಿದೆ. ಇದಕ್ಕೆ ಬದಲಾಗಿ ಸರ್ಕಾರ ದಿಂದ ನೀಡಲಾಗಿರುವ ಯಾವುದಾದರೂ ಗುರುತಿನ ಚೀಟಿ ತೋರಿಸಿ ಫಲಾನುಭವಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಅದರಂತೆ 60 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟವರು ಕೆಳಕಂಡ ಯಾವುದಾದರೂ ಒಂದು ಮೂಲ ಗುರುತಿನ ಚೀಟಿ ತೋರಿಸಿ, ಪ್ರಯಾಣ ದರದಲ್ಲಿ ಶೇ.25ರಷ್ಟು ರಿಯಾಯ್ತಿ ಪಡೆಯಬಹುದು. ಪಾಸ್ಪೋರ್ಟ್,ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್,ಚಾಲನಾ ಪರವಾನಗಿ (ಡ್ರೆ„ವಿಂಗ್ ಲೈಸೆನ್ಸ್), ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯ ಗುರುತಿನ ಚೀಟಿ, ಸರ್ಕಾರದ ಯಾವುದೇ ಇಲಾಖೆಯಿಂದ ಅಥವಾ ಸಾರ್ವಜನಿಕ ವಲಯದ ಘಟಕ/ ಸಂಸ್ಥೆ
(ಪಿಎಸ್ಯು)ಯಿಂದ ವಿತರಿಸಿರುವ ಹುಟ್ಟಿದ ದಿನಾಂಕ, ವರ್ಷ ನಮೂದಿಸಿರುವ ಗುರುತಿನ ಚೀಟಿ,ಸರ್ಕಾರದ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ನಿರ್ದೇಶನಾಲಯದವರು ವಿತರಿಸಿರುವ ಭಾವಚಿತ್ರವಿ ರುವ ಗುರುತಿನ ಚೀಟಿ(60 ವರ್ಷ ಮೇಲ್ಪಟ್ಟ), ನಿಗಮದವತಿಯಿಂದ ವಿತರಿಸಿರುವ ಹಿರಿಯ ನಾಗರಿಕರ ಗುರುತಿನ ಚೀಟಿಯನ್ನು ತೋರಿಸಿ ಈ ಸೌಲಭ್ಯ ಪಡೆಯಬಹುದು ಎಂದು ಕೆಎಸ್ ಆರ್ಟಿಸಿ ಪ್ರಕಟಣೆ ತಿಳಿಸಿದೆ.
ಹಿರಿಯ ನಾಗರಿಕರಿಗಾಗಿ ನಿಗಮವು ನಗರ, ಹೊರ ವಲಯ, ಸಾಮಾನ್ಯ, ವೇಗದೂತ,ಅರೆ ಸುವಿಹಾರಿ ಮತ್ತು ರಾಜಹಂಸ ಬಸ್ಸುಗಳಲ್ಲಿ 60 ವರ್ಷ ಮೇಲ್ಪಟ್ಟ ಹಾಗೂ ಅದಕ್ಕೂ ಹೆಚ್ಚಿನ ವಯಸ್ಸಿನ ಕರ್ನಾಟಕ ರಾಜ್ಯದ ಹಿರಿಯ ನಾಗರಿಕರಿಗೆ ಟಿಕೆಟ್ ಪ್ರಯಾಣ ದರದಲ್ಲಿ ಶೇ.25ರಷ್ಟು ರಿಯಾಯಿತಿ ಸೌಲಭ್ಯ ಒದಗಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್