ಪ್ರತ್ಯೇಕ ಪ್ರಕರಣ: ಪರಿಚಿತರಿಂದಲೇ ಇಬ್ಬರ ಕೊಲೆ


Team Udayavani, Apr 4, 2019, 3:00 AM IST

pratyeka

ಬೆಂಗಳೂರು: ಮನೆಗಳವು, ಡಕಾಯಿತಿ ಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆಗೈದು ಪರಾರಿಯಾದ ಘಟನೆ ರಾಜಗೋಪಾಲನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಅನ್ನಪೂರ್ಣೇಶ್ವರಿನಗರದ 2ನೇ ಮುಖ್ಯರಸ್ತೆಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಹೆಗ್ಗನಹಳ್ಳಿ ನಿವಾಸಿ ವಿನೋದ ಅಲಿಯಾಸ್‌ ನರಸಿಂಹಮೂರ್ತಿ ಅಲಿಯಾಸ್‌ ಚೌಕಿ ನರಸಿಂಹ (25) ಕೊಲೆಯಾದವ. ಮಂಗಳವಾರ ತಡರಾತ್ರಿ 12.30ರ ಸುಮಾರಿಗೆ ನಂದಿನಿ ಲೇಔಟ್‌ನ ಬಾರ್‌ ಒಂದರಲ್ಲಿ ಸ್ನೇಹಿತರೊಂದಿಗೆ ಮದ್ಯ ಸೇವಿಸಿದ ನರಸಿಂಹ, ಅನ್ನಪೂರ್ಣೇಶ್ವರಿನಗರದ 2ನೇ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ.

ಇದೇ ವೇಳೆ ಮೂರು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ನರಸಿಂಹನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಆತನ ಹೊಟ್ಟೆ, ಕುತ್ತಿಗೆ ಭಾಗಕ್ಕೆ ಇರಿದು ಕೊಂದಿದ್ದಾರೆ ಎಂದು ಪೊಲೀಸರು ಹೇಳಿದರು.

ರಸ್ತೆ ಬದಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ನರಸಿಂಹನನ್ನು ಗಮನಿಸಿದ ಸಾರ್ವಜನಿಕರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ರಾಜಗೋಪಾಲನಗರ ಠಾಣೆ ಪೊಲೀಸರು, ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿಸಿದ್ದಾರೆ.

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪರಿಚಯಸ್ಥರೇ ಕೊಲೆ ಮಾಡಿರುವ ಬಗ್ಗೆ ಸುಳಿವು ದೊರಕಿದೆ. ನರಸಿಂಹನ ವಿರುದ್ಧ 2018ರಲ್ಲಿ ರಾಜಗೋಪಾಲನಗರ ಸೇರಿ ಕೆಲ ಪೊಲೀಸ್‌ ಠಾಣೆಗಳಲ್ಲಿ ಡಕಾಯಿತಿ ಯತ್ನ ಪ್ರಕರಣ ದಾಖಲಾಗಿದೆ. ಜತೆಗೆ ನೆರೆ ಜಿಲ್ಲೆಗಳಲ್ಲೂ ಆತನ ವಿರುದ್ಧ ಕಳವು, ಡರೋಡೆ ಪ್ರಕರಣಗಳು ದಾಖಲಾಗಿರುವ ಮಾಹಿತಿಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೈಕ್‌ ವಾಪಸ್‌ ಕೊಡದಿದ್ದಕ್ಕೆ ಕೊಲೆ: ವೃತ್ತಿಯಲ್ಲಿ ಕ್ಯಾಬ್‌ ಚಾಲಕನಾಗಿರುವ ನರಸಿಂಹ ಆಗಾಗ ಪರಿಚಿತರು ಹಾಗೂ ಸ್ನೇಹಿತರ ಬೈಕ್‌ ಕೊಂಡೊಯ್ಯುತ್ತಿದ್ದ. ಆದರೆ, ಹೇಳಿದ ಸಮಯಕ್ಕೆ ವಾಪಸ್‌ ನೀಡುತ್ತಿರಲಿಲ್ಲ. ಆ ಬೈಕ್‌ಗಳಲ್ಲೇ ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದ. ಇದೇ ವಿಚಾರಕ್ಕೆ ಸ್ನೇಹಿತರು ಹಾಗೂ ನರಸಿಂಹನ ನಡುವೆ ಗಲಾಟೆ ನಡೆಯುತ್ತಿತ್ತು.

ಇದೇ ಕಾರಣಕ್ಕೆ ಮಂಗಳವಾರ ರಾತ್ರಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ಪೊಲೀಸರು ಹೇಳಿದರು.

ಚಿಲ್ಲರೆ ವಿಚಾರಕ್ಕೆ ಸ್ನೇಹಿತನ ಕೊಲೆ: ಮತ್ತೂಂದು ಪ್ರಕರಣದಲ್ಲಿ ಮದ್ಯ ಖರೀದಿಸಿ ಬಳಿಕ ಬಾಕಿ ಉಳಿದ ಚಿಲ್ಲರೆ ವಿಷಯಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ವಿದ್ಯಾರಣ್ಯಪುರ ಠಾಣೆ ವ್ಯಾಪ್ತಿಯ ರಾಮಚಂದ್ರಪುರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ರಾಮಚಂದ್ರಪುರ ನಿವಾಸಿ ದೇವಿಪ್ರಸಾದ್‌ ಅಲಿಯಾಸ್‌ ಪ್ರತಾಪ್‌ (36) ಕೊಲೆಯಾದವ. ಘಟನೆ ಸಂಬಂಧ ಪ್ರತಾಪ್‌ ಸ್ನೇಹಿತ ಶ್ರೀನಿವಾಸಮೂರ್ತಿ ಅಲಿಯಾಸ್‌ ಚಿನ್ನು (32) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಬಾರ್‌ಬೆಂಡಿಂಗ್‌ ಕೆಲಸ ಮಾಡುತ್ತಿದ್ದ ಪ್ರತಾಪ್‌ ಹಾಗೂ ಪೇಟಿಂಗ್‌ ಕೆಲಸ ಮಾಡುವ ಶ್ರೀನಿವಾಸ ಮೂರ್ತಿ ಕಳೆದ ಹತ್ತು ವರ್ಷಗಳಿಂದ ಸ್ನೇಹಿತರು. ಏ.1ರಂದು ಇಬ್ಬರೂ ಕೆಲಸಕ್ಕೆ ರಜೆ ಹಾಕಿದ್ದು, ಮದ್ಯ ಸೇವಿಸಲು ನಿರ್ಧರಿಸಿದ್ದರು. ಹೀಗಾಗಿ ಶ್ರೀನಿವಾಸಮೂರ್ತಿ, ಪ್ರತಾಪ್‌ಗೆ 500 ರೂ. ಕೊಟ್ಟು ಬಿಯರ್‌ ತರುವಂತೆ ಸೂಚಿಸಿದ್ದ. ಅದರಂತೆ ಪ್ರತಾಪ್‌ ಬಿಯರ್‌ ತಂದು ಆತನಿಗೆ ಕೊಟ್ಟಿದ್ದಾನೆ. ನಂತರ ಇಬ್ಬರೂ ಬಿಯರ್‌ ಕುಡಿದಿದ್ದಾರೆ.

ಈ ವೇಳೆ ಉಳಿದ ಚಿಲ್ಲರೆ ಹಣ ಕೊಡುವಂತೆ ಶ್ರೀನಿವಾಸಮೂರ್ತಿ ಕೇಳಿದಾಗ, ಚಿಲ್ಲರೆ ಉಳಿದಿಲ್ಲ ಎಂದು ಪ್ರತಾಪ್‌ ಹೇಳಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದ್ದು, ವಿಕೋಪಕ್ಕೆ ಹೋದಾಗ ಪ್ರತಾಪ್‌ ಮುಖಕ್ಕೆ ಶ್ರೀನಿವಾಸಮೂರ್ತಿ ದೊಣ್ಣೆಯಿಂದ ಹೊಡೆದಿದ್ದಾನೆ. ಪರಿಣಾಮ ಪ್ರತಾಪ್‌ ಮೂಗಿನಲ್ಲಿ ರಕ್ತ ಬಂದಿದೆ. ಇದರಿಂದ ಆತಂಕಗೊಂಡ ಶ್ರೀನಿವಾಸಮೂರ್ತಿ ಸ್ಥಳೀಯರ ಸಹಾಯದಿಂದ ಪ್ರತಾಪ್‌ನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ ಎಂದು ಪೊಲೀಸರು ಹೇಳಿದರು.

ಮೊದಲೇ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರತಾಪ್‌ಗೆ ಆಗಾಗ ಮೂಗಿನಿಂದ ರಕ್ತ ಸುರಿಯುತ್ತಿತ್ತು. ಘಟನೆಯಲ್ಲಿ ಪ್ರತಾಪ್‌ ಮೂಗಿಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫ‌ಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.