ತುಳು ಕೂಟಕ್ಕೆ ಪ್ರತ್ಯೇಕ ಜಮೀನು


Team Udayavani, Oct 21, 2019, 3:06 AM IST

tulu

ಬೆಂಗಳೂರು: ತುಳು ಕೂಟಕ್ಕೆ ರಾಜಧಾನಿಯಲ್ಲಿ ಪ್ರತ್ಯೇಕ ಜಾಗದ ವ್ಯವಸ್ಥೆ ಮಾಡಿಕೊಡುವ ನಿಟ್ಟಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜತೆ ಮಾತುಕತೆ ನಡೆಸುವುದಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭರವಸೆ ನೀಡಿದರು.

ನಗರದ ಗುರುರಾಜ ಕಲ್ಯಾಣ ಮಂಟಪದಲ್ಲಿ ತುಳುಕೂಟ ಬೆಂಗಳೂರು ಆಯೋಜಿಸಿದ್ದ ಹೊಸ ಅಕ್ಕಿ (ಪುದ್ದಾರ್‌) ಊಟ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಧಾನಿಯಲ್ಲಿ ಪ್ರತ್ಯೇಕ ಜಾಗಕ್ಕಾಗಿ ತುಳುಕೂಟ ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದೆ. ಈ ಪ್ರಸ್ತಾವನೆಯ ಈಡೇರಿಸುವ ಸಂಬಂಧ ಬಿಡಿಎ ಅಧಿಕಾರಿಗಳ ಜತೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

ಪ್ರತಿವರ್ಷ ಹೊಸ ಬೆಳೆಯ ಅಕ್ಕಿಯನ್ನು ಸಂಭ್ರಮದಿಂದ ಊಟ ಮಾಡುವ ಸಂಪ್ರದಾಯ ತುಳುನಾಡಿನಲ್ಲಿದೆ. ಸಾಮರಸ್ಯದ ಕೊರತೆಯಿರುವ ಈ ಕಾಲದಲ್ಲಿ, ಸಾಮರಸ್ಯವನ್ನು ಹೆಚ್ಚಿಸುವಂತ ಆಚರಣೆ ಪುದ್ದಾರ್‌ ವಣಸ್‌ ಎಂದು ಬಣ್ಣಿಸಿದರು.

ಚಿಕ್ಕವರಿದ್ದಾಗ ನಮ್ಮೂರಿನಲ್ಲಿ ದಿನಕ್ಕೊಂದು ಮನಗೆ ತೆರಳಿ ಪುದ್ದಾರ್‌ ವಣಸ್‌ ಸಂಭ್ರಮಿಸುತ್ತಿದ್ದೇವು. ಕಾಲ ಕಳೆದಂತೆಲ್ಲ ಈ ಸಂಪ್ರದಾಯ ಮರೆಯಾಗುತ್ತಿದೆ. ಊರಿನಲ್ಲಿ ಬೇರೆ ಬೇರೆ ಜಾತಿಯವರಾಗಿದ್ದರೂ ಬೆಂಗಳೂರಿನಲ್ಲಿ ತುಳುವರು, ಕರಾವಳಿಯವರು ಎಂದು ಒಂದೇ ಭಾವನೆಯಿಂದ ನಮ್ಮ ಸಂಸ್ಕೃತಿಯನ್ನು ಯುವಜನತೆ ಜತೆಗೆ ಬೆಂಗಳೂರಿಗರಿಗೂ ಪರಿಚಯಿಸುತ್ತಿರುವುದು ಸಂತಸ ಎಂದು ಹೇಳಿದರು.

ಭಾರತದ ಮೇಲೆ ವಿದೇಶಿಗರ ದಾಳಿ ಅನೇಕ ಬಾರಿ ನಡೆದಿದ್ದರೂ ಭಾರತ ಇಂದಿಗೂ ವಿಶ್ವದಲ್ಲಿ ತನ್ನ ತನವನ್ನು ಉಳಿಸಿಕೊಂಡಿದೆ. ಇದಕ್ಕೆ ನಮ್ಮಲ್ಲಿರುವ ನೂರಾರು ವಿಭಿನ್ನ ಸಾಂಸ್ಕೃತಿಕ ಆಚರಣೆಗಳು ಕಾರಣ, ಇದುವೇ ನಮ್ಮ ಸಂಸ್ಕೃತಿಯ ಶ್ರೀಮಂತಿಕೆ ಎಂದರು.

ತುಳು ಧಾರ್ಮಿಕ ಚಿಂತಕ ಪಿ.ಕೆ.ಸದಾನಂದ ಮಾತನಾಡಿ, ತುಳುನಾಡ ಸಂಪ್ರದಾಯ, ಆಚರಣೆಗಳನ್ನು ಇಂತಹ ಕಾರ್ಯಕ್ರಮದ ಮೂಲಕ ಯುವ ಜನತೆಗೆ ಪರಿಚಯಿಸಿದಾಗ ಮಾತ್ರ ಪೂರ್ವಿಕರ ಕಷ್ಟಗಳು ಅವರಿಗೆ ಅರಿವಾಗುತ್ತದೆ. ತುಳು ಕೂಟ ಈ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ ಎಂದು ಹೇಳಿದರು.

ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ.ಪದ್ಮರಾಜ ಅಜಿಲ ಮಾತನಾಡಿ, ಇದೊಂದು ಭೋಜನದ ಸಮಾರಂಭ ಮಾತ್ರವಲ್ಲ, ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಆಚರಣೆಯಾಗಿದೆ. ಪರ ಊರಿಗೆ ತುಳುನಾಡಿ ಸಂಸ್ಕೃತಿ, ಸಂಪ್ರದಾಯ ಪರಿಚಯಿಸುವ ಕಾರ್ಯ ಕೂಡ ಹೌದು ಎಂದರು.

ಕ್ರೀಡೆಯಲ್ಲಿ ಸಾಧನೆಗೈದ ಮುಕ್ತ ಉದಯರಾಜ್‌ ಶೆಟ್ಟಿ, ಸುಕೇಶ ಅಮೀನ್‌ ಹಾಗೂ ಕವಿ ಶಾಂತರಾಮ್‌ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ತುಳುಕೂಟ ಅಧ್ಯಕ್ಷ ಬಿ.ದಿನೇಶ್‌ ಹೆಗ್ಡೆ, ಬಂಟರ ಸಂಘದ ಅಧ್ಯಕ್ಷ ಆರ್‌.ಉಪೇಂದ್ರ ಶೆಟ್ಟಿ, ಗೋಕುಲ್‌ದಾಸ್‌ ಎಕ್ಸ್‌ಪೋರ್ಟ್‌ನ ಮುಖ್ಯಸ್ಥ ಲಕ್ಷ್ಮಣ ಪೂಜಾರಿ, ಬೆಂಗಳೂರು ಹೊಟೇಲ್‌ ಮಾಲಿಕರ ಸಂಘದ ಜಂಟಿ ಕಾರ್ಯದರ್ಶಿ ಚಂದ್ರಹಾಸ್‌ ಎಸ್‌., ತುಳುಕೂಟದ ಗೌರವಾಧ್ಯಕ್ಷ ರಾಜೇಂದ್ರ ಕುಮಾರ್‌ ಮೊದಲಾದವರು ಇದ್ದರು.

ಹೊಸ ಅಕ್ಕಿ ಊಟ: ಈ ಸಾಲಿನ ಹೊಸ ಪೈರಿನಿಂದ ಅನ್ನ ತಯಾರಿಸಿ, ತುಳುನಾಡಿ ಬಗೆ ಬಗೆಯ ಹಸಿ ತರಕಾರಿಗಳನ್ನು ತಂದು ಹತ್ತಾರು ಬಗೆಯ ಖಾದ್ಯಗಳನ್ನು ಸಿದ್ಧಪಡಿಸಿ, ಕಾರ್ಯಕ್ರಮಕ್ಕೆ ಬಂದವರಿಗೆ ಉಣಬಡಿಸುವ ಸಂಪ್ರಾಯವೇ ಹೊಸ ಅಕ್ಕಿ ಊಟ. ಉಪ್ಪಿನಕಾಯಿ ಸಹಿತವಾಗಿ ನಾಲ್ಕೈದು ಬಗೆಯ ಪಲ್ಯ, ಮೂರ್‍ನಾಲ್ಕು ಬಗೆಯ ಸಾಂಬಾರು, ಸಿಹಿ ಪಾಯಸ, ಕಡಬು, ವಿವಿಧ ಬಗೆಯ ಚೆಟ್ನಿ ಹೊಸ ಅಕ್ಕಿ ಊಟದ ವಿಶೇಷವಾಗಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.