ಬ್ಯಾಂಕಿಂಗ್‌ ಸೌಲಭ್ಯಗಳಿಲ್ಲದ ಗ್ರಾಪಂಗಳಲ್ಲಿ “ಸೇವಾ ಕೇಂದ್ರ’


Team Udayavani, Aug 13, 2018, 6:15 AM IST

grama13136.jpg

ಬೆಂಗಳೂರು: ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬ್ಯಾಂಕಿಂಗ್‌ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಬ್ಯಾಂಕಿಂಗ್‌ ವಲಯ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಜತೆಗೂಡಿ  ಬ್ಯಾಂಕಿಂಗ್‌ ಸೌಲಭ್ಯ ಇಲ್ಲದ ಗ್ರಾಮ ಪಂಚಾಯಿತಿಗಳಲ್ಲಿ “ಸೇವಾ ಕೇಂದ್ರ’ ತೆರೆಯಲು ಯೋಜನೆ ರೂಪಿಸಲಾಗಿದೆ.

ಈ ಸೇವಾ ಕೇಂದ್ರಗಳಲ್ಲಿ ಸಣ್ಣ ಪ್ರಮಾಣದ ಮತ್ತು ತೀರಾ ಪ್ರಾಥಮಿಕ ಹಂತದ ಸೇವೆಗಳು ಲಭ್ಯವಾಗಲಿವೆ. ಉದಾಹರಣೆಗೆ, ಈ ಸೇವಾ ಕೇಂದ್ರಗಳಲ್ಲಿ ಗ್ರಾಮೀಣ ಭಾಗದ ಜನರು ಬ್ಯಾಂಕಿಗೆ ಹಣ ಜಮೆ ಮಾಡುವ, ಹಣ ಡ್ರಾ ಮಾಡಿಕೊಳ್ಳುವ ಮತ್ತು ಸಾಲ ಹಾಗೂ ಇತರೆ ಬ್ಯಾಂಕಿಂಗ್‌ ಸೌಲಭ್ಯಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು.

ಬ್ಯಾಂಕಿಂಗ್‌ ಸೌಲಭ್ಯ ಇಲ್ಲದ ಗ್ರಾಮ ಪಂಚಾಯಿತಿಗಳಲ್ಲಿ ಸೇವಾ ಕೇಂದ್ರ ತೆರಯುವ ಮೂಲಕ ಬ್ಯಾಂಕು ಸೇವೆಗಳಿಂದ ವಂಚಿತರಾಗಿರುವ ಗ್ರಾಮೀಣ ಭಾಗದ ಜನರಿಗೆ ಅವರ ಹಳ್ಳಿಗಳಲ್ಲೇ ಸಣ್ಣ ಪ್ರಮಾಣದ ಬ್ಯಾಂಕಿಂಗ್‌ ಸೇವೆ ಒದಗಿಸಲು  “ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿ’ (ಎಸ್‌ಎಲ್‌ಬಿಸಿ) ತೀರ್ಮಾನಿಸಿ, ಅದರಂತೆ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಸ್ಥಳಾವಕಾಶ ಒದಗಿಸುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಮನವಿ ಮಾಡಿದೆ.

ಇದಕ್ಕೆ ಸ್ಪಂದಿಸಿ  “ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಸಣ್ಣ ಪ್ರಮಾಣದ ಬ್ಯಾಂಕಿಂಗ್‌ ಸೇವೆಗಳನ್ನು ತಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಒದಗಿಸುವ ನಿಟ್ಟಿನಲ್ಲಿ, ಈ ಸೇವೆಗಳನ್ನು ಒದಗಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಬ್ಯಾಂಕುಗಳಿಗೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸೂಕ್ತ ಸ್ಥಳ ಹಾಗೂ ಅಗತ್ಯ ಕನಿಷ್ಟ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಎಲ್ಲ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಸಾರ್ವಜನಿಕರು ಸಣ್ಣ ಪ್ರಮಾಣದ ಬ್ಯಾಂಕ್‌ ವ್ಯವಹಾರಗಳಿಗೆ ನಗರಗ ಪ್ರದೇಶಗಳಲ್ಲಿರುವ ಬ್ಯಾಂಕುಗಳಿಗೆ ಭೇಟಿ ನೀಡದೆ “ಮೈಕ್ರೋ ಎಟಿಂ’ ತಂತ್ರಜ್ಞಾನದ ಮೂಲಕ ತಮ್ಮ ಗ್ರಾಮಗಳಲ್ಲಿಯೇ ಬ್ಯಾಂಕಿಂಗ್‌ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ. ಈ ಸೇವೆಯನ್ನು ಬ್ಯಾಂಕುಗಳು ಗ್ರಾಮ ಮಟ್ಟದಲ್ಲಿ ಒದಗಿಸುತ್ತಿದ್ದು, ಇದಕ್ಕಾಗಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸ್ಥಳಾವಕಾಶ ಕಲ್ಪಿಸಲು ಬ್ಯಾಂಕರುಗಳ ಸಮಿತಿ ಮನವಿ ಮಾಡಿತ್ತು. ಅದರಂತೆ, ಬ್ಯಾಂಕಿಂಗ್‌ ಸೇವೆ ಇಲ್ಲದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ, ಆಯಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸ್ಥಳಾವಕಾಶ ನೀಡಲು ಗ್ರಾಮೀಣಾಭಿವೃದ್ದಿ ಇಲಾಖೆ ಮುಂದಾಗಿದೆ. ಸ್ಥಳಾವಕಾಶ ಲಭ್ಯವಾಗುವ ಎಲ್ಲ ಕಡೆಗಳಲ್ಲಿ ಸೇವಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಬ್ಯಾಂಕರುಗಳ ಸಮಿತಿಯ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

2 ಸಾವಿರ ಕೇಂದ್ರಗಳು?
ಎಲ್ಲ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬ್ಯಾಂಕ್‌ ಸೌಲಭ್ಯ ಸಿಗುವಂತಾಗಬೇಕು ಅನ್ನುವುದು ಸರ್ಕಾರದ ಉದ್ದೇಶ. ಆದರೆ, ಅನೇಕ ಕಡೆ ಬ್ಯಾಂಕಿಂಗ್‌ ಸೌಲಭ್ಯ ಇಲ್ಲ. ಹಾಗಾಂತ ಬ್ಯಾಂಕುಗಳಿಲ್ಲದ ಎಲ್ಲ ಗ್ರಾಮಗಳಲ್ಲಿ ಅಥವಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಬ್ಯಾಂಕು ತೆರೆಯಲು ಸಾಧ್ಯವಾಗುವುದಿಲ್ಲ. ಹಾಗಾಗಿ, ಬ್ಯಾಂಕಿಂಗ್‌ ಸೇವೆಗಳ ಲಭ್ಯವಿಲ್ಲದ ಗ್ರಾಮಗಳಲ್ಲಿ ಸೇವಾ ಕೇಂದ್ರ ಅಥವಾ ವಿಸ್ತರಣಾ ಕೇಂದ್ರಗಳ ಮೂಲಕ ಗ್ರಾಮೀಣ ಭಾಗದ ಜನರಿಗೆ ಬ್ಯಾಂಕಿಂಗ್‌ ಸೌಲಭ್ಯ ಒದಗಿಸಬೇಕು. ಗ್ರಾಮೀಣ ಜನರ ಅನುಕೂಲತೆಯ ದೃಷ್ಟಿಯಿಂದ ಬ್ಯಾಂಕರುಗಳ ಸಮಿತಿ ಮನವಿಗೆ ಇಲಾಖೆ ಕೈಜೋಡಿಸಿದ್ದು, ಸೇವಾ ಕೇಂದ್ರಗಳನ್ನು ತೆರೆಯಲು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಸ್ಥಳಾವಕಾಶ ಒದಗಿಸಲು ತೀರ್ಮಾನಿಸಲಾಗಿದೆ. ಅಂದಾಜು 2 ಸಾವಿರ ಸೇವಾ ಕೇಂದ್ರಗಳಾಗಬಹುದು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

“ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿಯ ತೀರ್ಮಾನದಂತೆ ಬ್ಯಾಂಕಿಂಗ್‌ ಸೌಲಭ್ಯಗಳು ಲಭ್ಯವಿಲ್ಲದ ಗ್ರಾಮಗಳಲ್ಲಿ ಸೇವಾ ಕೇಂದ್ರಗಳನ್ನು ತೆರೆಯಲು ಸ್ಥಳಾವಕಾಶದ ಜೊತೆಗೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’.
– ಎಂ.ಕೆ. ಕೆಂಪೇಗೌಡ, ನಿರ್ದೇಶಕರು, ಗ್ರಾಮೀಣಾಭಿವೃದ್ಧಿ ಇಲಾಖೆ.

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.