ಕಲಾವಿದರ ಸೇವೆಗೆ ರಂಗ ಮಿತ್ರರು ಸಜ್ಜು


Team Udayavani, May 6, 2021, 2:27 PM IST

Service of artists

ಬೆಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ ಹಲವು ರಂಗಕಲಾವಿದರು ತೊಂದರೆಯಲ್ಲಿದ್ದಾರೆ. ಸಂಕಷ್ಟದಲ್ಲಿರುವ ಕಲಾವಿದರಿಗೆ ವೈದ್ಯಕೀಯ ಸೇವೆಗಳ ಮಾಹಿತಿ ಸೇರಿದಂತೆ ಇನ್ನಿತರ ಸಲಹೆ ನೀಡುವ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಮತ್ತು ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ.ಕಪ್ಪಣ್ಣ ಸೇರಿದಂತೆ ಹಿರಿಯ ರಂಗ ಕಲಾವಿದರು “ರಂಗಕಲಾವಿದರಿಗಾಗಿ ರಂಗ ಮಿತ್ರರು’ ತಂಡ ಕಟ್ಟಿದ್ದಾರೆ .

ನಾಡಿನಲ್ಲಿ ಅಧಿಕ ಸಂಖ್ಯೆ ರಂಗಕಲಾವಿದರು ಇದ್ದಾರೆ. ಕೋವಿಡ್‌ ಹಿನ್ನೆಲೆಯಲ್ಲಿ ಅವರು ಅನೇಕರೀತಿಯ ತೊಂದರೆಯಲ್ಲಿ ಸಿಲುಕಿದ್ದಾರೆ. ಅಂತಹವರಿಗೆ ಒಂದಿಷ್ಟು ಅನುಕೂಲವಾಗಲಿ ಎಂಬ ಸದುದ್ದೇಶದಿಂದ “ರಂಗಕಲಾವಿದರಿಗಾಗಿ ರಂಗಮಿತ್ರರು “ತಂಡ ಹುಟ್ಟಿಕೊಂಡಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಅವರ ಜತೆಗೆ ನಾಟಕ ಅಕಾಡೆಮಿಮಾಜಿ ಅಧ್ಯಕ್ಷ ಜೆ.ಲೋಕೇಶ್‌, ಕನ್ನಡ ಅಭಿವೃದ್ಧಿಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಹಿರಿಯಚಿತ್ರಕಲಾವಿದ ಮುಖ್ಯಮಂತ್ರಿ ಚಂದ್ರು, ಹಿರಿಯರಂಗ ಕರ್ಮಿ ಬಿ.ವಿ.ರಾಜರಾಂ, ಕೆ.ವಿ.ನಾಗರಾಜಮೂರ್ತಿ, ಶಶಿಧರ ಬಾರಿಘಾಟ್‌, ಜಿಪಿಒ ಚಂದ್ರುಸೇರಿದಂತೆ ಅನೇಕ ಹಿರಿಯ ಕಲಾವಿದರು ರಂಗಕಲಾವಿದರಿಗಾಗಿ ರಂಗ ಮಿತ್ರರು ತಂಡದಲ್ಲಿದ್ದಾರೆ.

ಈ ತಂಡ ವ್ಯಾಟ್ಸ್ ಆ್ಯಪ್‌ ಮತ್ತು ಮೊಬೈಲ್‌ಮೂಲಕ ಆರೋಗ್ಯ ಸೇವೆಗಳ ಸಹಾಯವನ್ನುಕಷ್ಟದಲ್ಲಿರುವ ಕಲಾವಿದರಿಗೆ ನೀಡಲಿದೆ. ಆಸ್ಪತ್ರೆಗಳಹಾಸಿಗೆ ಮಾಹಿತಿ, ಸರ್ಕಾರಿ ಮತ್ತು ಬಿಬಿಎಂಪಿಅಧಿಕಾರಿಗಳ ಸಂಪರ್ಕ ಮತ್ತು ವೈದ್ಯರ ಮಾಹಿತಿಗಳನ್ನು ನೀಡಲಿದೆ ಎಂದು ಹಿರಿಯ ನಟಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. ಕಳೆದ ಬಾರಿಯ ಕೋವಿಡ್‌ ವೇಳೆ ರಂಗ ಕಲಾವಿದರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು.ಈಗಲೂ ಅದೇರೀತಿಯ ಕಷ್ಟದಲ್ಲಿದ್ದಾರೆ. ಔಷಧಿ ಖರ್ಚು ಸೇರಿದಂತೆ ಕೈಲಾದ ಸಹಾಯ ಮಾಡುವುದಾಗಿ ತಿಳಿಸಿದರು.

ಕಲಾವಿದರಿಗೆ ಶೀಘ್ರ ಲಸಿಕೆ: ರಂಗಕಲಾವಿದರೆಲ್ಲರಿಗೂ ಕೋವಿಡ್‌ ಲಸಿಕೆ ಕೊಡಿಸುವ ನಿಟ್ಟಿನಲ್ಲಿಹೆಜ್ಜೆಯಿರಿಸಲಾಗಿದೆ. ಈ ಸಂಬಂಧ ಮುಖ್ಯ ಮಂತ್ರಿಬಿ.ಎಸ್‌.ಯಡಿಯೂರಪ್ಪ ಅವರಿಗೂ ಮನವಿ ಮಾಡಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಹೇಳಿದ್ದಾರೆ. ಶೀಘ್ರದಲ್ಲೇ ರವೀಂದ್ರ ಕಲಾ ಕ್ಷೇತ್ರದಲ್ಲಿ ರಂಗಕಲಾವಿದರಿಗೆ ಲಸಿಕೆ ನೀಡುವ ಕಾರ್ಯ ನಡೆಯಲಿದೆ.ನಮ್ಮಿಂದ ಎಷ್ಟು ಸಹಾಯ ಮಾಡಬಹುದುಅಷ್ಟನ್ನೂ ಕಲಾವಿದರಿಗಾಗಿ ಮಾಡಲಾಗುವುದು.

ನಮ್ಮ ಸಹಾಯ ಕೇವಲ ರಂಗಕಲಾವಿದರಿಗೆ ಅಷ್ಟೇಅಲ್ಲ ಜಾನಪದ,ಯಕ್ಷಗಾನ, ಸಂಗೀತ ನೃತ್ಯಕಲಾವಿದರಿಗೂ ನೀಡಲಾಗುವುದು. ಸದ್ಯ ಬೆಂಗಳೂರನ್ನು ಕೇಂದ್ರೀಕರಿಸಲಾಗಿದೆ ಎಂದು ಹೇಳಿದ್ದಾರೆ.

ಆರ್ಥಿಕ ಸಹಾಯವಿಲ್ಲ: ಕಳೆದ ಬಾರಿಯ ಕೋವಿಡ್‌ ಸಂಕಷ್ಟದ ವೇಳೆ ಸರ್ಕಾರದ ಮೂಲಕ ಕಲಾವಿದರುಗಳಿಗೆ ಆರ್ಥಿಕ ಸಹಾಯ ನೀಡಲಾಗಿತ್ತು. ಈ ಬಾರಿ ಸರ್ಕಾರ ಕೂಡ ಕೋವಿಡ್‌ ಸಂಕಷ್ಟದಲ್ಲಿದೆ. ಹೀಗಾಗಿ ಕಲಾವಿದರಿಗೆ ಆರೋಗ್ಯ ಸೇವೆ ಬಗ್ಗೆ ನೆರವು ನೀಡಲಾಗುವುದು ಎಂದು ಹಿರಿಯರಂಗಕರ್ಮಿ ಶ್ರೀನಿವಾಸ ಜಿ.ಕಪ್ಪಣ್ಣ ಹೇಳಿದ್ದಾರೆ. ಈಗಾಗಲೇ ಕಷ್ಟದಲ್ಲಿದ್ದ ಹಲವು ಕಲಾವಿದರು ನೆರವು ಪಡೆದಿದ್ದಾರೆ.

ವೈದ್ಯಕೀಯ ನೆರವು ಕೂಡ ನೀಡಲಾಗಿದೆ.ಕೋವಿಡ್‌ ಬಂದ ತಕ್ಷಣ ಭಯ ಪಡುವ ಅಗತ್ಯವಿಲ್ಲ.ರಂಗಭೂಮಿ ಕಲಾವಿದರಿಗೆ ಸರ್ಕಾರಿ ವೈದ್ಯಕೀಯಸೇವೆ ಪಡೆಯುವ ಬಗ್ಗೆ ಸರಿಯಾದ ಮಾಹಿತಿ ಇಲ್ಲ.ಸರ್ಕಾರಿ ಸೌಲಭ್ಯದ ಜತೆಗೆ ಧೈರ್ಯ ತುಂಬುವ ಕೆಲಸಇದಾಗಿದೆ ಎಂದರು.

ಕೋವಿಡ್‌ಸಂಕಷ್ಟದಲ್ಲಿ.ರುವ ಕಲಾವಿದರಿಗೆಒಂದಿಷ್ಟುನೆರವಾಗಲಿ ಎಂಬಕಾರಣದಿಂದ ಈತಂಡ ಹುಟ್ಟಿಕೊಂಡಿದೆ. ಆರೋಗ್ಯಕ್ಷೇತ್ರಕ್ಕೆಸಂಬಂಧಿಸಿದ ಕಷ್ಟಗಳಿದ್ದರೆ ತಂಡವನ್ನುಕಲಾವಿದರು ಸಂಪರ್ಕಿಸಬಹುದಾಗಿದೆ.

ಟಿ.ಎಸ್‌.ನಾಗಾಭರಣ,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

 

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.