ಯುವತಿ ಜತೆ ಅಸಭ್ಯ ವರ್ತನೆ: ಭದ್ರತಾ ಸಿಬ್ಬಂದಿ ಬಂಧನ
Team Udayavani, Feb 4, 2019, 6:34 AM IST
ಬೆಂಗಳೂರು: ಯುವ ವಕೀಲೆ ಜತೆ ಅಸಭ್ಯವಾಗಿ ವರ್ತಿಸಿದ ಭದ್ರತಾ ಸಿಬ್ಬಂದಿಯನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮೂಲದ ರಾಜೇಶ್ ಸಿಂಗ್ (25) ಬಂಧಿತ ಆರೋಪಿ. ಜ.25ರಂದು ಯುವ ವಕೀಲೆ ಜತೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿ, ಹಲ್ಲೆ ಕೂಡ ನಡೆಸಿದ್ದ. ಈ ಸಂಬಂಧ ಸಂತ್ರಸ್ತೆ ದೂರು ನೀಡಿದ್ದರು ಎಂದು ಅಶೋಕನಗರ ಪೊಲೀಸರು ಹೇಳಿದರು.
ಸರ್ಜಾಪುರದಲ್ಲಿ ವಾಸವಾಗಿರುವ 23 ವರ್ಷದ ವಕೀಲೆ, ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಡವೊಂದರ ಮೊದಲ ಮಹಡಿಯಲ್ಲಿ ಕಚೇರಿ ಹೊಂದಿದ್ದಾರೆ. ಅದೇ ಕಚೇರಿಯ ಭದ್ರತಾ ಸಿಬ್ಬಂದಿಯಾಗಿರುವ ರಾಜೇಶ್ ಸಿಂಗ್ ಜ.25ರಂದು ರಾತ್ರಿ 9.30ರ ಸುಮಾರಿಗೆ ಕಚೇರಿಗೆ ಬಂದು ಕಟ್ಟಡದ ಮೇಲ್ಛಾವಣಿ ಸೋರುತ್ತಿದೆ ಎಂದು ಹೇಳಿ ವಾಪಸ್ ಹೋಗಿದ್ದಾನೆ.
ತಡರಾತ್ರಿ 11.50ರಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಕಚೇರಿ ಬಳಿ ಲೈಟ್ ಆಫ್ ಆಗಿತ್ತು. ಈ ಹಿನ್ನೆಲೆಯಲ್ಲಿ ವಕೀಲೆ ಮೊಬೈಲ್ ಟಾರ್ಚ್ ಸಹಾಯದೊಂದಿಗೆ ಕಚೇರಿಯಿಂದ ಹೊರ ಬಂದಿದ್ದಾರೆ. ನೆಲಮಹಡಿಗೆ ಬಂದಾಗ ರಾಜೇಶ್ ಸಿಂಗ್ ಕೂಡ ಅಲ್ಲಿಗೆ ಬಂದಿದ್ದಾನೆ. ನಂತರ ವಕೀಲೆಯನ್ನು ಅಸಭ್ಯವಾಗಿ ನೋಡಿ, ನೆಲ ಮಹಡಿಯ ಬಾಗಿಲು ಹಾಕಿದ್ದಾನೆ.
ನಂತರ ವಕೀಲೆಯನ್ನು ಕೆಳಗೆ ಬೀಳಿಸಲು ಪ್ರಯತ್ನಿಸಿದ್ದು, ಇದನ್ನು ವಕೀಲೆ ಪ್ರತಿರೋಧಿಸಿದಾಗ ಅವರ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಆತಂಕಗೊಂಡ ವಕೀಲೆ ಜೋರಾಗಿ ಕೂಗಿಕೊಂಡಾಗ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ಪ್ರಕರಣ ಸಂಬಂಧ ಕಾರ್ಯಾಚರಣೆ ನಡೆಸಿದ ಅಶೋಕನಗರ ಪೊಲೀಸರು ಮಧ್ಯಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್