ನಟನೆ ಚಾನ್ಸ್‌ ನೆಪದಲ್ಲಿ ಲೈಂಗಿಕ ಕಿರುಕುಳ


Team Udayavani, Aug 29, 2019, 3:09 AM IST

natane

ಬೆಂಗಳೂರು: ಧಾರವಾಹಿ ಹಾಗೂ ಜಾಹೀರಾತುಗಳಲ್ಲಿ ನಟಿಸಲು ಅವಕಾಶ ಕೊಡುವುದಾಗಿ ನಂಬಿಸಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಮೂಲಕ ಪರಿಚಯವಾದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂಗೀತ ಸಂಯೋಜಕನನ್ನು ಕುಮಾರಸ್ವಾಮಿ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ.

ಕೆ.ಎಸ್‌.ಲೇಔಟ್‌ ನಿವಾಸಿ ಮುರಳೀಧರ್‌ (42) ಬಂಧಿತ. ಆರೋಪಿ ಕೆಂಗೇರಿ ನಿವಾಸಿ 34 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬುಧವಾರ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಚಿತ್ರರಂಗದ ಪ್ರತಿಷ್ಠಿತ ಸಂಗೀತ ನಿರ್ದೇಶಕರ ಜತೆ ಸಂಗೀತ ಸಂಯೋಜಕನಾಗಿ ಕೆಲಸ ಮಾಡುತ್ತಿದ್ದ ಆರೋಪಿ ಇತ್ತೀಚೆಗಷ್ಟೇ ಕುಮಾರಸ್ವಾಮಿ ಲೇಔಟ್‌ನಲ್ಲಿ ಸ್ವಂತ ಸ್ಟುಡಿಯೋ ತೆರೆದಿದ್ದು, ಮ್ಯೂಸಿಕ್‌ ಅಲ್ಬಂಗಳನ್ನು ಬಿಡುಗಡೆ ಮಾಡಿದ್ದಾನೆ. 2017ರಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಮೂಲಕ ಸಂತ್ರಸ್ತೆಯನ್ನು ಪರಿಚಯಿಸಿಕೊಂಡ ಆರೋಪಿ, 2019ರಲ್ಲಿ ಮೆಸೆಂಜರ್‌ ಮೂಲಕ ಸಂತ್ರಸ್ತೆಯನ್ನು ಸಂಪರ್ಕಿಸಿ, ಧಾರವಾಹಿ ಹಾಗೂ ಜಾಹೀರಾತುಗಳಲ್ಲಿ ನಟಿಸಲು ಇಷ್ಟ ಇದೆಯೇ ಎಂದು ಪ್ರಶ್ನಿಸಿದ್ದಾನೆ.

ಅದಕ್ಕೆ ಸಂತ್ರಸ್ತೆ ಒಪ್ಪುತ್ತಿದ್ದಂತೆ ತನ್ನ ಮೊಬೈಲ್‌ ನಂಬರ್‌ ಕಳುಹಿಸಿ, ಆಕೆ ಜತೆ ನಿರಂತರವಾಗಿ ವಾಟ್ಸ್‌ಆ್ಯಪ್‌ ಚಾಟಿಂಗ್‌ ಮಾಡಿದ್ದಾನೆ. ಒಮ್ಮೆ ಕುಮಾರಸ್ವಾಮಿ ಲೇಔಟ್‌ನ ಪ್ರತಿಷ್ಠಿತ ಕಾಲೇಜೊಂದರ ಬಳಿ ಇರುವ ತನ್ನ ಸ್ಟುಡಿಯೋಗೆ ಬರುವಂತೆ ಆಹ್ವಾನ ನೀಡಿದ್ದ. ಆದರೆ, ಸಂತ್ರಸ್ತೆ ಕೆಲಸದೊತ್ತಡದಿಂದ ಬರಲು ಸಾಧ್ಯವಾಗಿಲ್ಲ. ಆದರೆ, ಆರೋಪಿ ಆಕೆ ಜತೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ಹೇಳಿದರು.

ಬೋಲ್ಡ್‌ ಟಾಸ್ಕ್ ಮಾಡಬೇಕಾಗುತ್ತೆ: ವಾಟ್ಸ್‌ಆ್ಯಪ್‌ ಚಾಟಿಂಗ್‌ ವೇಳೆ ತನ್ನ ಬಳಿ ಐಸ್‌ಕ್ರೀಂ, ಸೀರೆ, ಅಗರಬತ್ತಿ, ಚಿನ್ನಾಭರಣ ಸೇರಿ ನಾನಾ ಮಾದರಿಯ ಜಾಹೀರಾತುಗಳಿವೆ. ಪ್ರತಿ ಜಾಹೀರಾತಿಗೆ ಕನಿಷ್ಠ 25-30 ಸಾವಿರ ರೂ. ಸಂಭಾವನೆ ಇರುತ್ತದೆ. ಆದರೆ, ಹಗ್‌, ರೋಮ್ಯಾನ್ಸ್‌ ಹಾಗೂ ಸೆಕ್ಸ್‌ ಇಂತಹ ಬೋಲ್ಡ್‌ ಟಾಸ್ಕ್ಗಳು ಇರುತ್ತವೆ. ಅವುಗಳನ್ನು ಸರಿಯಾಗಿ ನಿಭಾಯಿಸಬೇಕು. ಒಳಉಡುಪುಗಳ ಜಾಹಿರಾತಿಗೆ 70 ಸಾವಿರ ರೂ. ಸಂಭಾವನೆ ಕೊಡಲಾಗುವುದು ಎಂದೆಲ್ಲ ಸಂತ್ರಸ್ತೆಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಎಂದು ಪೊಲೀಸರು ಹೇಳಿದರು.

ಸ್ಟೇಟಸ್‌ ಲೈಕ್‌ ಮಾಡಲು ದುಂಬಾಲು: ಈ ಮಧ್ಯೆ ಕೆಲ ತಿಂಗಳ ಹಿಂದೆ ವಾಟ್ಸ್‌ಆ್ಯಪ್‌ ಸ್ಟೇಟಸ್‌ಗೆ ತನ್ನದೇ ನಗ್ನ ಪೋಟೋಗಳನ್ನು ಹಾಕಿ, ಅವುಗಳನ್ನು ನೋಡಿ ಲೈಕ್‌ ಮಾಡುವಂತೆ ಸಂತ್ರಸ್ತೆಗೆ ದುಂಬಾಲು ಬಿದ್ದಿದ್ದ. ಆರೋಪಿಯ ಸ್ಟೇಟಸ್‌ ಕಂಡು ಮುಜುಗರಕ್ಕೊಳಗಾದ ಸಂತ್ರಸ್ತೆ ಈ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಆತ, ಮಹಿಳಾ ನಿರ್ಮಾಪಕಿಯೊಬ್ಬರು ಸಿನಿಮಾವೊಂದಕ್ಕೆ ತನ್ನ ಬಳಿ ಸಹಿ ಮಾಡಿಸಿಕೊಂಡರು. ಒಳ್ಳೆಯ ಸಿನಿಮಾ ಎಂದು ಸಹಿ ಮಾಡಿದೆ, ಆದರೆ, ಅದು ನೀಲಿ ಚಿತ್ರ ಎಂಬುದು ಬಳಿಕ ಗೊತ್ತಾಯಿತು.

ಆ ಸಿನಿಮಾದಲ್ಲಿ ನಟನೆ ಮಾಡುವುದಿಲ್ಲ ಎಂದಾಗ, ತನ್ನ ಬೆತ್ತಲೆ ಫೋಟೋಗಳಿಗೆ ಬೇಡಿಕೆ ಇಟ್ಟಿದ್ದು, ಅವುಗಳನ್ನೇ ಸ್ಟೇಟಸ್‌ಗೆ ಹಾಕಿದ್ದೇನೆ. ಇಷ್ಟವಾದರೆ ಲೈಕ್‌ ಮಾಡಿ ಎಂದು ಆ ಪೋಟೋಗಳನ್ನು ಸಂತ್ರಸ್ತೆಗೆ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದ. ಅದರಿಂದ ಬೇಸರಗೊಂಡ ಸಂತ್ರಸ್ತೆ ಮಂಗಳವಾರ(ಆ.27) ಕುಮಾರಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.