ಲೈಂಗಿಕ ಕಿರುಕುಳ ಇಲ್ಲಿ ನಿತ್ಯ ನಿರಂತರ


Team Udayavani, Aug 24, 2018, 11:25 AM IST

blore-10.jpg

ಬೆಂಗಳೂರು: ದೈಹಿಕ, ಮಾನಸಿಕ ಹಾಗೂ ಲೈಂಗಿಕ ಕಿರುಕುಳ ಇಲ್ಲಿ ನಿತ್ಯ ನಿರಂತರ. ಆದರೂ ಯಾರಿಗೂ ಹೇಳುವಂತಿಲ್ಲ, ಅನುಭವಿಸುವಂತೆಯೂ ಇಲ್ಲ. ಇದು ಗಾರ್ಮೆಂಟ್ಸ್‌ ಮಹಿಳೆಯರ ಪಾಡು. ಗಾರ್ಮೆಂಟ್ಸ್‌ ಕಾರ್ಖಾನೆಗಳಲ್ಲಿ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮೂಲ
ಸೌಕರ್ಯಗಳ ಕೊರತೆ, ವೇತನ ತಾರತಮ್ಯ, ಅಭದ್ರತೆ ಇವಿಷ್ಟೇ ಸಮಸ್ಯೆಯಲ್ಲ. ಅಲ್ಲಿ ಕೆಲಸ ಮಾಡುವ ಹೆಣ್ಣು ಮಕ್ಕಳು ನೆಮ್ಮದಿಯಿಂದ ಉಸಿರಾಡುವಂತಹ ವಾತಾವರಣವೂ ಇಲ್ಲ. ಒಂದು ರೀತಿಯಲ್ಲಿ ಮೂಕ ವೇದನೆ. 

ಮಹಿಳಾ ಕ್ಷೇಮಾಭಿವೃದ್ಧಿ ಸಂಘ ಎಂಬುದು ಇದೆಯಾದರೂ ಅದರ ಅಧ್ಯಕ್ಷೆ ಪ್ರೊಡಕ್ಷನ್‌ ಮ್ಯಾನೇಜರ್‌, ಫ್ಲೋರ್‌ ಮೇಲ್ವಿಚಾರಕ ಸೇರಿದಂತೆ ವಿವಿಧ ಮೇಲಾಧಿಕಾರಿಗಳು ನೀಡುವ ಮಾನಸಿಕ ಹಾಗೂ ದೈಹಿಕ ಕಿರುಕುಳ ಹಾಗೂ ಅದನ್ನು ಮೌನವಾಗಿ ಸಹಿಸಿಕೊಳ್ಳಿ ಎಂದು ಪುಕ್ಕಟೆ ಸಲಹೆ
ನೀಡುತ್ತಾರೆ. ಹೀಗಾಗಿ, ತಮ್ಮ ಗೋಳು ಯಾರಿಗೆ ಹೇಳಿದರೂ ನಮ್ಮ ಹಣೆಬರಹ ಇಷ್ಟೆ ಎಂದು ನೋವು ಹಾಗೂ ಯಾತನೆಯಲ್ಲೇ ಕೆಲಸ ಮಾಡುತ್ತಿದ್ದಾರೆ.

ಬೆಳಗ್ಗೆ 9ಕ್ಕೆ ಕೆಲಸ ಶುರುವಾದರೆ ಸಂಜೆ 5.30 ಅಥವಾ 7ಕ್ಕೆ ಮುಗಿಯಲಿದೆ. ಅಲ್ಲಿಯವರೆಗೂ ಫ್ಯಾಕ್ಟರಿಯಲ್ಲಿ ಆಸೆಬುರುಕ ಪುರುಷ ಮೇಲಧಿಕಾರಿಗಳೊಂದಿಗೆ ಹೆಣಗಾಡುವುದೇ ಒಂದು ದೊಡ್ಡ ಸಾಹಸ ಆಗಿರುತ್ತದೆ. ಕ್ವಾಲಿಟಿ ಇನ್‌ಚಾರ್ಜ್‌, ಮೇಲ್ವಿಚಾರಕ ಸೇರಿದಂತೆ ಇತರೆ ಅಧಿಕಾರಿಗಳ ಕೈಸನ್ನೆ ಮುಜುಗರ ಉಂಟಾಗುವ ರೀತಿಯಲ್ಲಿರುತ್ತದೆ. ಕೆಲವೊಮ್ಮೆ ಮೈ ಕೈ ತಾಗಿಸಿ ಮಾತನಾಡುತ್ತಾರೆ.

ಇವುಗಳನ್ನು ಹೇಳುವಂತಿಲ್ಲ, ಬಿಡು ವಂತಿಲ್ಲ. ಮೌನವಾಗಿ ಅನುಭವಿಸ ಬೇಕಷ್ಟೆ ಎಂದು ಮಹಿಳೆಯೊಬ್ಬರು ಕಣ್ಣೀರಿಡುತ್ತಾರೆ. ಅವಾಚ್ಯ ಶಬ್ದಗಳಿಂದ ನಿಂದಿಸುವ ಮೇಲಾಧಿಕಾರಿಗಳ ವಿರುದ್ಧ ದನಿ ಎತ್ತರಿಸಿ ಮಾತನಾಡಿದರೆ ಇಡೀ ದಿನ ನೆಮ್ಮದಿಯಿಂದ ಇರುವಂತಿಲ್ಲ, ಅವರು ಬೈಗುಳಕ್ಕೆ
ಬಳಸುವ ಪದಗಳನ್ನು ಕೇಳಿ ಕಣ್ಣೀರಾಕುವುದಷ್ಟೇ ಕೆಲಸವಾಗಿಬಿಡುತ್ತದೆ. ಅನ್ಯ ರಾಜ್ಯದಿಂದ ಕೆಲಸಕ್ಕೆಂದು ಇಲ್ಲಿಗೆ ಬರುವ ಹೊಸ ಹೆಣ್ಣು ಮಕ್ಕಳಿಗೆ ಕೆಲಸ ಕಲಿಸುವ ನೆಪದಲ್ಲಿ ವಿವಿಧ ರೀತಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಾರೆ.

ಅವರಿಗೆ ಮುಜುಗರವಾದರೂ ಸಹಿಸಿಕೊಂಡಿರುತ್ತಾರೆ. ಅದನ್ನು ನೋಡಲು ಅಸಹನೀಯವಾಗಿರುತ್ತದೆ ಎನ್ನುತ್ತಾರೆ ಒರಿಸ್ಸಾದಿಂದ ಕೆಲಸಕ್ಕೆ ಬಂದ ಸುಮನಾ (ಹೆಸರು ಬದಲಾಯಿಸಲಾಗಿದೆ). ಮೇಲಾಧಿಕಾರಿಗಳ ಲೈಂಗಿಕ ದೌರ್ಜನ್ಯ ಸಹಿಸಿಕೊಂಡು ಸಹಕರಿಸಿದರೆ ಕೆಲಸ ಕಡಿಮೆ
ನೀಡುತ್ತಾರೆ. ಅವರಿಗೆ ಯಾವುದೇ ಬೈಗುಳ ಇರುವುದಿಲ್ಲ. ಪ್ರತಿಭಟಿಸಿದರೆ ತೇಜೋವಧೆ ಮಾಡುತ್ತಾರೆ. ಹಾಗೆಂದು ನಾವು ಸುಮ್ಮನಿರುವುದಿಲ್ಲ. ನಮ್ಮದೇ ನೆಲೆಗಟ್ಟಿನಲ್ಲಿ ಪ್ರತಿಭಟಿಸುತ್ತಲೇ ಇರುತ್ತೇವೆ. ಆದರೆ, ಆ ಪ್ರತಿಭಟನೆ ಅನ್ಯರಿಗೆ ತಿಳಿಯುವುದಿಲ್ಲ ಎನ್ನುತ್ತಾರೆ ಪ್ರಮೀಳಾ (ಹೆಸರು
ಬದಲಾಯಿಸಲಾಗಿದೆ). 

ಮದ್ಯಪಾನ ಮಾಡಿ ಅನುಚಿತ ವರ್ತನೆ ಬೇರೆ ರಾಜ್ಯದಿಂದ ಬಂದು ಇಲ್ಲಿನ ಗಾರ್ಮೆಂಟ್ಸ್‌ಗಳಲ್ಲಿ ದುಡಿಯುವ ಮಹಿಳೆಯರು ಗಾರ್ಮೆಂಟ್ಸ್‌ಗೆ ಸಂಬಂಧಪಟ್ಟ ಹಾಸ್ಟೆಲ್‌ನಲ್ಲಿ ಉಳಿದುಕೊಳ್ಳಬೇಕು. ಹಾಸ್ಟೆ-ಲ್‌ ಗಾರ್ಮೆಂಟ್ಸ್‌ ಹಾಗೂ ಮೇಲಧಿಕಾರಿಗಳು ಮದ್ಯಪಾನ ಮಾಡಿ ಅನುಚಿತವಾಗಿ ವರ್ತಿಸುತ್ತಾರೆ. ಮಹಿಳಾ ಉದ್ಯೋಗಿಗಳ ಫೋನ್‌ ನಂಬರ್‌ ಸಂಗ್ರಹಿಸಿ ತೀರಾ ಅಸಭ್ಯ ರೀತಿಯಲ್ಲಿ ಮಾತನಾಡುತ್ತಾರೆ. ಈ ನರಕದಿಂದ ನಾವು ತಪ್ಪಿಸಿಕೊಂಡು ನಮ್ಮ ಊರುಗಳಿಗೆ ತೆರಳಿದರೆ ಅಲ್ಲಿನ ಏಜೆಂಟರು ನಾವು ಪರಪುರಷನೊಂದಿಗೆ ಸಂಬಂಧ ಹೊಂದಿದ್ದಕ್ಕೆ ನಮ್ಮನ್ನು ಗಾರ್ಮೆಂಟ್ಸ್‌ನಿಂದ ಹೊರಹಾಕಿದ್ದಾರೆ ಎಂಬ ಕೆಟ್ಟ ಸುದ್ದಿಯನ್ನು ಹಬ್ಬಿಸಿಬಿಡುತ್ತಾರೆ. ಹೀಗಾಗಿ ನಮ್ಮ ಗ್ರಾಮಗಳಲ್ಲೂ ನಮಗೆ ಶಿಕ್ಷೆ. ಊರಿನಿಂದ ಬಹಿಷ್ಕರಿಸಿದ ಪ್ರಕರಣಗಳೂ ಇವೆ. ಹೀಗಾಗಿ, ನಾವು ಅವರು ಹೇಳಿದನ್ನೆಲ್ಲಾ ಸಹಿಸಿಕೊಂಡು ಬದುಕು ನಡೆಸುವ ಸಾಹಸ ಮಾಡುತ್ತಿದ್ದೇವೆ ಎಂದು ವಿವರಿಸುತ್ತಾರೆ ಪಂಜಾಬ್‌ನ ಸೀತಾ (ಹೆಸರು ಬದಲಾಯಿಸಲಾಗಿದೆ).

ಕನಿಷ್ಠ ಶುದ್ಧ ನೀರು ಕೂಡ ಸಿಗೋಲ ಫ್ಯಾಕ್ಟರಿಯಲ್ಲಿ ಶುದ್ಧ ಕುಡಿಯುವ ನೀರು ದೊರೆಯದಿರುವುದರಿಂದ ಬಹುತೇಕ ಮಹಿಳೆಯರು ಮನೆಯಿಂದ ನೀರನ್ನು ತೆಗೆದುಕೊಂಡು ಹೋಗುತ್ತಾರೆ. ಅವರು ತೆಗೆದುಕೊಂಡ ಹೋದ ನೀರು ಖಾಲಿಯಾದರೆ ಮನೆಗೆ ಬರುವವರೆಗೂ ಬಾಯಾರಿ
ಇರಬೇಕು. ಪದೇ ಪದೇ ಶೌಚಾಲಯಕ್ಕೆ ಹೋಗಲು ಅವಕಾಶ ಇಲ್ಲದ ಕಾರಣ ಅಲ್ಲಿ ಕೆಲಸ ಮಾಡುವ ಮಹಿಳೆಯರು ನೀರು ಕಡಿಮೆ ಕುಡಿಯುತ್ತಾರೆ. ಶೌಚಾಲಯಕ್ಕೆಂದು ತೆರಳಿದಾಗ ಅಲ್ಲಿರುವ ಪುರುಷ ಭದ್ರತಾ ಸಿಬ್ಬಂದಿ ಸಮಯ ನೋಡಿಕೊಳ್ಳುತ್ತಾರೆ. ಎರಡೇ ನಿಮಿಷಕ್ಕೆ ಬಂದು ಬಾಗಿಲು ತಟ್ಟುತ್ತಾರೆ. ಋತುಸ್ರಾವದ ದಿನಗಳಲ್ಲಿ ನಮ್ಮ ಕಷ್ಟ ಹೇಳತೀರದು. ಆ ಸಮಯದಲ್ಲಿ ನ್ಯಾಪ್‌ಕಿನ್‌ ಬದಲಾವಣೆಗೆ ಸಮಯ ಹಿಡಿಯುತ್ತದೆ ಆದರೆ, ಪುರುಷ ಭದ್ರತಾ ಸಿಬ್ಬಂದಿ ಬಳಿ ಈ ವಿಚಾರ ಹೇಳಿಕೊಳ್ಳಬೇಕಾಗುತ್ತದೆ ಎಂದು ಮಹಿಳೆಯರು ತಮ್ಮ ನೋವು ತೋಡಿಕೊಳ್ಳುತ್ತಾರೆ. 

 ಶ್ರುತಿ ಮಲೆನಾಡತಿ

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Nandini Ragi Ambali: ಮಾರುಕಟ್ಟೆಗೆ ಬಂತು ನಂದಿನಿ ರಾಗಿ ಅಂಬಲಿ: ಬೆಲೆ 10 ರೂ.!

ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ

ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ

Arrested: ನಶೆಯಲ್ಲಿ ನಿಂದನೆ; ಸ್ನೇಹಿತನ ಹತ್ಯೆಗೈದಿದ್ದ ಐವರ ಬಂಧನ

Arrested: ನಶೆಯಲ್ಲಿ ನಿಂದನೆ; ಸ್ನೇಹಿತನ ಹತ್ಯೆಗೈದಿದ್ದ ಐವರ ಬಂಧನ

7

Theft: ಪ್ರಚಾರಕ್ಕೆ ತೆರಳಿದ್ದಾಗ ಮಾಜಿ ಮೇಯರ್‌ ಮನೆಯಲ್ಲಿ ಕಳವು

Money seized: ಕಾರಲ್ಲಿ ಸಾಗಿಸುತ್ತಿದ್ದ 2 ಕೋಟಿ ನಗದು ಜಪ್ತಿ; ಪ್ರಕರಣ ದಾಖಲು

Money seized: ಕಾರಲ್ಲಿ ಸಾಗಿಸುತ್ತಿದ್ದ 2 ಕೋಟಿ ನಗದು ಜಪ್ತಿ; ಪ್ರಕರಣ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.