ಮಧ್ಯಾಹ್ನ 12.18ಕ್ಕೆ ಮಾಯವಾದ ನೆರಳು
Team Udayavani, Apr 25, 2019, 3:52 AM IST
ಬೆಂಗಳೂರು: ನಗರದ ಜವಾಹರ್ಲಾಲ್ ನೆಹರು ತಾರಾಲಯದಲ್ಲಿ ಶೂನ್ಯ ನೆರಳು ದಿನದ ಹಿನ್ನೆಲೆ ಬುಧವಾರ ಪ್ರಾತ್ಯಕ್ಷಿಕೆ ನಡೆಯಿತು. ತಾರಾಲಯದ ಆವರಣದಲ್ಲಿ ಸುಮಾರು ಒಂದೂವರೆ ಮೀಟರ್ ಉದ್ದದ ಕಂಬ ಇಡಲಾಗಿತ್ತು. ಬೆಳಗ್ಗೆಯಿಂದ ಕಾಣುತ್ತಿದ್ದ ಆ ಕಂಬದ ನೆರಳು ಚಿಕ್ಕದಾಗುತ್ತಾ ಬಂದು ಮಧ್ಯಾಹ್ನ 12.18 ಕ್ಕೆ ಮಾಯವಾಯಿತು.
ಇದರ ಜತೆಗೆ ಆಯತಾಕಾರದ ಮೂರು ಹಲಗೆಗಳನ್ನು ಒಂದರ ಮೇಲೊಂದು ಜೋಡಿಸಲಾಗಿತ್ತು. ಇದರಲ್ಲಿ “ಜೀರೊ ಶಾಡೊ ಡೇ’ ಎಂದು ಸಣ್ಣ ರಂಧ್ರಗಳಿಂದ ಬರೆಯಲಾಗಿತ್ತು. ಇದರ ಮೇಲೆ ಬಿಸಿಲು ಬಿದ್ದಾಗ ಮೂರು ಹಲಗೆಗಳ ಕೆಳಗಿನ ಖಾಲಿ ಹಲಗೆಯಲ್ಲಿ “ಜೀರೊ ಶಾಡೊ ಡೇ’ ಎಂದು ಓದಲು ಸಾಧ್ಯವಾಗುವಂತೆ ಪೂರ್ಣ ಅಕ್ಷರಗಳ ಬಿಂದುಗಳು ಕಂಡುಬಂತು.
ಕಾರ್ಯಕ್ರಮದಲ್ಲಿ ತಾರಾಲಯದ ನಿರ್ದೇಶಕ ಪ್ರಮೋದ್ ಜಿ.ಗಲಗಲಿ ಮಾತನಾಡಿ, ನೂರಾರು ವರ್ಷಗಳ ಹಿಂದೆಯೂ ದೇಶದ ವಿಜ್ಞಾನಿಗಳು ಶೂನ್ಯ ನೆರಳಿನ ದಿನವನ್ನು ವಿಶೇಷ ದಿನವೆಂದು ಪರಿಗಣಿಸಿ ಪ್ರಯೋಗಗಳನ್ನು ಮಾಡುತ್ತಿದ್ದರು. ಈ ಬಾರಿ ಬೆಂಗಳೂರಿನಲ್ಲಿ ಏ.24 ಹಾಗೂ ಆ.19 ರಂದು ಶೂನ್ಯ ನೆರಳಿನ ದಿನ ಉಂಟಾಗುತ್ತದೆ.
ಮಕ್ಕಳಿಗೆ ವಿಜ್ಞಾನದಲ್ಲಿ ಆಸಕ್ತಿ ಮೂಡಿಸುವ ಉದ್ದೇಶದಿಂದ ಈ ಬಾರಿ ಶೂನ್ಯ ನೆರಳಿನ ದಿನದಂದು ವಿವಿಧ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಇನ್ನು ಕಾರ್ಯಗಾರದಲ್ಲಿ ಭಾಗವಹಿಸಿದ್ದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೆರಳ ಮಾಯವ ವಿಸ್ಮಯವನ್ನು ಚಕಿತರಾಗಿ ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
MUST WATCH
ಹೊಸ ಸೇರ್ಪಡೆ
ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ
ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
ಪ್ರಜ್ವಲ್ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ