ವಿಕಾಸಕ್ಕೆ ಶಂಕರರೇ ಸ್ಫೂರ್ತಿ


Team Udayavani, Oct 30, 2017, 11:42 AM IST

modi-viokasa.jpg

ಬೆಂಗಳೂರು: ಸೌಂದರ್ಯ ಲಹರಿ ಸೇರಿದಂತೆ ಆದಿ ಶಂಕರಾಚಾರ್ಯರ ಸಿದ್ಧಾಂತಗಳೇ ಕೇಂದ್ರ ಸರ್ಕಾರದ ನ್ಯೂ ಇಂಡಿಯಾ ಮತ್ತು ಸಬ್‌ಕಾ ಸಾಥ್‌ ಸಬ್‌ಕಾ ವಿಕಾಸ್‌ ಕಾರ್ಯಕ್ರಮಗಳಿಗೆ ಸ್ಪೂರ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಡೀ ವಿಶ್ವವೇ ಒಂದು ಪರಿವಾರ. ಭಕ್ತರಲ್ಲಿ ಬೇಧ-ಭಾವ ಇಲ್ಲ. ಎಲ್ಲರೂ ಸಮಾನರು ಎಂಬ ಶಂಕರಾಚಾರ್ಯರ ಸಂಸ್ಕೃತಿಯ ಚಿಂತನೆ ವರ್ತಮಾನಕ್ಕೂ ಅನ್ವಯವಾಗುತ್ತದೆ. ನಮ್ಮಲ್ಲಿರುವ ನದಿ, ನೀರು, ಕಾಡು, ಗಾಳಿಯೊಂದಿಗೆ ಸಂಸ್ಕೃತಿ ಮಿಳಿತವಾಗಿದೆ ಎಂದು ಅವರು ಪ್ರತಿಪಾದಿಸುತ್ತಿದ್ದರು. ಇದರ ಆಧಾರದ ಮೇಲೆಯೇ ಕೇಂದ್ರ ಸರ್ಕಾರ ನ್ಯೂ ಇಂಡಿಯಾ ಮತ್ತು ಸಬ್‌ಕಾ ಸಾಥ್‌ ಸಬ್‌ಕಾ ವಿಕಾಸ್‌ ಕಾರ್ಯಕ್ರಮ ರೂಪಿಸಿದೆ ಎಂದರು.

ವೇದಾಂತ ಭಾರತೀ ಸಂಸ್ಥೆಯು ಯಡತೊರೆ ಯೋಗಾನಂದೇಶ್ವರ ಸರಸ್ವತೀ ಮಠದ ಶಂಕರ ಭಾರತೀ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ದಶಮ ಸೌಂದರ್ಯ ಲಹರೀ ಪಾರಾಯಣೋತ್ಸವ ಮತ್ತು ದಕ್ಷಿಣಾ ಮೂರ್ತಿ ಅಷ್ಟಕಗಳ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಭಾನುವಾರ ಪಾಲ್ಗೊಂಡು ಅವರು ಮಾತನಾಡಿದರು.

ಒಂದು ಜಾಗದಲ್ಲಿ, ಎಲ್ಲರೂ ಒಟ್ಟಾಗಿ ಒಂದೇ ಸ್ವರದಲ್ಲಿ ಮಂತ್ರಗಳನ್ನು ಪಠಿಸಿದರೆ ಆ ಜಾಗದಲ್ಲಿ ಒಂದು ಶಕ್ತಿ ಉದ್ಭವವಾಗುತ್ತದೆ. ಎಲ್ಲರಿಗೂ ಅನುಕೂಲವಾಗುವ ವಾತಾವರಣ ನಿರ್ಮಾಣವಾಗುತ್ತದೆ ಎಂದು ಪುರಾಣಗಳಲ್ಲಿ ಹೇಳುತ್ತಿದ್ದರು.

ಇದೀಗ ಸೌಂದರ್ಯ ಲಹರಿ ಮತ್ತು ದಕ್ಷಿಣಾ ಮೂರ್ತಿ ಅಷ್ಟಕಗಳನ್ನು ಸಹಸ್ರಾರು ಮಂದಿ ಒಂದೇ ಸ್ವರದಲ್ಲಿ ಪಠಿಸಿ ಬೆಂಗಳೂರಿನಲ್ಲೂ ಅಂತಹ ಶಕ್ತಿ ಉದ್ಭವವಾಗುವಂತೆ ನೋಡಿಕೊಂಡಿದ್ದಾರೆ. ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಸೌಭಾಗ್ಯವನ್ನು ನನಗೆ ಕರುಣಿಸಿದ ಶಂಕರ ಭಾರತೀ ಸ್ವಾಮೀಜಿ ಮತ್ತು ವೇದಾಂತ ಭಾರತೀ ಸಂಸ್ಥೆಗೆ ತಾವು ಋಣಿಯಾಗಿರುವುದಾಗಿ ಹೇಳಿದರು.

ಸೌಂದರ್ಯ ಲಹರಿ ಪಠಿಸಿದ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ ಅವರು ವೇದಿಕೆಗೆ ಬಂದ ಮೇಲೆ ನೆರೆದಿದ್ದ ಸಹಸ್ರಾರು ಮಂದಿ ಶಂಕರಾಚಾರ್ಯ ವಿರಚಿತ ಸೌಂದರ್ಯ ಲಹರಿಯ ಹತ್ತು ಶ್ಲೋಕಗಳು, ಕೊನೆಯ ಶ್ಲೋಕ ಮತ್ತು ದಕ್ಷಿಣಾ ಮೂರ್ತಿ ಅಷ್ಟಕಗಳ ಮೂರು ಸ್ತೋತ್ರಗಳನ್ನು ಪಠಿಸಿದರು. ಇದಕ್ಕೆ ಮುನ್ನ ಸ್ತೋತ್ರದ ಪುಸ್ತಕಗಳನ್ನು ಪ್ರಧಾನಿ ಸೇರಿದಂತೆ ಗಣ್ಯರಿಗೆ ವಿತರಿಸಲಾಯಿತು. ನೆರೆದಿದ್ದವರೊಂದಿಗೆ ಸೇರಿದ ಪ್ರಧಾನಿ ನರೇಂದ್ರ ಮೋದಿ ಅವರೂ ಸೌಂದರ್ಯ ಲಹರಿ ಶ್ಲೋಕ ಮತ್ತು ದಕ್ಷಿಣಾ ಮೂರ್ತಿ ಅಷ್ಟಕಗಳನ್ನು ಪಠಣ ಮಾಡಿದರು.

ನಂತರ ತಮ್ಮ ಭಾಷಣದಲ್ಲೂ ಸೌಂದರ್ಯ ಲಹರಿಯ ವಿಚಾರಗಳನ್ನು ಹೇಳಿದ ಪ್ರಧಾನಿ, ನಾನು ದಸರಾ ಸಂದರ್ಭದಲ್ಲಿ ಒಂಬತ್ತು ದಿನ ವೃತಾಚರಣೆ ಮಾಡುತ್ತಿದ್ದೆ. ಆ ವೇಳೆ ಸೌಂದರ್ಯ ಲಹರಿಯನ್ನೂ ಹೇಳುತ್ತಿದ್ದೆ ಎಂದಾಗ ಸಭಿಕರು ಚಪ್ಪಾಳೆ ತಟ್ಟಿ ಸಂತಸ ವ್ಯಕ್ತಪಡಿಸಿದರು.

ಮಹಾಸಮರ್ಪಣೆ
ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಶನಿವಾರ ಸುಮಾರು 70 ಸಾವಿರ ಶಾಲಾ ಮಕ್ಕಳಿಂದ ಸೌಂದರ್ಯ ಲಹರಿ ಮತ್ತು ದಕ್ಷಿಣಾ ಮೂರ್ತಿ ಅಷ್ಟಕಗಳ ಪಠಮವಾಗಿದ್ದರೆ, ಭಾನುವಾರ ಸುಮಾರು ಅಷ್ಟೇ ಸಂಖ್ಯೆಯ ಮಹಿಳೆಯರು ಮತ್ತು ಪುರುಷರಿಂದ ಇವರೆಡರ ಪಠಣ ನಡೆಯಿತು. ಮಧ್ಯಾಹ್ನ 1 ಗಂಟೆಗೆ ಸರಿಯಾಗಿ ಆರಂಭವಾದ ಕಾರ್ಯಕ್ರಮದಲ್ಲಿ ಸುಮಾರು 1 ಗಂಟೆ 15 ನಿಮಿಷ ನೆರೆದಿದ್ದ ಸಹಸ್ರಾರು ಸಂಖ್ಯೆಯ ಜನರು ಸೌಂದರ್ಯ ಲಹರಿ ಮತ್ತು ದಕ್ಷಿಣಾಮೂರ್ತಿ ಅಷ್ಟಕಗಳನ್ನು ಪಟಣ ಮಾಡಿದರು. ನಂತರ ಶ್ಲೋಕಗಳ ಕುರಿತ ವಿವರಣೆ ನೀಡಲಾಯಿತು. 

ಕಾರ್ಯಕ್ರಮದಲ್ಲಿ ಹೆಚ್ಚು ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಪ್ರಧಾನಿ ಕಾರ್ಯಕ್ರಮ ವೀಕ್ಷಿಸಲು ಅಲ್ಲಲ್ಲಿ ಬೃಹತ್‌ ಎಲ್‌ಸಿಡಿ ಪರದೆಗಳನ್ನು ಹಾಕಲಾಗಿತ್ತು. ಬಂದಿದ್ದವರಿಗೆ ಅದಮ್ಯ ಚೇತನ ಸಂಸ್ಥೆಯಿಂದ ಉಪಹಾರ, ನೀರಿನ ವ್ಯವಸ್ಥೆ ಕಲ್ಪಿಸಿದ್ದರೆ, ಮೈಯಾಸ್‌ ಗ್ರೂಪ್‌ನ ಸದಾನಂದ ಮಯ್ಯ ಅವರು ಮೊಸರನ್ನದ ವ್ಯವಸ್ಥೆ ಮಾಡಿದ್ದರು.

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.