ಶಿರಡಿ ಸಾಯಿಬಾಬಾರ ನಿಜ ಪಾದುಕೆ ದರ್ಶನ
Team Udayavani, Mar 11, 2018, 11:38 AM IST
ಬೆಂಗಳೂರು: ಶಿರಡಿಯಿಂದ ತಂದಿರುವ ಸಾಯಿಬಾಬಾ ಅವರ ನಿಜ ಪಾದುಕೆಯ ಸಾರ್ವಜನಿಕ ದರ್ಶನದ ವ್ಯವಸ್ಥೆಯನ್ನು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಾಡಲಾಗಿದ್ದು, ಭಾನುವಾರವೂ ಪಾದುಕೆ ದರ್ಶನ ಮುಂದುವರಿಯಲಿದೆ.
ಅಖೀಲ ಭಾರತ ಶಿರಡಿ ಸಾಯಿ ಸಂಘದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾದುಕೆ ದರ್ಶನ ಪಡೆಯಲು ನಗರದ ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದರು. ಪಾದುಕೆ ದರ್ಶನ ಕಾರ್ಯಕ್ರಮದ ಉಸ್ತುವಾರಿಯನ್ನು ಶಿರಡಿಯ ರಮಣಿಯವರು ವಹಿಸಿದ್ದರು. ಇವರೊಂದಿಗೆ 100 ಮಂದಿ ಅಧಿಕಾರಿಗಳು, 30 ಮಂದಿ ಭದ್ರತಾ ಸಿಬ್ಬಂದಿ ಕೂಡ ಶಿರಡಿಯಿಂದಲೇ ಬಂದಿದ್ದಾರೆ.
ವೇದಿಕೆಯ ಮೇಲೆ ಸಾಯಿಬಾಬಾ ಸ್ವಾಮಿಯ ದರ್ಶನ, ನಂತರ ಅವರು ತೊಟ್ಟಿದ್ದ ಒಂದು ಜತೆ ಮರದ ಪವಿತ್ರ
ಪಾದುಕೆಗಳನ್ನು ಗಾಜಿನ ಪೆಟ್ಟಿಗೆಯಲ್ಲಿ ಇಡಲಾಗಿದೆ. ಭಕ್ತರು ಆ ಪೆಟ್ಟಿಗೆಯನ್ನು ಮುಟ್ಟಿ ನಮಸ್ಕರಿಸಲು ಅವಕಾಶ ಕಲ್ಪಿಸಲಾಗಿತ್ತು. ದರ್ಶನ ಪಡೆದವರಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು. ಮೊದಲ ದಿನ ಬೆಳಗ್ಗೆ ಯಿಂದ ರಾತ್ರಿಯವರೆಗೆ ಸುಮಾರು 15 ಸಾವಿರ ಭಕ್ತರು ಪಾದುಕೆ ದರ್ಶನ ಪಡೆದಿದ್ದಾರೆ. ದರ್ಶನಕ್ಕೆ ಬಂದಿರುವ ಭಕ್ತರ ಅನುಕೂಲಕ್ಕಾಗಿ ನ್ಯಾಷನಲ್ ಕಾಲೇಜು ಮೈದಾನದ ಪ್ರವೇಶ ದ್ವಾರದಲ್ಲಿ ಪಾದರಕ್ಷೆಗಳನ್ನು ಬಿಡಲು ಬೇಕಾದ ವ್ಯವಸ್ಥೆ ಮಾಡಿದ್ದಾರೆ. ಸರತಿ ಸಾಲಿನಲ್ಲಿ ಬರಲು ಅನುಕೂಲವಾಗುವಂತೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಶಾಸಕ ಆರ್.ವಿ. ದೇವರಾಜ್, ಪಾಲಿಕೆ ಸದಸ್ಯ ನಾಗರಾಜು ಇತರರು ಭಾಗವಹಿಸಿದ್ದರು.
ರಾಜ್ಯದ ಎಲ್ಲಾ ಭಕ್ತರಿಗೆ ಶಿರಡಿಗೆ ಹೋಗಿ ಸಾಯಿ ಬಾಬಾ ಅವರ ದರ್ಶನ ಹಾಗೂ ಪಾದಕೆ ನೋಡಲು ಸಾಧ್ಯವಾಗದು. ಹೀಗಾಗಿ ಅವರ ಪಾದುಕೆ ದರ್ಶನ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ 7.30ರಿಂದ ರಾತ್ರಿ 10.30ರ ತನಕ ದರ್ಶನ ಇರುತ್ತದೆ.
ಆರ್. ಅಭಿಷೇಕ್, ಕಾರ್ಯದರ್ಶಿ, ಅಖೀಲ ಭಾರತ ಶಿರಡಿ ಸಾಯಿ ಸಂಘ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ