ವರ್ಷಾಂತ್ಯ ಶಿವಸೇನೆ ಸೇರ್ಪಡೆ: ಮುತಾಲಿಕ್
Team Udayavani, Nov 30, 2017, 6:55 AM IST
ಬೆಂಗಳೂರು: ಡಿಸೆಂಬರ್ ಕೊನೆಯ ವಾರದಲ್ಲಿ ಶಿವಸೇನೆ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳುವುದಾಗಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಔಪಚಾರಿಕವಾಗಿ ಮಹಾರಾಷ್ಟ್ರದ ಆರೋಗ್ಯ ಸಚಿವ ಡಾ.ದೀಪಕ್ ಸಾವಂತ್ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ.
ಡಿಸೆಂಬರ್ 2ನೇ ವಾರದಲ್ಲಿ ಶಿವಸೇನೆ ವರಿಷ್ಠ ಉದ್ಧವ್ ಠಾಕ್ರೆ ಅವರೊಂದಿಗೆ ಮುಂಬೈನಲ್ಲಿ ಪಕ್ಷ ಸೇರುವ ಕುರಿತು ಚರ್ಚೆ ನಡೆಸುತ್ತೇವೆ. ಬಳಿಕ ಡಿಸೆಂಬರ್ ಕೊನೆಯ ವಾರ ನಗರದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸುವ ಮೂಲಕ ಶಿವಸೇನೆಗೆ ಸೇರ್ಪಡೆಗೊಳ್ಳುವುದಾಗಿ ತಿಳಿಸಿದರು.
ಈ ವೇಳೆ ಬಿಜೆಪಿ ವಿರುದ್ಧ ವಾಗಾಟಛಿಳಿ ನಡೆಸಿದ ಅವರು, ಸಚಿವರಾಗಿ ಕಾಂಗ್ರೆಸ್ನಲ್ಲಿ ಜೀವಮಾನ ಪೂರ್ತಿ ಎಲ್ಲ
ಸವಲತ್ತುಗಳನ್ನು ಅನುಭವಿಸಿದ ವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆಂದು ಚನ್ನಪಟ್ಟಣದ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಹೆಸರೆತ್ತದೆ ಕಿಡಿಕಾರಿದರು