ಶಿವಾಜಿ ಇತಿಹಾಸ ವಿಕೃತಗೊಳಿಸುವ ಹುನ್ನಾರ


Team Udayavani, Jun 19, 2019, 3:04 AM IST

shivaj

ಬೆಂಗಳೂರು: ಶಿವಾಜಿ ಮಹಾರಾಜರ ಇತಿಹಾಸವನ್ನು ವಿಕೃತಗೊಳಿಸುವ ಉದ್ದೇಶದಿಂದಲೇ ಅವರನ್ನು “ಮರಾಠ ಕಿಂಗ್‌’ ಎಂದು ಬಿಂಬಿಸುವ ಪ್ರವೃತ್ತಿ ದೇಶದಲ್ಲಿ ನಡೆದಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಕಳವಳ ವ್ಯಕ್ತಪಡಿಸಿದರು.

ನಗರದ ಬಿ.ಪಿ.ವಾಡಿಯಾ ರಸ್ತೆಯ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ವರ್ಲ್ಡ್ ಕಲ್ಚರ್‌ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಸಮೃದ್ಧ ಸಾಹಿತ್ಯ ಸಂಸ್ಥೆ ಹೊರ ತಂದಿರುವ “ಶಿವಾಜಿ ಮತ್ತು ಸುರಾಜ್ಯ’ ಅನುವಾದಿ ಕೃತಿಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಶಿವಾಜಿ ಮಹಾರಾಜರು ಎಂದು ಕೂಡ ತಾನು ಮರಾಠ ರಾಜ, ಕೊಂಕಣ ರಾಜ ಅಥವಾ ಮಹಾರಾಷ್ಟ್ರದ ರಾಜ ಎಂದು ಹೇಳಿಕೊಂಡಿಲ್ಲ. ಹಿಂದೂ ಸ್ವರಾಜ್ಯ, ಹಿಂದೂ ದೇಶದ ರಾಜ್ಯ ಎಂದು ಹೇಳಿಕೊಂಡಿದ್ದರು. ಆದರೆ, ಶಿವಾಜಿಯನ್ನು ಮರಾಠ ಕಿಂಗ್‌ ಎಂದು ಬಿಂಬಿಸುವ ಮೂಲಕ ನಮ್ಮ ಇತಿಹಾಸವನ್ನು ವಿಕೃತ, ಸಂಕುಚಿತಗೊಳಿಸುವ, ನಮ್ಮ ಮಹಾಪುರುಷರ ಸಾಧನೆಯನ್ನು ಕುಗ್ಗಿಸುವ ಪ್ರಯತ್ನವನ್ನು ಕೆಲವು ಇತಿಹಾಸಕಾರರು ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಷ್ಟ್ರೀಯತೆಯ ಪ್ರಭಾವನ್ನು ಕುಗ್ಗಿಸುವ ದುಷ್ಟ ಪ್ರಯತ್ನದಿಂದಾಗಿ ಶಿವಾಜಿ ಮಹಾರಾಜರ ಬಗ್ಗೆಯೂ ತಪ್ಪು ಕಲ್ಪನೆಯನ್ನು ಮೂಡಿಸಿದ್ದಾರೆ. ಆದರೆ, ವಿವೇಕಾನಂದರು, ಲೋಕಮಾನ್ಯ ತಿಲಕರು, ರವೀಂದ್ರನಾಥ ಠ್ಯಾಗೂರ್‌ ಮೊದಲಾದವರು ಶಿವಾಜಿಯ ಉತ್ಸವ ಮಾಡಿದ್ದಾರೆ. ತಮಿಳುನಾಡಿನಲ್ಲಿ ಶಿವಾಜಿ ಚಲನಚಿತ್ರದಿಂದ ನಟನ ಹೆಸರೇ ಶಿವಾಜಿ ಗಣೇಶನ್‌ ಎಂದಾಯಿತು. ಹೀಗೆ ಈ ದೇಶದಲ್ಲಿ ಶಿವಾಜಿ ಮಾಹಾರಾಜರ ಬಗ್ಗೆ ಅಪಾರವಾದ ಪ್ರೀತಿ, ಗೌರವ, ಸಮ್ಮಾನ ಇಂದಿಗೂ ಇದೆ ಎಂದರು.

ದೇಶದ ಅನೇಕ ಮಹಾಪುರುಷರಂತೆ ಶಿವಾಜಿಯ ಬಗ್ಗೆಯೂ ದಂತಕಥೆಗಳು ಹುಟ್ಟಿಕೊಂಡಿವೆ. ಅದರಲ್ಲಿ ಕೆಲವು ಸತ್ಯ, ಇನ್ನು ಕೆಲವು ಮಿಥ್ಯ ಇರಬಹುದು. ಓರ್ವ ಆದರ್ಶ, ಲೋಕೋನ್ಮುಖ, ಧರ್ಮ ರಕ್ಷಕ, ರಾಷ್ಟ್ರ ನಿರ್ಮಾಣಕ, ಆಡಳಿತ ಸುಧಾರಕನ ಆಡಳಿತ ವ್ಯವಸ್ಥೆ ಹೇಗಿತ್ತು ಮತ್ತು ಅದು ಇಂದಿನ ಸಮಾಜಕ್ಕೆ ಹೇಗೆ ಮಾರ್ಗದರ್ಶನವಾಗಲಿದೆ ಎಂಬುದನ್ನು ಈ ಕೃತಿಯಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.

ಶಿವಾಜಿಯು ಯುದ್ಧ ಮಾಡಿದ್ದಕ್ಕಿಂತ ಹೆಚ್ಚಾಗಿ ಸ್ವರಾಜ್ಯಕ್ಕೆ ಬೇಕಾದ ಸೈನಿಕರನ್ನು ಆಡಳಿತ ವ್ಯವಸ್ಥೆ ಮೂಲಕ ರೂಪಿಸಿದ್ದ. ಸಮಾಜಕ್ಕೆ ಬೇಕಾದ ಜನರನ್ನು ನಿರ್ಮಿಸಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಅನೇಕ ಕ್ರಮ ತೆಗೆದುಕೊಂಡಿದ್ದರು. ಅತ್ಯಾಚಾರಿಗಳಿಗೂ ಶಿಕ್ಷೆ ನೀಡಿದ್ದರು. ಸೈನಿಕರನ್ನು ಸೇವಕರಂತೆ ಕಾಣದೆ, ಸ್ನೇಹಿತರಂತೆ ನೋಡಿಕೊಳ್ಳುತ್ತಿದ್ದರು. ಹಿಂದು ಧರ್ಮಕ್ಕೆ ಮತಾಂತರಗೊಂಡವರೊಂದಿಗೆ ಸ್ನೇಹ, ಸಂಬಂಧವನ್ನು ಬೆಳೆಸಿದ್ದರು. ಹೀಗಾಗಿ ಅನೇಕ ರೀತಿಯಲ್ಲಿ ಶಿವಾಜಿ ಮಹಾರಾಜರು ದೇಶಕ್ಕೆ ಪ್ರೇರಣೆ ಎಂದು ಬಣ್ಣಿಸಿದರು.

ಸಂಸ್ಕೃತ ವಿದ್ವಾಂಸರಾದ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್‌ ಮಾತನಾಡಿ, ಶಿವಾಜಿಯ ಆಡಳಿತದ ಹಲವು ಮುಖಗಳನ್ನು ಈ ಕೃತಿಯಲ್ಲಿ ಅತ್ಯಂತ ಸುಂದರವಾಗಿ ತಿಳಿಸಿಕೊಡಲಾಗಿದೆ. ಶಿವಾಜಿಯ ಆಡಳಿತ ವ್ಯವಸ್ಥೆ, ಆಧುನಿಕ ಭಾರತದ ರಾಜ್ಯ ಮತ್ತು ರಾಷ್ಟ್ರದ ಪರಿಕಲ್ಪನೆ ಹಾಗೂ ರಾಜನೀತಿಗೆ ಬೇಕಿರುವ ಹಲವು ಅಂಶಗಳು ಇದರಲ್ಲಿದೆ. ದೇಶಕ್ಕೇ ಮಾದರಿಯಾಗಬಲ್ಲ ಜಲನೀತಿ, ವಿದೇಶಾಂಗ ನೀತಿ, ಮಂತ್ರಿ ಪರಿಷತ್‌ ಹಾಗೂ ನಾಯಕತ್ವ ಗುಣವನ್ನು ಶಿವಾಜಿ ನೀಡಿದ್ದರು.

ಶಿವಾಜಿ ಹಾಕಿಕೊಟ್ಟ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಆಡಳಿತ ವ್ಯವಸ್ಥೆ ಹಾಗೂ ಪರಿಸರ ಅಧ್ಯಯನ ಇಂದಿನ ಭಾರತಕ್ಕೆ ಹೆಚ್ಚು ಉಪಯುಕ್ತವಾಗಲಿದೆ ಎಂದು ವಿವರಿಸಿದರು. ಕೃತಿಯ ಅನುವಾದಕರಾದ ಮಹಾಬಲ ಸೀತಾಳಬಾವಿ ಹಾಗೂ ಸಮೃದ್ಧಿ ಪ್ರಕಾಶನದ ಹರ್ಷ ಮೊದಲಾದವರು ಇದ್ದರು. ನಿವೃತ್ತ ಕೊಲೊನಿಯಲ್‌ ವಿಜಯ್‌ ಕುಮಾರ್‌ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.