ಶಿವಾನಂದ ಮೇಲ್ಸೇತುವೆಯ ಡೆಡ್‌ ಲೈನ್‌ಗೆ ಲೆಕ್ಕವೇ ಇಲ್ಲ!


Team Udayavani, Feb 11, 2021, 11:19 AM IST

ಶಿವಾನಂದ ಮೇಲ್ಸೇತುವೆಯ ಡೆಡ್‌ ಲೈನ್‌ಗೆ ಲೆಕ್ಕವೇ ಇಲ್ಲ!

ಬೆಂಗಳೂರು: ನಗರದ ಶಿವಾನಂದ ವೃತ್ತ ಸ್ಟೀಲ್‌ ಬ್ರಿಡ್ಜ್ (ಮೇಲ್ಸೇತುವೆ) ಯೋಜನೆ 2017-18 ನೇ ಸಾಲಿನಲ್ಲಿ ಪ್ರಾರಂಭವಾಯಿತು. ಯೋಜನೆಯ ಅವಶ್ಯಕತೆಯ ಚರ್ಚೆ, ಸ್ಥಳೀಯರ ವಿರೋಧ ಹಾಗೂ ಜಾಗದ ಸಮಸ್ಯೆಯಿಂದಾಗಿ ಕಾಮಗಾರಿ ಪೂರ್ಣಗೊಳ್ಳುವುದು ವಿಳಂಬವಾಗುತ್ತಲೇ ಇದೆ.

ಈ ಕಾಮಗಾರಿ ಪೂರ್ಣಗೊಳಿಸಲು ಮಾಜಿ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಅವರ ಅವಧಿಯಿಂದಲೂ ಡೆಡ್‌ ಲೈನ್‌ ಗಳು ನಿಗದಿ ಆಗುತ್ತಲೇ ಇವೆ. ಡೆಡ್ ಲೈನ್‌ ಮುಗಿಯುತ್ತಿರುವುದು ಬಿಟ್ಟರೆ ಕಾಮಗಾರಿ ಮುಗಿಯುತ್ತಿಲ್ಲ.

ಸ್ಟೀಲ್‌ಬ್ರಿಡ್ಜ್ ನಿರ್ಮಾಣದ ಮೂಲ ಆಶಯವೇ ಸ್ಟೀಲ್‌ ನಿಂದ ಪಿಲ್ಲರ್‌ ಗಳನ್ನು ನಿರ್ಮಾಣ ಮಾಡುವುದು ಹಾಗೂ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವುದಾಗಿತ್ತು. ಆದರೆ, ಈ ಯೋಜನೆ ಪ್ರಾರಂಭವಾದಾಗಿನಿಂದಲೂ ಹಲವು ವಿವಾದಗಳು ಸೃಷ್ಟಿಯಾಗಿದ್ದು, ಯೋಜನೆಯ ಮೂಲ ಆಶಯಕ್ಕೆ ತದ್ವಿರುದ್ಧವಾಗಿ ವಿಳಂಬ ಹಾದಿಯಲ್ಲಿದೆ.

ಇದನ್ನೂ ಓದಿ:ಕೆಲಸಕ್ಕಿದ್ದ ಮನೆಯಲ್ಲೇ 60 ಲಕ್ಷ ರೂ. ಮೌಲ್ಯದ ಚಿನ್ನ ದರೋಡೆ: ನೇಪಾಳಿ ಗ್ಯಾಂಗ್‌ ಬಂಧನ

ಉದ್ದೇಶಿತ ಯೋಜನೆಯ ಪ್ರಕಾರ 326.25 ಮೀ ಉದ್ದದ ಮೇಲ್ಸೇತುವೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿತ್ತು. ಈ ನೀಲ ನಕ್ಷೆಯ ಪ್ರಕಾರವೇ ಯೋಜನೆ ರೂಪಿಸಿಕೊಳ್ಳಲಾಗಿತ್ತು. ಕಾಮಗಾರಿ ಸಹ ಪ್ರಾರಂಭಿಸಲಾಗಿತ್ತು. ಆದರೆ, ಶಿವಾನಂದ ವೃತ್ತದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಬಾರದೆಂದು ಸ್ಥಳೀಯರು ಸುಪ್ರೀಂ ಕೊರ್ಟ್‌ ಮೊರೆ ಹೋಗಿದ್ದರು. ಸಂಚಾರ ದಟ್ಟಣೆ ನಿವಾರಣೆ ಮಾಡಲು ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ. ಆದರೆ, ಇದರ ಒಟ್ಟಾರೆ ವಿಸ್ತೀರ್ಣ ಚಿಕ್ಕದಾಗಿದ್ದು, ಅದನ್ನು ವಿಸ್ತರಿಸುವಂತೆ ಸೂಚನೆ ನೀಡಿತ್ತು.

ಕೋರ್ಟ್‌ನ ನಿರ್ದೇಶನದ ಅನುಸಾರ ಇದೀಗ 493 ಮೀ. ಉದ್ದದ ಮೇಲ್ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗ ಹಾಗೂ ಶಿವಾನಂದ ರೈಲ್ವೆ ಹಳಿ ಬಳಿ ಸುಮಾರು 600 ಚ.ಮೀ ರಸ್ತೆ ಅಗಲೀಕರಣ ಪ್ರಕ್ರಿಯೆ ಇದೆ. ಉದ್ದೇಶಿತ ಕಾಮಗಾರಿಗೆ ಜಾಗ ಬಿಟ್ಟು ಕೊಡಲು ಸ್ಥಳೀಯರು ಟಿಡಿಆರ್‌ ಬದಲಿಗೆ, ಆರ್ಥಿಕ ಪರಿಹಾರ ನೀಡುವಂತೆ ಕೋರಿದ್ದು, ಈ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ ಎನ್ನುತ್ತಾರೆ ಪಾಲಿಕೆಯ ಅಧಿಕಾರಿಗಳು.

ಏಪ್ರಿಲ್‌ ವೇಳೆಗೆ ಶಿವಾನಂದ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ. ಸ್ಥಳೀಯರು ಜಾಗ ಬಿಟ್ಟುಕೊಡುವುದು ತಡವಾದರೆ ಮತ್ತೂಂದು ತಿಂಗಳು ತಡವಾಗಬಹುದು.

 ಬಿಬಿಎಂಪಿ ಸಹಾಯಕ ಎಂಜಿನಿಯರ್‌

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.