ಐಟಿ ವಿಚಾರಣೆಗೆ ಹಾಜರಾದ ಶಿವಣ್ಣ, ರಾಕ್ಲೈನ್ ವೆಂಕಟೇಶ್
Team Udayavani, Jan 9, 2019, 9:02 AM IST
ಬೆಂಗಳೂರು: ಸ್ಯಾಂಡಲ್ವುಡ್ ನಟ ಮತ್ತು ನಿರ್ಮಾಪಕರ ಮೇಲಿನ ಐಟಿ ದಾಳಿ ಪ್ರಕರಣ ಸಂಬಂಧ ಮಂಗಳವಾರ ನಟ ಶಿವರಾಜ್ಕುಮಾರ್ ಹಾಗೂ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಎದುರು ಮಂಗಳವಾರ ವಿಚಾರಣೆಗೆ ಹಾಜರಾದರು.
ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಬೆಳಗ್ಗೆ 11 ಗಂಟೆ ಸುಮಾರಿಗೆ ಹಾಜರಾದರೆ, ಮಧ್ಯಾಹ್ನ 3 ಗಂಟೆ ಸುಮಾರಿಗೆ ನಟ ಶಿವರಾಜ್ ಕುಮಾರ್ ವಿಚಾರಣೆಗೆ ಹಾಜರಾಗಿ ಸುಮಾರು ಒಂದೂವರೆ ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ಎದುರಿಸಿದರು.
ದಾಳಿಗೆ ಸಂಬಂಧಿಸಿದಂತೆ ಇಬ್ಬರ ಮನೆ ಮತ್ತು ಕಚೇರಿಗಳಲ್ಲಿ ಪತ್ತೆಯಾದ ಆಸ್ತಿ ದಾಖಲೆಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗಿದ್ದು, ಎಲ್ಲದಕ್ಕೂ ಶಿವರಾಜ್ ಕುಮಾರ್ ಹಾಗೂ ರಾಕ್ಲೈನ್ ವೆಂಕಟೇಶ್ ತಾಳ್ಮೆಯಿಂದಲೇ ಉತ್ತರಿಸಿದ್ದಾರೆ. ಅಗತ್ಯಬಿದ್ದಲ್ಲಿ ಮತ್ತೂಮ್ಮೆ ವಿಚಾರಣೆಗೆ ಕರೆಸಿಕೊಳ್ಳಲಾಗುವುದು ಎಂದು ಐಟಿ ಅಧಿಕಾರಿಗಳು ಹೇಳಿದ್ದಾರೆ.
ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವರಾಜ್ ಕುಮಾರ್, ಮನೆಯಲ್ಲಿ ಸಿಕ್ಕ ದಾಖಲೆಗಳ ಕುರಿತು ಐಟಿ ಅಧಿಕಾರಿಗಳು ಪ್ರಶ್ನೆಗಳನ್ನು ಕೇಳಿದರು. ಎಲ್ಲದಕ್ಕೂ ಉತ್ತರಿಸಿದ್ದೇನೆ. ಮತ್ತೂಮ್ಮೆ ವಿಚಾರಣೆಗೆ ಕರೆದರೆ ಖಂಡಿತ ಬರುತ್ತೇನೆ ಎಂದರು.
ರಾಕ್ಲೈನ್ ಮಾಲ್, ಪ್ರೋಡಕ್ಷನ್ ಬಗ್ಗೆ ಮಾಹಿತಿ: ವಿಚಾರಣೆಗೆ ಹಾಜರಾದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ಗೆ, ರಾಕ್ಲೈನ್ ಮಾಲ್, ರಾಕ್ಲೈನ್ ಪ್ರೋಡಕ್ಷನ್ ಹಾಗೂ ರಾಕ್ಲೈನ್ ಗ್ರೂಪ್ ಕುರಿತು ಪ್ರಶ್ನೆಗಳನ್ನು ಕೇಳಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ರಾಕ್ಲೈನ್ ವೆಂಕಟೇಶ್, ಮತ್ತೂಮ್ಮೆ ವಿಚಾರಣೆಗೆ ಕರೆಯುವುದಾಗಿ ಐಟಿ ಅಧಿಕಾರಿಗಳು ಹೇಳಿದ್ದಾರೆ. ಸಿನಿಮಾ ಉದ್ಯಮದಲ್ಲಿ ಅಕ್ರಮ ಆಸ್ತಿಗಳಿಸಬಹುದೇ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ದಾಳಿ ಸಂದರ್ಭದಲ್ಲಿ ಕೊಟ್ಟಿದ್ದ ಹೇಳಿಕೆಯನ್ನು ದೃಢೀಕರಿಸಲು ಬಂದಿದ್ದೇನೆ ಎಂದರು.
ಎರಡು ಕಪ್ ಕಾಫಿ, ಅಪ್ಪಾಜಿ ಬಗ್ಗೆ ಮಾತು: ಸುಮಾರು ಒಂದು ಗಂಟೆ ಕಾಲ ವಿಚಾರಣೆಯಲ್ಲಿ ಕೇವಲ 15 ನಿಮಿಷ ಮಾತ್ರ ಐಟಿ ದಾಳಿ ಬಗ್ಗೆ ಮಾಹಿತಿ ಕೇಳಿದರು. ಇನ್ನುಳಿದಂತೆ ಎರಡು ಕಪ್ ಕಾಫಿ ಕೊಟ್ಟು, ಅಪ್ಪಾಜಿ ಹಾಗೂ ಶೂಟಿಂಗ್ ಬಗ್ಗೆ ಅಧಿಕಾರಿಗಳು ಮಾತನಾಡಿದರು. ನಮ್ಮ ವೃತ್ತಿ ಬಗ್ಗೆ ಅವರಿಗೆ ಗೌರವ ಇದೆ. ನಾವು ಕೂಡ ಅವರ ಕೆಲಸವನ್ನು ಗೌರವಿಸುತ್ತೇನೆ ಎಂದು ಶಿವರಾಜ್ ಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ