ಕೊಲೆಗೈದು ಠಾಣೆಗೆ ಶವ ತಂದ ಯುವಕ!


Team Udayavani, Nov 23, 2022, 12:38 PM IST

ಕೊಲೆಗೈದು ಠಾಣೆಗೆ ಶವ ತಂದ ಯುವಕ!

ಬೆಂಗಳೂರು: ಸಾಲ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಕ್ಕೆ ಆಕ್ರೋಶಗೊಂಡ ಯುವಕನೊಬ್ಬ ಕಬ್ಬಿಣದ ರಾಡ್‌ನಿಂದ ಬರ್ಬರವಾಗಿ ಕೊಲೆ ಮಾಡಿ ತನ್ನದೇ ಕಾರಿನಲ್ಲಿ ಶವವನ್ನು ಪೊಲೀಸ್‌ ಠಾಣೆಗೆ ತಂದು ಶರಣಾದ ಘಟನೆ ನಡೆದಿದೆ.

ನಂಜನಗೂಡು ಮೂಲದ ಮಹೇಶಪ್ಪ(45) ಕೊಲೆಯಾದ ವ್ಯಕ್ತಿ. ರಾಮಮೂರ್ತಿನಗರ ಜಯಂತಿ ನಗರದ ನಿವಾಸಿ ರಾಜಶೇಖರ ಶರಣಾದ ಯುವಕ.

ತಮ್ಮ ತಾಯಿಗೆ ವಂಚಿಸಿದ್ದಕ್ಕಾಗಿ ಆಕ್ರೋಶಗೊಂಡು ಈ ಕೃತ್ಯ ನಡೆಸಿದ್ದಾಗಿ ಆರೋಪಿ ಹೇಳಿದ್ದಾನೆ. ಮೆಕಾನಿಕ್‌ ಕೆಲಸ ಮಾಡಿಕೊಂಡಿದ್ದ ರಾಜಶೇಖರ್‌ನ ತಾಯಿ ಸವಿತಾ ಅವರಿಗೆ ಮಹೇಶಪ್ಪ ತಾನು ಮಹಿಳಾ ಸ್ವ ಸಹಾಯ ಸಂಘ ನಡೆಸುತ್ತಿದ್ದೇನೆ ಎಂದು ನಂಬಿಸಿದ್ದ. ಕೋಟ್ಯಂತರ ರೂ. ಸಾಲ ಕೊಡಿಸುವುದಾಗಿ ಹೇಳಿದ್ದ. ಈತನ ಮಾತಿನ ಮೋಡಿಗೆ ಮರುಳಾದ ಸವಿತಾ ತನ್ನ ಗೆಳತಿಯರಿಗೂ ಈ ವಿಚಾರ ತಿಳಿಸಿದ್ದರು. ಸಾಲ ನೀಡುವ ಮುನ್ನ ಮುಂಗಡ ಹಣ ನೀಡಬೇಕಾಗುತ್ತದೆ ಎಂದು ಹೇಳಿ ಹಂತ-ಹಂತವಾಗಿ ಸುಮಾರು 2 ಕೋಟಿ ರೂ. ಪಡೆದುಕೊಂಡಿದ್ದ. ಸವಿತಾ ಸ್ವಂತ ಮನೆಯನ್ನು ಮಾರಾಟ ಮಾಡಿ ಬಂದ ಹಣವನ್ನು ಆರೋಪಿಗೆ ಕೊಟ್ಟಿದ್ದರು.

ಇದಾದ ಬಳಿಕ ಹಲವು ವರ್ಷ ಕಳೆದರೂ ಆತ ಯಾವುದೇ ಸಾಲವನ್ನು ನೀಡದೇ, ಕೊಟ್ಟ ಹಣವನ್ನೂ ವಾಪಸ್‌ ಕೊಡದೇ ಸತಾಯಿಸುತ್ತಿದ್ದ. ಹೀಗಾಗಿ, ಸವಿತಾ ಪುತ್ರ ರಾಜಶೇಖರ ಇತ್ತೀಚೆಗೆ ಮಹೇಶಪ್ಪನಿಗೆ ಕರೆ ಮಾಡಿ ನಿನ್ನ ಜತೆ ಮಾತನಾಡಬೇಕು ಎಂದು ಹೇಳಿ ಆತನನ್ನು ಕಾರಿನಲ್ಲಿ ಕರೆದುಕೊಂಡು ನಂಜನಗೂಡು, ಮೈಸೂರು, ಚನ್ನಪಟ್ಟಣ, ರಾಮನಗರ, ಹೊಸಕೋಟೆ ಸುತ್ತಮುತ್ತ ಹೆದ್ದಾರಿಯಲ್ಲಿ ಸುತ್ತಾಡಿಸಿದ್ದ. ತಾಯಿಗೆ ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ಹಣ ಕೊಡುವಂತೆ ಕೇಳಿಕೊಂಡ. ಆದರೂ ಮಹೇಶಪ್ಪ ಹಣ ಕೊಡು ಸಬೂಬು ಹೇಳುತ್ತಿದ್ದ.

ತಡರಾತ್ರಿ 1 ಗಂಟೆ ವೇಳೆ ಕೆರಳಿದ ಆರೋಪಿಯು ಕಬ್ಬಿಣದ ರಾಡಿನಿಂದ ಮಹೇಶಪ್ಪನ ತಲೆ ಹಾಗೂ ಕೈಕಾಲುಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಪರಿಣಾಮ ಮಹೇಶಪ್ಪ ಮೃತಪಟ್ಟಿದ್ದ. ರಾಜಶೇಖರನಿಗೆ ಮುಂದೇನು ಮಾಡಬೇಕೆಂ ಬುದು ತೋಚದೇ ಶವವನ್ನು ತನ್ನ ಕಾರಿನಲ್ಲಿಟ್ಟು ಕೊಂಡೇ ತಡರಾತ್ರಿ ರಾಮಮೂರ್ತಿ ನಗರ ಪೊಲೀಸ್‌ ಠಾಣೆಗೆ ಬಂದು ಪೊಲೀಸರ ಮುಂದೆ ಶರಣಾಗಿದ್ದ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.