ಶಹಜಹಾನ್ನ ಸಹಿ ತೋರಿಸಿ
Team Udayavani, Apr 12, 2018, 3:22 PM IST
ನವದೆಹಲಿ: “ವಿಶ್ವ ಪ್ರಸಿದ್ಧ ತಾಜ್ ಮಹಲ್ ವಕ್ಫ್ ಆಸ್ತಿಯೇ? ಭಾರತದಲ್ಲಿ ಇದನ್ನು ಯಾರಾದರೂ ನಂಬುತ್ತಾರೆಯೇ? ವಕ್ಫ್
ನಾಮಾಗೆ ಶಹಜಹಾನ್ ಸಹಿ ಮಾಡಿದ್ದು ಎಂದು? ವಕ್ಫ್ ಮಂಡಳಿಗೆ ಹಸ್ತಾಂತರಿಸಿದ್ದು ಯಾವಾಗ? ಈ ಬಗ್ಗೆ ದಾಖಲೆಗಳಿದ್ದರೆ, ವಾರದೊಳಗೆ ಅದನ್ನು ತಂದು ತೋರಿಸಿ’! ಸಾವಿರಾರು ವರ್ಷಗಳ ಇತಿಹಾಸವಿರುವ “ಪ್ರೇಮ ಸೌಧ’ದ ಕುರಿತು ಇಂಥ ಪ್ರಶ್ನೆಗಳನ್ನೆಲ್ಲ ಹಾಕಿದ್ದು ಮತ್ಯಾರೂ ಅಲ್ಲ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ದೀಪಕ್ ಮಿಶ್ರಾ ನೇತೃತ್ವದ ಪೀಠ. ತಾಜ್ ಮಹಲ್ ಒಡೆತನಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸುನ್ನಿ ವಕ್ಫ್ ಮಂಡಳಿ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಅವರು ಇಂಥ ಖಡಕ್ ಪ್ರಶ್ನೆಗಳನ್ನು ಕೇಳಿ ಅಚ್ಚರಿ ಮೂಡಿಸಿದ್ದಾರೆ.
1631ರಲ್ಲಿ ಪ್ರೇಯಸಿ ಮಮ್ತಾಜ್ಳ ಪ್ರೀತಿಯ ಸಂಕೇತವಾಗಿ ಕಟ್ಟಿಸಲಾದ ವಿಶ್ವ ಪ್ರಸಿದ್ಧ ತಾಜ್ಮಹಲ್ ಅನ್ನು ಮೊಘಲ್
ಚಕ್ರವರ್ತಿ ಶಹಜಹಾನ್ ಸ್ವತಃ ಸಹಿ ಮಾಡಿ ತಮಗೆ ಬರೆದುಕೊಟ್ಟಿದ್ದಾರೆ ಎಂದು ಉತ್ತರಪ್ರದೇಶ ವಕ್ಫ್ ಮಂಡಳಿ ಕೋರ್ಟ್ ಮೆಟ್ಟಿಲೇರಿತ್ತು. ಇದನ್ನು ಪ್ರಶ್ನಿಸಿ ಭಾರತೀಯ ಪುರಾತತ್ವ ಇಲಾಖೆ (ಎಎಸ್ಐ) 2010ರಲ್ಲಿ ಪ್ರತಿವಾದ ಮಂಡಿಸಿ ಅರ್ಜಿ ಸಲ್ಲಿಸಿತ್ತು. ವಕ್ಫ್ ಮಂಡಳಿ ವಾದದಲ್ಲಿ ಯಾವುದೇ ಹುರುಳಿಲ್ಲ ಎಂದು ಎಎಸ್ಐ ಹೇಳಿತ್ತು. ಮಂಗಳವಾರ ಈ ಸಂಬಂಧ ಮು.ನ್ಯಾ. ದೀಪಕ್ ಮಿಶ್ರಾ, ನ್ಯಾ. ಎ.ಎಂ. ಖನ್ವಿಲ್ಕರ್ ಮತ್ತು ನ್ಯಾ. ಡಿ.ವೈ. ಚಂದ್ರಚೂಡ್ ಪೀಠ ಪ್ರಕರಣದ ವಿಚಾರಣೆ ನಡೆಸಿದೆ. ವಕ್ಫ್ ಮಂಡಳಿ ವಾದವನ್ನು ಆಧರಿಸಿ ಸೂಕ್ತ ದಾಖಲೆಗಳನ್ನು ಒಂದು ವಾರದೊಳಗೆ ಕೋರ್ಟ್ಗೆ ಹಾಜರು ಪಡಿಸುವಂತೆ ತಾಕೀತು ಮಾಡಿದೆ. ಶಹಜಹಾನ್ ಸಹಿ ಇರುವ ಎಲ್ಲಾ ದಾಖಲೆಗಳನ್ನು ತೋರಿಸಿ ಎಂದು ಸ್ವತಃ ಮುಖ್ಯ ನ್ಯಾಯಮೂರ್ತಿಗಳೇ ಆದೇಶಿಸಿದ್ದಾರೆ. ಎಎಸ್ಐ ಪರ ವಕೀಲ ಎಡಿಎನ್ ರಾವ್ ವಾದ ಮಂಡಿಸುತ್ತಿದ್ದು, ಆ ಸಮಯದಲ್ಲಿ ವಕ್ಫ್ನಾಮಾ ಅಸ್ತಿತ್ವದಲ್ಲೇ ಇರಲಿಲ್ಲ ಎಂದಿದ್ದಾರೆ.
ತಾಜ್ಮಹಲ್ ಆಸ್ತಿ ವಿವಾದ; ವಕ್ಫ್ ಮಂಡಳಿಗೆ ಸಿಜೆಐ ತಾಕೀತು.
ಸ್ವತಃ ಶಹಜಹಾನ್ ಹಸ್ತಾಂತರಿಸಿದ್ದರು ಎಂದಿರುವ ವಕ್ಫ್ ಮಂಡಳಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು