ಯಾರದೋ ವಸ್ತು ತೋರಿಸಿ ಯಾಮಾರಿಸ್ತಾರೆ!


Team Udayavani, Oct 29, 2018, 12:06 PM IST

yarado.jpg

ಬೆಂಗಳೂರು: ಬ್ಯಾಂಕ್‌ ಖಾತೆಗಳಿಂದ ಹಲವು ಮಾರ್ಗಗಳಲ್ಲಿ ಹಣ ವರ್ಗಾವಣೆ ಮಾಡಿಕೊಳ್ಳುವ ಸೈಬರ್‌ ವಂಚಕರು, ಆನ್‌ಲೈನ್‌ ಮಾರಾಟ ತಾಣಗಳನ್ನು ತಮ್ಮ ವಂಚನೆಗೆ ರಹದಾರಿ ಮಾಡಿಕೊಂಡಿದ್ದಾರೆ!

ಒಎಲ್‌ಎಕ್ಸ್‌, ಕ್ವಿಕ್ಕರ್‌ ಸೇರಿದಂತೆ ಇತರೆ ಆನ್‌ಲೈನ್‌ ಮಾರಾಟ ತಾಣಗಳಲ್ಲಿ ಸಕ್ರಿಯವಾಗಿರುವ ವಂಚಕರು, ಬೇರೊಬ್ಬರ ಒಡೆತನದ ಬೈಕ್‌, ಕಾರು, ಮೊಬೈಲ್‌ ಸೇರಿ ಇನ್ನಿತರೆ ವಸ್ತುಗಳ ಫೋಟೋಗಳನ್ನು ಪ್ರಕಟಿಸಿ ವಾಹನಗಳನ್ನು ಖರೀದಿಸಲು ಆಸಕ್ತಿ ತೋರುವ ಗ್ರಾಹಕರನ್ನು ವಂಚಿಸಿ ಹಣ ದೋಚುತ್ತಿದ್ದಾರೆ.

ಆನ್‌ಲೈನ್‌ ಮಾರಾಟ ತಾಣಗಳಲ್ಲಿ ವಾಹನಗಳು ಅಥವಾ ವಸ್ತುಗಳ ಫೋಟೋ ನೋಡಿ ಖರೀದಿಸಲು ಮುಂದಾಗಿ ಬಳಿಕ ಹಣ ಕಳೆದುಕೊಂಡ ಪೊಲೀಸ್‌ ಸೈಬರ್‌ ಕ್ರೈಂ ಠಾಣೆ ಮೆಟ್ಟಿಲೇರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಆನ್‌ಲೈನ್‌ ಮಾರಾಟ ತಾಣದಲ್ಲಿ ಕಾರು, ಬೈಕ್‌ ಫೋಟೋಗಳನ್ನು ಮಾರಾಟಕ್ಕಿಟ್ಟು, ಖರೀದಿಸಲು ಆಸಕ್ತಿ ತೋರಿದವರ ಬಳಿ ಮುಂಗಡ ರೂಪದಲ್ಲಿ ಬ್ಯಾಂಕ್‌ ಖಾತೆಗೆ ಹಣ ಹಾಕಿಸಿಕೊಂಡು ಬಳಿಕ, ಆರೋಪಿ ಫೋನ್‌ ಸ್ವಿಚ್‌ ಆಫ್ ಮಾಡಿಕೊಂಡಿದ್ದಾರೆ ಎಂದು ದೂರುದಾರರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಈ ರೀತಿಯ ವಂಚನೆಗೊಳಗಾದ ಸಂಬಂಧ ಪ್ರತಿ ನಿತ್ಯ ಕನಿಷ್ಠ ಎರಡು ಪ್ರಕರಣಗಳು ದಾಖಲಾಗುತ್ತಿವೆ. ಆರೋಪಿಗಳು, ವಂಚನೆಗೆ ಬಳಸಿದ ಸಿಮ್‌ ಕಾರ್ಡ್‌ ಹಾಗೂ ಮಾರಾಟ ಜಾಲತಾಣದ ಅಕೌಂಟ್‌ ಬಳಸುವುದಿಲ್ಲ. ಬಹುತೇಕ ನಕಲಿ ಅಕೌಂಟ್‌ಗಳಲ್ಲಿಯೇ ವಂಚನೆ ನಡೆಸಿರುತ್ತಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡುತ್ತಾರೆ.

ಬೈಕ್‌ ಮಾರಾಟಕ್ಕಿರುವುದಾಗಿ ಹೇಳಿ ವಂಚನೆ: ಖಾಸಗಿ ಕಂಪನಿ ಉದ್ಯೋಗಿ ಶಂಕರ್‌ ವರೀಶ್‌ ಕಾಮತ್‌ ಎಂಬುವವರು ಬೈಕ್‌ ಖರೀದಿಸುವ ಸಲುವಾಗಿ ಓಎಲ್‌ಎಕ್ಸ್‌ ತಾಣದಲ್ಲಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಯಮಹಾ ಎಫ್ಝಡ್‌ ಬೈಕ್‌ ಮಾರಾಟದ ಜಾಹೀರಾತು ನೋಡಿ, ಸಂಬಂಧಿಸಿದ ಮೊಬೈಲ್‌ ನಂಬರ್‌ಗೆ ಕರೆ ಮಾಡಿದ್ದರು.

ಈ ವೇಳೆ ಬೈಕ್‌ ನೀಡಲು ಒಪ್ಪಿದ್ದ ಅಪರಿಚಿತ ಸೈಬರ್‌ ವಂಚಕ, ಮುಂಗಡ ಹಣವಾಗಿ 64,450 ರೂ. ತನ್ನ ಖಾತೆಗೆ ಹಾಕಿಸಿಕೊಂಡಿದ್ದಾನೆ. ಬಳಿಕ ತಾನು ನೀಡಿದ್ದ ಬೈಕ್‌ ಜಾಹೀರಾತು ಪೋಸ್ಟ್‌ ತೆಗೆದಿದ್ದಾನೆ. ಜತೆಗೆ, ಆತ ನೀಡಿದ್ದ ಮೊಬೈಲ್‌ ನಂಬರ್‌ ಕೂಡ ಸ್ವಿಚ್‌ ಆಫ್ ಮಾಡಿಕೊಂಡಿದ್ದ. ಹಲವು ಬಾರಿ ಕರೆ ಮಾಡಿದರೂ ಸಂಪರ್ಕ ಸಾಧ್ಯವಾಗಿಲ್ಲ. ಪರಿಣಾಮ ವಂಚನೆಗೊಳಗಾದ ಬಗ್ಗೆ ಅರಿವಾದ ಬಳಿಕ  ಶಂಕರ್‌ ಅವರು ಸೈಬರ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ಒನ್‌ಫ್ಲಸ್‌ 6 ಮೊಬೈಲ್‌ ಫೋಟೋ  ಹಾಕಿ ವಂಚನೆ!: ಮತ್ತೂಂದು ಪ್ರಕರಣದಲ್ಲಿ ಪ್ರಮೋದ್‌ ಎಂಬುವವರು ಕಡಿಮೆ ಬೆಲೆಗೆ ಮೊಬೈಲ್‌ ಖರೀದಿಸುವ ಸಲುವಾಗಿ ಒಎಲ್‌ಎಕ್ಸ್‌ ಜಾಲತಾಣದಲ್ಲಿ, ಮಾರಟಗಾರನೊಬ್ಬ ಹಾಕಿದ್ದ ಒನ್‌ ಫ್ಲಸ್‌6 ಮೊಬೈಲ್‌ ಖರೀದಿಸಲು ಮುಂದಾಗಿದ್ದರು. ಈ ವೇಳೆ ವಂಚಕ, ಮುಂಗಡವಾಗಿ 20 ಸಾವಿರ ರೂ. ಪಡೆದುಕೊಂಡು ಬಳಿಕ ತನ್ನ ಮೊಬೈಲ್‌ ನಂಬರ್‌ ಸ್ವಿಚ್‌ ಆಫ್ ಮಾಡಿಕೊಂಡಿದ್ದಾನೆ.

ಸಾರ್ವಜನಿಕರು ಎಚ್ಚರ ವಹಿಸಬೇಕು!: ಸೈಬರ್‌ ವಂಚನೆಗೆ ಕಡಿವಾಣ ಹಾಕುವಲ್ಲಿ ಸಾರ್ವಜನಿಕರ ಪಾತ್ರವೂ ಮಹತ್ವದ್ದಾಗಿದೆ. ಆನ್‌ಲೈನ್‌ ಮಾರಾಟ ತಾಣಗಳಲ್ಲಿ ಸಕ್ರಿಯವಾಗಿರುವ ವಂಚಕರು ತಾವು ಪ್ರಕಟಿಸುವ ವಸ್ತುಗಳ ಮಾಲೀಕರು ಆಗಿರುವುದಿಲ್ಲ. ವಸ್ತುಗಳನ್ನು ತಂದುಕೊಟ್ಟ ಬಳಿಕವೇ ಪೂರ್ತಿ ಹಣ ಪಾವತಿಸುವುದಾಗಿ ಸ್ಪಷ್ಟವಾಗಿ ಹೇಳಬೇಕು.

ಸಾಮಾನ್ಯವಾಗಿ ನೀವು ಕಡಿಮೆ ಮುಂಗಡ ಹಣ ನೀಡುವುದಾಗಿ ಹೇಳಿದರೂ ವಂಚಕರು ಒಪ್ಪಿಕೊಳ್ಳುತ್ತಾರೆ. ಜತೆಗೆ, ಪದೇ ಪದೆ ಅವರೇ ಕರೆ ಮಾಡಿ ಮಾರಾಟಕ್ಕಿಟ್ಟ ವಸ್ತುಗಳನ್ನು ತೆಗೆದುಕೊಳ್ಳುವಂತೆ ಒತ್ತಡ ಹೇರುತ್ತಾರೆ. ಈ ರೀತಿಯ ಕೆಲವು ಸೂಕ್ಷ್ಮತೆಗಳನ್ನು ಗಮನಿಸಿ ಎಚ್ಚರದಿಂದಿದ್ದರೆ ವಂಚನೆಯಿಂದ ತಪ್ಪಿಸಿಕೊಳ್ಳಬಹುದು ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದರು.

* ಮಂಜುನಾಥ ಲಘುಮೇನಹಳ್ಳಿ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.