ಶ್ಯಾಮ್‌ ಭಟ್‌ ಸೇರಿ ಮೂವರ ವಿರುದ್ಧ ಪ್ರಕರಣ


Team Udayavani, May 15, 2019, 3:05 AM IST

shambhat

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಪುತ್ರನಿಗೆ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆ ಕೊಡಿಸುವುದಾಗಿ ವಂಚಿಸಿದ್ದಾರೆಂದು ಆರೋಪಿಸಿ ನಿವೃತ್ತ ಆರ್‌ಎಸ್‌ಐಯೊಬ್ಬರು ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶ್ಯಾಮ್‌ ಭಟ್‌ ಸೇರಿ ಮೂವರ ವಿರುದ್ಧ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತುಮಕೂರಿನ ಕ್ಯಾತಸಂದ್ರ ನಿವಾಸಿ ನಿವೃತ್ತ ಆರ್‌ಎಸ್‌ಐ ಸಿದ್ದಯ್ಯ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶ್ಯಾಮ್‌ಭಟ್‌, ನಿವೃತ್ತ ಆರ್‌ಎಸ್‌ಐ ಪ್ರದೀಪ್‌, ಮಂಗಳೂರು ಜೆಡಿಎಸ್‌ ಮುಖಂಡ ಧನರಾಜ್‌ ವಿರುದ್ಧ ಉಪ್ಪಾರಪೇಟೆ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎರಡು ವರ್ಷಗಳ(2017) ಹಿಂದೆ ಸಿದ್ದಯ್ಯ ಅವರು ಮೈಸೂರು ರಸ್ತೆಯಲ್ಲಿರುವ ಸಿಎಆರ್‌ ಕೇಂದ್ರದಲ್ಲಿ ಆರ್‌ಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದರು. ಆ ವೇಳೆ ಆರ್‌ಎಸ್‌ಐ ಆಗಿದ್ದ ಪ್ರದೀಪ್‌ ಅವರು ಸಿದ್ದಯ್ಯ ಮಗ ನಾಗೇಂದ್ರ ಎಂಬುವವರಿಗೆ ಅಬಕಾರಿ ಇಲಾಖೆಯಲ್ಲಿ ಸಬ್‌ಇನ್‌ಸ್ಪೆಕ್ಟರ್‌ ಹುದ್ದೆ ಕೊಡಿಸುತ್ತೇನೆ ಎಂದು ನಂಬಿಸಿದ್ದರು.

ಈ ಸಂಬಂಧ ಜೆಡಿಎಸ್‌ ಮುಖಂಡ ಧನರಾಜ್‌ ಎಂಬುವರನ್ನೂ ಪರಿಚಯಿಸಿದ್ದರು. ಅನಂತರ ಧನಂಜಯ್‌, ಸಿದ್ದಯ್ಯ ಹಾಗೂ ಅವರ ಪುತ್ರ ನಾಗೇಂದ್ರರನ್ನು ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶ್ಯಾಮ್‌ಭಟ್‌ ಅವರ ಬಳಿ ಕರೆದೊಯ್ದು, ಅಬಕಾರಿ ಇಲಾಖೆಯಲ್ಲಿ ಸಬ್‌ಇನ್‌ಸ್ಪೆಕ್ಟರ್‌ ಹುದ್ದೆ ಬಗ್ಗೆ ಮಾತುಕತೆ ನಡೆಸಿ 20 ಲಕ್ಷ ರೂ.ಗೆ ನಿಗದಿ ಮಾಡಲಾಗಿತ್ತು. ಅದನ್ನು ನಂಬಿದ ಸಿದ್ದಯ್ಯ ಅವರು ಹಣ ಕೊಡಲು ಒಪ್ಪಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮೊದಲಿಗೆ 10 ಲಕ್ಷ ರೂ. ಕೊಡಬೇಕು. ಕೆಲಸ ಸಿಕ್ಕ ನಂತರ ಉಳಿದ 10 ಲಕ್ಷ ರೂ. ನೀಡಬೇಕು. ಜತೆಗೆ ವೈಯಕ್ತಿಕವಾಗಿ 5 ಲಕ್ಷ ರೂ. ನೀಡಬೇಕು ಎಂದು ಧನರಾಜ್‌ ಬೇಡಿಕೆ ಇಟ್ಟಿದ್ದರು. ಅದರಂತೆ 2017 ಜೂ.8 ರಂದು 4.50 ಲಕ್ಷ ರೂ. ನಗದು ಹಾಗೂ 2 ಲಕ್ಷ ರೂ. ಚೆಕ್‌ ಅನ್ನು ಧನರಾಜ್‌ಗೆ ಹಾಗೂ 3.50 ಲಕ್ಷ ರೂ.ವನ್ನು ಮೈಸೂರು ರಸ್ತೆಯಲ್ಲಿರುವ ನಿವಾಸದಲ್ಲಿ ಪ್ರದೀಪ್‌ಗೆ ಸಿದ್ದಯ್ಯ ಕೊಟ್ಟಿದ್ದರು ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಕೆಲ ದಿನಗಳ ಬಳಿಕ ಧನರಾಜ್‌ಗೆ ಸಂಪರ್ಕಿಸಿದಾಗ ಹಣವನ್ನು ಶ್ಯಾಮ್‌ಭಟ್‌ ಅವರಿಗೆ ಕೊಟ್ಟಿದ್ದೇನೆಂದು ಮಾಹಿತಿ ನೀಡಿದ್ದರು. ಅನಂತರ ಧನರಾಜ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಬಗ್ಗೆ ಶ್ಯಾಮ್‌ ಭಟ್‌ ಅವರ ಬಳಿ ವಿಚಾರಿಸಿದಾಗ, ಎರಡನೇ ಲಿಸ್ಟ್‌ನಲ್ಲಿ ಪುತ್ರನಿಗೆ ಕೆಲಸ ಗ್ಯಾರಂಟಿ ಆಗುತ್ತದೆ ಎಂದು ನಂಬಿಸಿದ್ದರು. ಆದರೆ, ವರ್ಷವಾದರೂ ಕೆಲಸ ಸಿಗದಿದ್ದಾಗ ಆತಂಕಗೊಂಡ ಸಿದ್ದಯ್ಯ, ಹಣ ಹಿಂದಿರುಗಿಸುವಂತೆ ಧನರಾಜ್‌ರನ್ನು ಕೇಳಿದಾಗ ವಿವಿಧ ಹಂತದಲ್ಲಿ ಮೂರು ಲಕ್ಷ ರೂ. ಹಣ ವಾಪಸ್‌ ನೀಡಿದ್ದಾರೆ.

ಆದರೆ, ಇನ್ನುಳಿದ 7 ಲಕ್ಷ ರೂ.ಕೊಡದೇ ಇಲ್ಲದ ಸಬೂಬು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಮೇ 12ರಂದು ಸಿದ್ದಯ್ಯ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಡಿಸಿಪಿ ರವಿ ಡಿ. ಚೆನ್ನಣ್ಣನವರ್‌, ಸದ್ಯದಲ್ಲೇ ಶ್ಯಾಮ್‌ ಭಟ್‌ ಸೇರಿ ಮೂವರು ಆರೋಪಿಗಳಿಗೂ ನೋಟಿಸ್‌ ಜಾರಿ ಮಾಡಿ ವಿಚಾರಣೆಗೆ ಕರೆಸಲಾಗುವುದು ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.