ಲಕ್ಷ್ಮೇಶ್ವರ ಪ್ರಕರಣ ಸಿಐಡಿಗೆ: ಪರಮೇಶ್ವರ್
Team Udayavani, Feb 7, 2017, 3:45 AM IST
ಬೆಂಗಳೂರು: ಗದಗ ಜಿಲ್ಲೆ ಲಕ್ಷ್ಮೇಶ್ವರ ಠಾಣಾ ಪೊಲೀಸರ ವಶದಲ್ಲಿದ್ದ ಲಾರಿ ಚಾಲಕ ಶಿವಪ್ಪ ದುಂಡಪ್ಪ ಭದ್ರಾಪುರ ಅಲಿಯಾಸ್ ಗೋಣಿ (23) ಎಂಬಾತ ಮೃತಪಟ್ಟ ಪ್ರಕರಣ ಹಾಗೂ ಪೊಲೀಸ್ ಠಾಣೆ, ಜೀಪ್ಗೆ ಬೆಂಕಿ ಹಚ್ಚಿದ ಘಟನೆಗಳ ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಠಾಣೆ ಮತ್ತು ಜೀಪ್ಗೆ ಬೆಂಕಿ ಹಚ್ಚಿದ್ದರ ಹಿಂದೆ ಅಲ್ಲಿನ ಮರಳು ಮಾಫಿಯಾದ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಅಲ್ಲದೆ, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 25ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಘಟನೆ ಸಂಬಂಧ ಪೊಲೀಸರು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ. ತನಿಖೆ ನಡೆಸಿ ಘಟನೆಗೆ ಕಾರಣರಾದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ ಎಂದರು.
ಭಾನುವಾರವಷ್ಟೇ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬನ ಅನುಮಾನಾಸ್ಪದ ಸಾವಾಗಿದೆ ಎಂಬ ಕಾರಣದಿಂದ ರೊಚ್ಚಿಗೆದ್ದ ಸ್ಥಳೀಯ ಜನ ಠಾಣೆಗೆ ನುಗ್ಗಿ ದಾಂಧಲೆ ಎಬ್ಬಿಸಿದ್ದರು. ಅಲ್ಲದೆ ಪೊಲೀಸ್ ವಾಹನಗಳಿಗೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ