![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ದೇವರಾಜ ಅರಸು ಕಾರಲ್ಲಿ ಸಿದ್ದು ಸವಾರಿ
Team Udayavani, Aug 21, 2018, 6:00 AM IST
![ban21081801medn.jpg](https://www.udayavani.com/wp-content/uploads/2018/08/21/ban21081801medn.jpg)
ಬೆಂಗಳೂರು: ಸಾಮಾಜಿಕ ನ್ಯಾಯದ ಹರಿಕಾರ ಎಂದೇ ಖ್ಯಾತರಾಗಿದ್ದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೋಮವಾರ ಪ್ರಯಾಣ ಮಾಡಿ ಖುಷಿ ಪಟ್ಟರು.
ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರ ಜನ್ಮ ದಿನದ ಅಂಗವಾಗಿ ಕೆಪಿಸಿಸಿ ಕಚೇರಿಗೆ ದೇವರಾಜ್ ಅರಸು ಬಳಸುತ್ತಿದ್ದ ಕಾರು ಬಂದಿತ್ತು. ಸಮಾರಂಭ ಮುಗಿದ ನಂತರ ಕೆಪಿಸಿಸಿ ಕಚೇರಿಯಿಂದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ಮಾಜಿ ಸಚಿವ ಎಚ್.ಆಂಜನೇಯ ಕೆಂಪು ದೀಪದ ಸೈರನ್ ಅಳವಡಿಸಿರುವ ಕರಿ ಬಣ್ಣದ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಝೀರೋ ಟ್ರಾಫಿಕ್ನಲ್ಲಿ ತೆರಳಿ ಅರಸು ಕಾರಿನ ಗತ್ತು ಅನುಭವಿಸಿದರು. ಆದರೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತ್ರ ಆ ಕಾರಿನಲ್ಲಿ ಪ್ರಯಾಣಿಸದೇ ದೂರ ಉಳಿದರು.
ದೇವರಾಜ ಅರಸು ಅವರು 1978 ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಹೊಸ ಕಾರು ಖರೀದಿಸಿದ್ದರು. ನಂತರದ ವಿದ್ಯಮಾನಗಳಲ್ಲಿ ಅರಸು ಕಾಂಗ್ರೆಸ್ ಎಂಬ ಪ್ರತ್ಯೇಕ ಪಕ್ಷ ಸ್ಥಾಪಿಸಿದ್ದರು. 1980 ರಲ್ಲಿ ಲೋಕಸಭೆಗೆ ಚುನಾವಣೆ ನಡೆದಾಗ ಅರಸು ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದರಿಂದ ಅರಸು ಕಾಂಗ್ರೆಸ್ ಎಲ್ಲ ಕ್ಷೇತ್ರಗಳಲ್ಲಿಯೂ ಸೋಲು ಅನುಭವಿಸಿತು. ಆಗ ಅರಸು ಜೊತೆಗಿದ್ದ ಶಾಸಕರೆಲ್ಲ ಆರ್. ಗುಂಡೂರಾವ್ ಜತೆಗೂಡಿ ಅರಸು ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರು. ಗುಂಡೂರಾವ್ ಮುಖ್ಯಮಂತ್ರಿಯಾದರು.
ಮುಖ್ಯಮಂತ್ರಿಯಾದ ಮೇಲೆ ಗುಂಡೂರಾವ್ ಅವರು ಅರಸು ಬಳಸುತ್ತಿದ್ದ ಕಾರು ಬಳಸುವುದಿಲ್ಲ ಎಂದು ಹೇಳಿ ಕಾರು ಹಾಗೂ ಅರಸು ವಾಸವಾಗಿದ್ದ ಬಾಲಬ್ರೂಹಿ ಅತಿಥಿಗೃಹ ಎರಡರಿಂದಲೂ ದೂರ ಉಳಿದಿದ್ದರು. ನಂತರದ ದಿನಗಳಲ್ಲಿ ಅರಸು ಬಳಸಿದ್ದ ಕಾರು ಸರ್ಕಾರಿ ಗೋದಾಮಿನಲ್ಲಿ ಇಡಲಾಗಿತ್ತು. ಅದನ್ನು ಗಮನಿಸಿದ ಅರಸು ಅಭಿಮಾನಿ ಉದ್ಯಮಿ ಮಹದೇವು ಎಂಬುವರು 13 ಲಕ್ಷ ರೂ.ಗೆ ಹರಾಜಿನಲ್ಲಿ ಖರೀದಿಸಿದ್ದರು.
ನಂತರ ಪ್ರತಿ ವರ್ಷ ದೇವರಾಜ ಅರಸು ಅವರ ಜನ್ಮ ದಿನದ ಪ್ರಯುಕ್ತ ವಿಧಾನಸೌಧಕ್ಕೆ ತಂದು ವಾಪಸ್ ತೆಗೆದುಕೊಂಡು ಹೋಗುವ ಪರಿಪಾಠ ರೂಢಿಸಿಕೊಂಡಿದ್ದಾರೆ. ಸರ್ಕಾರ ಬಯಸಿದರೆ ಅದನ್ನು ಸರ್ಕಾರಕ್ಕೆ ನೀಡಲು ಸಿದ್ಧನಿದ್ದೇನೆ. ಆದರೆ ಸರ್ಕಾರ ಆ ಕಾರನ್ನು ದೇವರಾಜ ಅರಸರ ಸ್ಮರಣೆಗಾಗಿ ಸಂರಕ್ಷಿಸಬೇಕು ಎಂದು ಮಹದೇವು ಹೇಳಿದರು.
ಅಂದು ಅರಸು ಅವರು ಬಳಸಿದ್ದ ಕಾರನ್ನು ಗುಂಡೂರಾವ್ ಬಳಸಿರಲಿಲ್ಲ. ಸೋಮವಾರ ಕೆಪಿಸಿಸಿ ಕಚೇರಿ ಬಳಿ ಬಂದ ಕಾರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಸಹ ಕೂರಲಿಲ್ಲ ಎಂಬುದು ಕಾಕತಾಳೀಯ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.