ರಮೇಶ್ ವಿರುದ್ಧ ಸಿದ್ದರಾಮಯ್ಯ ಗರಂ
Team Udayavani, Feb 18, 2019, 12:30 AM IST
ಬೆಂಗಳೂರು: ಅತೃಪ್ತ ಶಾಸಕರ ನಾಯಕ ರಮೇಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.
ಶುಕ್ರವಾರ ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ಬಿ ನಾಗೇಂದ್ರ ಅವರ ಜತೆಗೆ ಸಿದ್ದರಾಮಯ್ಯ ಅವರನ್ನು ಭೇಟಿಯಾದಾಗ, ರಮೇಶ್ ಜಾರಕಿಹೊಳಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗಾವಿ ಜಿಲ್ಲೆಯಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಅವರ ಹಸ್ತಕ್ಷೇಪ ಹೆಚ್ಚಾಗಿದ್ದಕ್ಕೆ ತಮಗೆ ಅಸಮಾಧಾನವಾಗಿತ್ತು ಎಂದು ರಮೇಶ್ ಜಾರಕಿಹೊಳಿ ಸಮಜಾಯಿಸಿ ನೀಡುವ ಪ್ರಯತ್ನ ನಡೆಸಿದ್ದರು ಎನ್ನಲಾಗಿದ್ದು, ಅದು ನಿಮ್ಮಿಬ್ಬರ ವೈಯಕ್ತಿಕ ವಿಷಯ ಅದಕ್ಕಾಗಿ ಪಕ್ಷದ ವಿರುದಟಛಿ ತಿರುಗಿ ಬೀಳುವುದು ಎಷ್ಟು ಸರಿ? ನಿಮ್ಮ ನಡವಳಿಕೆಯಿಂದ ಪಕ್ಷದಲ್ಲಿ ಎಲ್ಲರೂ ನನ್ನ ಮೇಲೆ ಸಂಶಯ ಪಡುವಂತಾಯಿತು ಎಂದು ಸಿದ್ದರಾಮಯ್ಯ ಗರಂ ಆಗಿದ್ದರು ಎಂದು ಹೇಳಲಾಗುತ್ತಿದೆ.
ಬಿಜೆಪಿಯಲ್ಲಿಯೇ ಯಡಿಯೂರಪ್ಪ ಅವರನ್ನು ಯಾರೂ ನಂಬುತ್ತಿಲ್ಲ. ನೀವು ಅವರನ್ನು ನಂಬಿ ಜೀವನ ಹಾಳು ಮಾಡಿಕೊಳ್ಳುತ್ತಿದ್ದೀರ. ಸಚಿವ ಸ್ಥಾನ ನೀಡಿದ್ದರೂ, ಸಂಪುಟ ಸಭೆಗೆ ಹಾಜರಾಗದೇ ದೂರ ಉಳಿದುಕೊಂಡಿದ್ದೇಕೆ? ಬೆಳಗಾವಿಯಲ್ಲಿಯೇ ಅಧಿವೇಶನ ನಡೆದರೂ ಯಾಕೆ ಪಾಲ್ಗೊಂಡಿರಲಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಆಗಿರುವ ತಪ್ಪು ಸರಿಪಡಿಸಿಕೊಂಡು ನಿಮ್ಮೊಂದಿಗೆ ಇರುತ್ತೇನೆ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕ ಸ್ಥಾನ
ಅನರ್ಹಗೊಳಿಸುವಂತೆ ಸಭಾಧ್ಯಕ್ಷ ರಮೇಶ್ ಕುಮಾರ್ ಅವರಿಗೆ ನೀಡಿರುವ ದೂರು ವಾಪಸ್ ಪಡೆಯುವಂತೆ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ ಎನ್ನಲಾಗಿದ್ದು, ಆದರೆ, ತಕ್ಷಣಕ್ಕೆ ದೂರು ವಾಪಸ್ ಪಡೆಯಲು ಸಿದ್ದರಾಮಯ್ಯ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ