ಜೆಡಿಎಸ್ ಜೊತೆ ಹೊಂದಾಣಿಕೆ ಕಷ್ಟ:ಪ್ರಗತಿಪರರಿಗೆ ಸ್ಪಷ್ಟಪಡಿಸಿದ ಸಿಎಂ
Team Udayavani, Mar 30, 2018, 6:40 AM IST
ಬೆಂಗಳೂರು: ಕೋಮವಾದಿ ಶಕ್ತಿಯನ್ನು ಅಧಿಕಾರದಿಂದ ದೂರ ಇಡಲು ಜಾತ್ಯತೀತ ಶಕ್ತಿಗಳ ಜೊತೆಗೆ ಕೈ ಜೋಡಿಸಲು ಕಾಂಗೆಸ್ ಸಿದ್ದವಾಗಿದೆ. ಆದರೆ, ಜೆಡಿಎಸ್ ಜೊತೆಗೆ ಮೈತ್ರಿ ಕಷ್ಟ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮನ್ನು ಭೇಟಿ ಮಾಡಿದ ಪ್ರಗತಿಪರ ಸಾಹಿತಿಗಳಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಶಾಸಕ ಎ.ಕೆ. ಸುಬ್ಬಯ್ಯ ನೇತೃತ್ವದ ಸಂವಿಧಾನ ಉಳಿವಿಗಾಗಿ ಕರ್ನಾಟಕ ಜನಾಂದೋಲನ ಸಮಿತಿಯ ಚಿಂತಕರ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಯಾವುದೇ ಪಕ್ಷವು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ಸಾಧ್ಯತೆ ಕಡಿಮೆ. ಬಿಜೆಪಿ ಅಧಿಕಾರಕ್ಕೆ ಬರುವುದು ತಡೆಯಲು ಜಾತ್ಯತೀತ ಶಕ್ತಿಗಳು ಒಟ್ಟುಗೂಡಿ ಚುನಾವಣೆ ಎದುರಿಸಬೇಕೆಂಬ ಸಲಹೆ ನೀಡಿದರು.
ಆಗ ಸಿದ್ದರಾಮಯ್ಯ ಅವರು, ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ತಾವೊಬ್ಬರೇ ತೀರ್ಮಾನ ತೆಗೆದುಕೊಳ್ಳಲು ಆಗುವುದಿಲ್ಲ. ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಬೇಕಿದೆ. ಇತ್ತೀಚಿನ ದಿನಗಳಲ್ಲಿ ಜೆಡಿಎಸ್ ಬೇರೆ ಮಾರ್ಗದಲ್ಲಿ ನಡೆಯುತ್ತಿರುವುದರಿಂದ ಅವರೊಂದಿಗೆ ಹೊಂದಾಣಿಕೆ ಕಷ್ಟವಾಗಲಿದೆ. ಆದರೂ ಜಾತ್ಯತೀತ ಮತಗಳು ಒಡೆದು ಹೋಗದಂತೆ ನೋಡಿಕೊಳ್ಳಲು ಅಗತ್ಯವಿರುವ ಸಣ್ಣ ಪುಟ್ಟ ಪಕ್ಷಗಳ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದು ಭರವಸೆ ನೀಡಿದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ