ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
Team Udayavani, Aug 25, 2021, 8:52 PM IST
ಬೆಂಗಳೂರು: ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಯುವತಿ ಮೇಲೆ ಅತ್ಯಾಚಾರ ನಡೆಸಿರುವುದು ದುರದೃಷ್ಟಕರ. ಸಂತ್ರಸ್ಥೆ ಹಾಗೂ ಆಕೆಯ ಕುಟುಂಬ ಪರ ನಾವು ನಿಲ್ಲುತ್ತೇವೆ ಎಂದಿರುವ ಅವರು, ಸಂಸ್ತ್ರಸ್ಥೆಗೆ ನ್ಯಾಯ ಒದಗಿಸಿಕೊಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ.
ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು.@CMofKarnataka#LawlessKarnataka
1/2 pic.twitter.com/4ZWnMJFYBo— Siddaramaiah (@siddaramaiah) August 25, 2021
ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿಗಳು ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿಂದ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕು. ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು ಎಂದು ಆಗ್ರಹಿಸಿದ್ದಾರೆ.
ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ.@CMofKarnataka ಅವರು, ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿಂದ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕು.#LawlessKarnataka
2/2— Siddaramaiah (@siddaramaiah) August 25, 2021
ಇನ್ನು ಮಂಗಳವಾರ ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ 6 ಮಂದಿ ದುಷ್ಕರ್ಮಿಗಳು ಯುವಕನಿಗೆ ಹಲ್ಲೆ ಮಾಡಿ ನಂತರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅತ್ಯಾಚಾರದ ಬಳಿಕ ವಿದ್ಯಾರ್ಥಿನಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಸಂಬಂಧ ಆಲನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!