ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ಎತ್ತಂಗಡಿ
Team Udayavani, Jun 26, 2018, 6:50 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಅಧಿಕಾರಿಗಳನ್ನು ಎತ್ತಂಗಡಿ ಮಾಡಲು ಸಿದ್ಧತೆ ನಡೆದಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ಬೆಂಗಳೂರು ಪಶ್ಚಿಮ ವಲಯ ಉಪವಿಭಾಗಾಧಿಕಾರಿ ಆಗಿದ್ದ ಕೆ.ಎಸ್. ಜಗದೀಶ್ ಅವರನ್ನು ವರ್ಗಾ ವಣೆ ಮಾಡಲಾಗಿದೆ.
ಸಿದ್ದರಾಮಯ್ಯ ಇನ್ನೊಬ್ಬ ಆಪ್ತರಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಅವರನ್ನೂ ವರ್ಗಾಯಿಸ ಲಾಗುವುದು ಎಂದು ಹೇಳಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಆಯುಕ್ತರಾಗಿರುವ ಹರ್ಷ ಅವರನ್ನೂ ವರ್ಗಾಯಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯುಕ್ತರಾಗಿರುವ ವಿಶುಕುಮಾರ್ ಅವರನ್ನು ಮತ್ತೆ ವಾರ್ತಾ ಇಲಾಖೆಗೆ ತರುವ ಪ್ರಯತ್ನ ನಡೆದಿದೆ. ಅಲ್ಲದೇ ಕೊರಟಗೆರೆ ಜೆಡಿಎಸ್ ಶಾಸಕರಾಗಿದ್ದ ಸುಧಾಕರ ಲಾಲ್ ಅವರ ಪತ್ನಿ ರೂಪಾ ಅವರನ್ನು ಬೆಂಗಳೂರು ನಗರ ವಿಶೇಷ ಜಿಲ್ಲಾಧಿಕಾರಿಯಾಗಿ ನೇಮಿಸಿರುವುದು ಕಾಂಗ್ರೆಸ್ ನಾಯಕರಿಗೆ ಇರುಸು ಮುರಿಸು ಉಂಟು ಮಾಡಿದೆ ಎನ್ನಲಾಗಿದೆ.