ಬಿಜೆಪಿ ಜನವಿರೋಧಿ ಸಿದ್ಧಾಂತ ಪಡೆದಿರುವುದು ಆರ್ ಎಸ್ ಎಸ್ ನಿಂದ: ಸಿದ್ದರಾಮಯ್ಯ
ಕಾಂಗ್ರೆಸ್ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Team Udayavani, Dec 28, 2021, 12:53 PM IST
ಬೆಂಗಳೂರು : ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ವೈಯಕ್ತಿಕವಾದುದಲ್ಲ, ಇದೊಂದು ಸೈದ್ದಾಂತಿಕ ಹೋರಾಟ. ನಮ್ಮದು ಜನಪರವಾದ ಸಿದ್ದಾಂತ. ಆ ಸಿದ್ದಾಂತವನ್ನು ನಾವು ಪಡೆದುಕೊಂಡಿರುವುದು ಸಂವಿಧಾನದಿಂದ. ಬಿಜೆಪಿಯದ್ದು ಜನವಿರೋಧಿ ಸಿದ್ದಾಂತ, ಆ ಸಿದ್ದಾಂತವನ್ನು ಅವರು ಪಡೆದಿರುವುದು ಆರ್ ಎಸ್ ಎಸ್ ನಿಂದ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕಾಂಗ್ರೆಸ್ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಸ್ವಾತ್ರಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಲಕ್ಷಾಂತರ ದೇಶಪ್ರೇಮಿ ಸದಸ್ಯರು ಗುಂಡಿಗೆ ಎದೆ ಕೊಟ್ಟರು, ಹಲವರು ಲಾಠಿಗೆ ಎದೆ ಕೊಟ್ಟರು, ಸಾವಿರಾರು ಜನ ಹುತಾತ್ಮರಾದರು, ಕಾಂಗ್ರೆಸ್ ಪಕ್ಷದ ಈ ಧೀರ ಹೋರಾಟಗಾರರು ಹರಿಸಿದ ರಕ್ತ, ಬೆವರಿನ ಫಲವೇ ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ.
ಮಹಾತ್ಮ ಗಾಂಧೀಜಿಯವರಿಂದ ತಾಯಿಯ ಹೃದಯವನ್ನು, ಜವಾಹರಲಾಲ ನೆಹರು ಅವರಿಂದ ವೈಚಾರಿಕ ಸ್ಪಷ್ಟತೆಯನ್ನೂ, ವಲ್ಲಭಬಾಯಿ ಪಟೇಲ್ರಿಂದ ಉಕ್ಕಿನ ಸ್ಥೈರ್ಯವನ್ನೂ ಪಡೆದ ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಸಂಗ್ರಾಮದ ಗುರಿ ಈಡೇರಿಕೆಯಲ್ಲಿ ಯಶಸ್ವಿಯಾಯಿತು.
ಸ್ವಾತಂತ್ರ್ಯ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಧುಮುಕದಿದ್ದರೆ ಏನಾಗುತ್ತಿತ್ತು? ನಾವಿಂದು ಕೂಡಾ ಬ್ರಿಟಿಷರ ಗುಲಾಮಗಿರಿಗೆ ಸಿಕ್ಕಿ ನರಳಾಡುತ್ತಿದ್ದೆವೇನೋ? ಸ್ವತಂತ್ರ ಭಾರತದ ನಾಯಕತ್ವವನ್ನು ಕಾಂಗ್ರೆಸ್ ಪಕ್ಷ ವಹಿಸದೆ ಹೋಗಿದ್ದರೆ ಇಂದು ಕೂಡಾ ದೇಶ ಬಡತನ, ಅನಕ್ಷರತೆ, ಅಸಮಾನತೆ, ನಿರುದ್ಯೋಗದ ಸಮಸ್ಯೆಗಳಲ್ಲಿಯೇ ಉರುಳಾಡುತ್ತಿತ್ತೋ ಏನೋ?
ಗರೀಬಿ ಹಠಾವೋ, ಹಸಿರು ಕ್ರಾಂತಿ, ಬ್ಯಾಂಕುಗಳ ರಾಷ್ಟ್ರೀಕರಣ, ಇಪ್ಪತ್ತು ಅಂಶದ ಕಾರ್ಯಕ್ರಮಗಳು ಮೊದಲಾದ ಜನಪರ ಯೋಜನೆಗಳ ಮೂಲಕ ಇಂದಿರಾ ಗಾಂಧಿ ಅವರು ಬಡತನದ ವಿರುದ್ಧ ಹೋರಾಟವನ್ನೇ ನಡೆಸಿದ್ದರು. ಇಂದು ಕೂಡಾ ಇಂದಿರಾ ಗಾಂಧಿ ದೇಶದ ಬಡವರ ಕಣ್ಮಣಿಯಾಗಿದ್ದಾರೆ.
ಶ್ರೀಮತಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರು ಈ ನಾಡಿಗಾಗಿ, ನಾಡಿನ ಏಳಿಗೆಗಾಗಿ ತಮ್ಮ ಇಡೀ ಬದುಕು ಸವೆಸಿದವರು. ಹೌದು, ಇದು ಅಮ್ಮ-ಮಗ ತಮ್ಮ ರಕ್ತ ಬಸಿದು, ಪ್ರಾಣ ತೆತ್ತು ಕಟ್ಟಿದ ಪಕ್ಷ. ಅವರು ಪ್ರಾಣ ಕಳೆದುಕೊಂಡರು, ದೇಶ ಉಳಿಸಿದರು.
ಮೂಲ ಮತಾಂತರ ನಿಷೇಧ ಕಾಯ್ದೆಯ ಕರಡು ರೂಪಿಸಲು ತಮ್ಮದೇ ಸರ್ಕಾರ ಕಾರಣ ಎಂದು ಯಡಿಯೂರಪ್ಪ ಮತ್ತು ಮತಾಂತರ ನಿಷೇಧ ಕಾಯ್ದೆ ಜಾರಿ ಆರ್.ಎಸ್.ಎಸ್ ನ ಉದ್ದೇಶವಾಗಿತ್ತು ಎಂದು ಈಶ್ವರಪ್ಪ ಅವರು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಈ ಕಾಯ್ದೆ ಆರ್.ಎಸ್.ಎಸ್ ನ ಕೂಸು ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು ? ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
MUST WATCH
ಹೊಸ ಸೇರ್ಪಡೆ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು