ಸಿದ್ಧಾರ್ಥರಂತೆ ನನಗೂ ಒತ್ತಡಗಳಿವೆ


Team Udayavani, Aug 26, 2019, 3:05 AM IST

DkShi

ಬೆಂಗಳೂರು: “ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ವಿ.ಜಿ.ಸಿದ್ಧಾರ್ಥ ಅವರಿಗೆ ಇದ್ದಂತೆಯೇ ನನಗೂ ಒತ್ತಡಗಳಿವೆ. ಆದರೆ, ಅವೆಲ್ಲವುಗಳನ್ನೂ ನಿವಾರಿಸಿಕೊಂಡು ಬದುಕುತ್ತಿದ್ದೇನೆ’ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಜಯನಗರದ ಚಂದ್ರಸಾಗರ ಕಲ್ಯಾಣ ಮಂಟಪದಲ್ಲಿ ಮಲೆನಾಡಿನ ಸಂಘ ಸಂಸ್ಥೆಗಳ ಒಕ್ಕೂಟ ಹಮ್ಮಿಕೊಂಡಿದ್ದ ಉದ್ಯಮಿ ವಿ.ಜಿ. ಸಿದ್ದಾರ್ಥ ಹೆಗ್ಡೆ ನುಡಿನಮನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಸಿದ್ಧಾರ್ಥ ಸಾವಿನ ಸಮಯದಲ್ಲಿ ಕೆಲ ಕಾರಣಗಳಿಗೆ ನನ್ನ ಹೆಸರನ್ನು ಬಳಸಿಕೊಂಡರು. ಆದರೆ, ನಾನು ಮಾತ್ರ ಎಷ್ಟೇ ತೊಂದರೆ ಒತ್ತಡಗಳು ಬಂದರೂ ಯಾವುದಕ್ಕೂ ಜಗ್ಗುವುದಿಲ್ಲ.

ಸಿದ್ಧಾರ್ಥನಂತೆ ನನಗೂ ಒತ್ತಡಗಳಿವೆ. ಅವುಗಳನ್ನು ನಿವಾರಿಸಿಕೊಂಡು ಬದುಕುತ್ತಿದ್ದೇನೆ’ ಎಂದು ಹೇಳಿದರು. ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ ಹೆಗ್ಡೆ ಸಾವಿನ ನಂತರ ದೇಶದ ಅನೇಕ ಉದ್ಯಮಿಗಳು ಭಯದ ನೆರಳಲ್ಲಿ ಕೆಲಸ ಮಾಡುತ್ತಿದ್ದಾರೆ. ಉದ್ಯಮಿಗಳಿಗೆ ಮುಕ್ತ ವಾತಾವರಣ ನಿರ್ಮಾಣವಾಗಬೇಕು. ಕೇಂದ್ರದಲ್ಲಿ ಆಡಳಿತ ನಡೆಸುವವರಿಗೆ ದೇವರು ಒಳ್ಳೆಯ ಬುದ್ಧಿ ನೀಡಲಿ ಎಂದು ತೀಕ್ಷ್ಣವಾಗಿ ಹೇಳಿದರು.

ಸಿದ್ದಾರ್ಥ ಸರಳ ಹಾಗೂ ಸಜ್ಜನಿಕೆಗೆ ಹೆಸರಾಗಿದ್ದರು, ತಮ್ಮ ಉದ್ಯಮದ ಮೂಲಕ ಸಾವಿರಾರು ಜನಕ್ಕೆ ಉದ್ಯೋಗ ನೀಡುವ ಮೂಲಕ ಸರ್ಕಾರ ಮಾಡದ ಕೆಲಸವನ್ನು ಮಾಡಿದ್ದಾರೆ. ಮಲೆನಾಡಿನ ಆಸ್ತಿಯಾಗದೆ, ದೇಶದ ಆಸ್ತಿಯಾಗಿ ಅನೇಕರ ಹೃದಯ ಗೆದ್ದಿದ್ದಾರೆ. ಪ್ರಾಮಾಣಿಕ ವ್ಯಕ್ತಿಯಾಗಿದ್ದ ಅವರು ರಾಜಕೀಯವಾಗಿ ಅನೇಕ ಅವಕಾಶಗಳು ಬಂದರು ಸಹ ಅವುಗಳನ್ನು ತ್ಯಜಿಸಿದರು. ಇಂತಹ ಪ್ರಾಮಾಣಿಕ ವ್ಯಕ್ತಿಯನ್ನು ಕಳೆದುಕೊಂಡಿರುವುದು ನಮ್ಮ ದುರ್ದೈವ ಎಂದು ಕಂಬನಿ ಮಿಡಿದರು.

ವಿಧಾನ ಪರಿಷತ್ತಿನ ಮಾಜಿ ಸಭಾಧ್ಯಕ್ಷ ಬಿ.ಎಲ್‌. ಶಂಕರ್‌ ಮಾತನಾಡಿ, ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಂಡಿದ್ದು, ಮಾನ ಮರ್ಯಾದೆಗೆ ಅಂಜಿ ಹೊರತು, ದುಡ್ಡಿನ ಕೊರತೆಯಿಂದಲ್ಲ. ದೇಶದ ಸಂವಿಧಾನದ ಕಾನೂನುಗಳು ಒಳ್ಳೆಯವರಿಗೂ ಶಿಕ್ಷೆ ನೀಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ದ್ರೋಹ ಬಗೆದು, ದೇಶ ಬಿಟ್ಟು ಹೋದವರಿಗೆ ಈ ಕಾನೂನುಗಳು ಏನೂ ಮಾಡುತ್ತಿಲ್ಲ ಎಂದು ಭಾವುಕರಾದ ಅವರು, ಸಿದ್ಧಾರ್ಥ ಅವರ ಸಾವು ಇಡೀ ಕಾಫಿ ಉದ್ಯಮಕ್ಕೆ ಬಂದಂತಹ ಸಂಕಷ್ಟವಾಗಿದೆ. ಈ ವ್ಯವಸ್ಥೆಯಲ್ಲಿರುವ ಕಾನೂನುಗಳು ಜನರ ರಕ್ಷಣೆಗೆ ಇರಬೇಕೆ ಹೊರತು, ತೊಂದರೆ ಕೊಡಲು ಅಲ್ಲ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಸಕ ಟಿ.ಡಿ. ರಾಜೇಗೌಡ, ಮಾಜಿ ಶಾಸಕ ಹೇಮಚಂದ್ರಸಾಗರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.