ಮಾರ್ಚ್‌ ವೇಳೆಗೆ ಸಿಗ್ನಲ್‌ ಮುಕ್ತ ಮಾರ್ಗ


Team Udayavani, Aug 24, 2018, 11:46 AM IST

blore11.jpg

ಬೆಂಗಳೂರು: ಸಿಲ್ಕ್ಬೋರ್ಡ್‌ ಜಂಕ್ಷನ್‌ನಿಂದ ನಾಯಂಡಹಳ್ಳಿ ಜಂಕ್ಷನ್‌ವರೆಗಿನ ಸಿಗ್ನಲ್‌ ಫ್ರೀ ಕಾರಿಡಾರ್‌ ಯೋಜನೆ 2019ರ ಮಾರ್ಚ್‌ ವೇಳೆಗೆ ಪೂರ್ಣಗೊಳ್ಳಲಿದ್ದು, ಯೋಜನೆಯಿಂದ ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ ಎಂದು ಮೇಯರ್‌ ಆರ್‌.ಸಂಪತ್‌ರಾಜ್‌ ಹೇಳಿದರು.

ಹೊಸಕೆರೆಹಳ್ಳಿ ಬಳಿಯ ಮುತ್ತುರಾಜ ಜಂಕ್ಷನ್‌ನಲ್ಲಿ ನಡೆಯುತ್ತಿರುವ ಅಂಡರ್‌ಪಾಸ್‌ ಕಾಮಗಾರಿಯನ್ನು ಗುರುವಾರ ಪರಿಶೀಲಿಸಿದ ಅವರು, ಸಂಚಾರ ದಟ್ಟಣೆ ನಿವಾರಣೆಗಾಗಿ ಸಿಗ್ನಲ್‌ ಫ್ರೀ ಕಾರಿಡಾರ್‌ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ತಾಂತ್ರಿಕ ಕಾರಣಗಳಿಂದ ಯೋಜನೆ ವಿಳಂಬವಾಗುತ್ತಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ವಾಹನಗಳ ಸಂಚಾರಕ್ಕಾಗಿ ಒಟ್ಟು 153 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಕೈಗೆತ್ತಿಕೊಂಡಿದ್ದು, ನಾಯಂಡ ಹಳ್ಳಿ ಜಂಕ್ಷನ್‌ನಿಂದ ಸಿಲ್ಕ… ಬೋರ್ಡ್‌ ಜಂಕ್ಷನ್‌ನವರೆಗೆ ಡಾಲರ್ಸ್‌ ಕಾಲೋನಿ, ಕೆಇಬಿ ಜಂಕ್ಷನ್‌, ಮತ್ತುರಾಜ್‌ ಜಂಕ್ಷನ್‌, ಕತ್ತರಿಗುಪ್ಪೆ ಜಂಕ್ಷನ್‌, ಜೇಡಿಮರ ಜಂಕ್ಷನ್‌ ಗಳಲ್ಲಿ ಯೋಜನೆ ಕೈಗೆತ್ತಿಕೊಂಡಿದ್ದು, ಕಾಮಗಾರಿ ಪೂರ್ಣಗೊಂಡರೆ 16 ಕಿ.ಮೀ ಉದ್ದದ ರಸ್ತೆ ಸಿಗ್ನಲ್‌ ಮುಕ್ತವಾಗಲಿದೆ ಎಂದು ಮಾಹಿತಿ ನೀಡಿದರು.

ಮುತ್ತುರಾಜ ಜಂಕ್ಷನ್‌ನಲ್ಲಿ ಸುಮಾರು 18 ಕೋಟಿ ರೂ. ವೆಚ್ಚದಲ್ಲಿ ಕೆಳ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಬೃಹತ್‌ ಬಂಡೆ ಸಿಕ್ಕಿದರಿಂದ ಕಾಮಗಾರಿ ವಿಳಂಬವಾಗಿದೆ. ಬಂಡೆ ತೆರವುಗೊಳಿಸಲು ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದು, ಬಂಡೆ ತೆರವುಗೊಳಿಸಿದ ನಂತರ ಕಾಮಗಾರಿ ಚುರುಕುಗೊಳ್ಳಲಿದೆ ಎಂದು ಸಂಪತ್‌ರಾಜ್‌ ಭರವಸೆ ವ್ಯಕ್ತಪಡಿಸಿದರು.

ಉಳಿದ ಜಂಕ್ಷನ್‌ಗಳಲ್ಲಿ ಕಾಮಗಾರಿ ವೇಳೆ ಹೆಚ್ಚುವರಿ ಸಿಬ್ಬಂದಿ ಮತ್ತು ಯಂತ್ರೋಪಕರಣ ಬಳಸಿ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದ್ದು, ಮುತ್ತು ರಾಜ ಜಂಕ್ಷನ್‌ ಅಂಡರ್‌ಪಾಸ್‌ ಕಾಮಗಾರಿ 4 ತಿಂಗಳಲ್ಲಿ ಪೂರ್ಣಗೊಳಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ. ಕತ್ತರಿಗುಪ್ಪೆ ಹಾಗೂ ಜೇಡಿಮರ ಕಾಮಗಾರಿಗಳನ್ನೂ ಶೀಘ್ರ ಪೂರ್ಣಗೊಳಿಸುವಂತೆ ಅವರಿಗೆ ಸೂಚಿಸಲಾಗಿದೆ ಎಂದು ಹೇಳಿದರು. 

ಮುಂದಿನ ವಾರದಿಂದ ಒತ್ತುವರಿ ತೆರವು: ಮೇಯರ್‌ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮರುಚಾಲನೆ ನೀಡಲು ಪಾಲಿಕೆ ನಿರ್ಧರಿಸಿದ್ದು, ಮುಂದಿನ ಒಂದು ವಾರದೊಳಗೆ ಕಾರ್ಯಾಚರಣೆ ಆರಂಭಿಸಲು ಸಿದ್ಧತೆ ನಡೆಸಿದೆ.

ನಗರಾಭಿವೃದ್ಧಿ ಸಚಿವ ಜಿ.ಪರಮೇಶ್ವರ್‌ ಪಾಲಿಕೆಗೆ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಭೂ ಮಾಪನಾಧಿಕಾರಿಗಳು ಸರ್ವೆ ನಡೆಸಿ ವರದಿ ನೀಡಿದ್ದಾರೆ. ಮೂರು ದಿನಗಳಲ್ಲಿ ಸರ್ವೆಯ ಸಂಪೂರ್ಣ ವರದಿ ಕೈಸೇರಲಿದ್ದು, ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಮೇಯರ್‌ ಸಂಪತ್‌ರಾಜ್‌ ತಿಳಿಸಿದ್ದಾರೆ.

ಈಗಾಗಲೇ ನಗರದ 400ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಂದಾಯ ಇಲಾಖೆಯ ಭೂ ಮಾಪನ ಅಧಿಕಾರಿಗಳು ಒತ್ತುವರಿ ಗುರುತಿಸಿದ್ದಾರೆ. ಆದರೆ, ತೆರವು ಕಾರ್ಯಾಚರಣೆಗೆ ಗುರುತು ಮಾಡಿಕೊಡದ ಕಾರಣ ಕಾರ್ಯಾಚರಣೆಗೆ ಹಿನ್ನಡೆಯಾಗಿದೆ. ವರದಿ ಬಂದ ಕೂಡಲೇ ಸಚಿವರೊಂದಿಗೆ ಚರ್ಚಿಸಿ ಒತ್ತುವರಿ ತೆರವು ಆರಂಭಿಸಲಾಗುವುದು ಎಂದು ಹೇಳಿದರು.
 
728 ಪ್ರಕರಣ ಬಾಕಿ: ಪಾಲಿಕೆಯ ಮಾಹಿತಿಯಂತೆ ನಗರದಲ್ಲಿ ಒಟ್ಟು 1,953 ರಾಜಕಾಲುವೆ ಒತ್ತುವರಿ ಪ್ರಕರಣಗಳಿದ್ದು, 2016ಕ್ಕೆ ಮೊದಲೇ 820ಕ್ಕೂ ಹೆಚ್ಚು ಪ್ರಕರಣಗಳಲ್ಲಿನ ಒತ್ತುವರಿಯನ್ನು ಪಾಲಿಕೆ ತೆರವುಗೊಳಿಸಿತ್ತು. ಮುಖ್ಯಮಂತ್ರಿಗಳ ನಿರ್ದೇಶನದ ನಂತರದಲ್ಲಿ 405 ಪ್ರಕರಣಗಳಲ್ಲಿ ಮಾತ್ರ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವ ಬಿಬಿಎಂಪಿ, ಒತ್ತುವರಿಯಿಂದ ತೀವ್ರ ಸಮಸ್ಯೆಯಾಗುತ್ತಿರುವ ಕಡೆಗಳಲ್ಲಿ ಕಾರ್ಯಾಚರಣೆಗೆ ಮುಂದಾಗಿಲ್ಲ. ಪ್ರಭಾವಿಗಳ ಪ್ರಕರಣಗಳಲ್ಲಿ ಪಾಲಿಕೆ ಮೌನವಹಿಸಿದ್ದು, ಇನ್ನೂ 728 ಪ್ರಕರಣಗಳಲ್ಲಿ ತೆರವು ಬಾಕಿಯಿದೆ. 

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.