ಸೈಲೆಂಟ್ ಸುನೀಲ, ಕುಣಿಗಲ್ ಗಿರಿ ವಿಚಾರಣೆ
Team Udayavani, Apr 14, 2019, 3:00 AM IST
ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಕೆಂಗಣ್ಣಿಗೆ ಗುರಿಯಾಗಿರುವ ರೌಡಿ ಶೀಟರ್ಗಳಾದ ಸೈಲೆಂಟ್ ಸುನೀಲ ಹಾಗೂ ಕುಣಿಗಲ್ ಗಿರಿಗೆ ಲೋಕಸಭೆ ಚುನಾವಣೆ ಮುಗಿಯುವವರೆಗೆ ಸಿಸಿಬಿ ಕಚೇರಿಗೆ ನಿತ್ಯ ಹಾಜರಾಗಿ ಸಹಿ ಮಾಡಿ ಹೋಗುವಂತೆ ಸೂಚಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಸಿಸಿಬಿ ಕಚೇರಿಗೆ ಆಗಮಿಸಿದ ಇಬ್ಬರು ರೌಡಿಶೀಟರ್ಗಳನ್ನು ಸಂಜೆ ನಾಲ್ಕು ಗಂಟೆವರೆಗೂ ಎಸಿಪಿ ಬಾಲರಾಜ್ ವಿಚಾರಣೆ ನಡೆಸಿದ್ದಾರೆ.
ಈ ಮಧ್ಯೆ ದರೋಡೆ, ಡಕಾಯಿತಿಯಿಂದ ದೂರ ಉಳಿದಿರುವ ಕುಣಿಗಲ್ ಗಿರಿ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಹೆಚ್ಚು ಸಕ್ರಿಯವಾಗಿದ್ದು, ಲಕ್ಷಾಂತರ ರೂ. ಸಂಪಾದನೆ ಮಾಡಿದ್ದಾನೆ.
ಮತ್ತೂಂದೆಡೆ ಶಿವಕುಮಾರ್ ಎಂಬುವರ ಹೆಸರಿನಲ್ಲಿ ಬಿಬಿಎಂಪಿ ಕಸ ವಿಲೇವಾರಿ ಗುತ್ತಿಗೆ ಪಡೆದಿರುವ ಸೈಲೆಂಟ್ ಸುನಿಲ, ಕೆಲ ಅಪರಾಧ ಚಟುವಟಿಕೆಗಳಲ್ಲಿ ಪರೋಕ್ಷವಾಗಿ ಭಾಗಿಯಾಗುತ್ತಿದ್ದಾನೆ. ಅಲ್ಲದೆ, ಶುಕ್ರವಾರ ಸಿಸಿಬಿ ಕೇಂದ್ರ ಕಚೇರಿಯಲ್ಲಿ ನಡೆದ ರೌಡಿಶೀಟರ್ಗಳ ಪರೇಡ್ನಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರಿಗೇ, “ಏನ್ ಮಾಡ್ತಿರಾ’? ಎಂದು ಪ್ರಶ್ನಿಸಿ ಉದಟತನ ತೋರಿದ್ದ.
ಇದರಿಂದ ಕೆಂಡಾಮಂಡಲವಾದ ಅಲೋಕ್ ಕುಮಾರ್, ಲೋಕಸಭೆ ಚುನಾವಣೆ ಮುಕ್ತಾಯಗೊಳ್ಳುವವರೆಗೂ ಇಬ್ಬರು ಪ್ರತಿನಿತ್ಯ ಸಿಸಿಬಿ ಕಚೇರಿಗೆ ಆಗಮಿಸಿ ಸಹಿ ಹಾಕಿ ಹೋಗುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು