ಸಿಲ್ಕ್ ಬೋರ್ಡ್‌ “ಸಿಗ್ನಲ್‌ಮುಕ್ತ’ ಯೋಜನೆ


Team Udayavani, Jan 13, 2017, 11:24 AM IST

metro-map.jpg

ಬೆಂಗಳೂರು: ನಗರದಲ್ಲಿ ಅತಿ ಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ಜಂಕ್ಷನ್‌ ಎಂದು ಹೆಸರಾಗಿರುವ “ಸೆಂಟ್ರಲ್‌ ಸಿಲ್ಕ್ಬೋರ್ಡ್‌ ಜಂಕ್ಷನ್‌’ಅನ್ನು ಸಿಗ್ನಲ್‌ ಮುಕ್ತಗೊಳಿಸಲು ಬಿಎಂಆರ್‌ಸಿಎಲ್‌ ಹಾಗೂ ಬಿಡಿಎ ಮುಂದಾಗಿದ್ದು, ಏಕಕಾಲದಲ್ಲಿ ನಾಲ್ಕೂ ದಿಕ್ಕಿನ ಕಡೆಗೆ ವಾಹನಗಳು ಅಡೆತಡೆ ಇಲ್ಲದೆ ಸಂಚರಿಸುವ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ ದೊರೆಯಲಿದೆ.

ಯೋಜನೆಯ ವಿಶೇಷವೆಂದರೆ ಬಿಎಂಆರ್‌ಸಿಎಲ್‌ “ನಮ್ಮ ಮೆಟ್ರೋ 2ನೇ ಹಂತ’ದ ಅಡಿ ಆರ್‌.ವಿ ರಸ್ತೆ-ಬೊಮ್ಮಸಂದ್ರ ಮಾರ್ಗದ ಮೆಟ್ರೋಗಾಗಿ ನಿರ್ಮಿಸಲಿರುವ ನಿಲ್ದಾಣಕ್ಕೆ ಅಂಟಿಕೊಂಡಂತೆ ಸಿಲ್ಕ್ಬೋರ್ಡ್‌ ಜಂಕ್ಷನ್‌ನಲ್ಲಿಯೇ ಮೆಟ್ರೋ 2ನೇ ಎ ಹಂತದ ರೈಲು ನಿಲ್ದಾಣವನ್ನು ನಿರ್ಮಾಣ ಮಾಡಲಾಗುತ್ತದೆ. ಈ ಮೂಲಕ ಆರ್‌ವಿ ರಸ್ತೆ – ಬೊಮ್ಮಸಂದ್ರ ಹಾಗೂ ಸಿಲ್ಕ್ಬೋರ್ಡ್‌ ಜಂಕ್ಷನ್‌- ಎಚ್‌ಎಸ್‌ಆರ್‌ ಬಡಾವಣೆ ಎರಡು ರೈಲು ಮಾರ್ಗಗಳಿಗೆ ಸಿಲ್ಕ್ಬೋರ್ಡ್‌ ಜಂಕ್ಷನ್‌ “ಇಂಟರ್‌ಚೇಂಜ್‌ ನಿಲ್ದಾಣವಾಗಿ’ ಕಾರ್ಯ ನಿರ್ವಹಿಸಲಿದೆ. 

ಒಂದೇ ಪಿಲ್ಲರ್‌ ಎರಡು ಸೇತುವೆ: ಒಟ್ಟು 900 ಕೋಟಿ ವೆಚ್ಚ ಮಾಡಿ ಬಿಎಂಆರ್‌ಸಿಎಲ್‌ ಹಾಗೂ ಬಿಡಿಎ ಸಿಲ್ಕ್ಬೋರ್ಡ್‌ ಜಂಕ್ಷನ್‌ನ್ನು ಸಿಗ್ನಲ್‌ವುುಕ್ತಗೊಳಿಸಲು ಮುಂದಾಗಿದ್ದು, ಯೋಜನೆಯ ಭಾಗವಾಗಿ ನಮ್ಮ ಮೆಟ್ರೋ ಎರಡನೇ ಹಂತದಲ್ಲಿ ಕೈಗೆತ್ತುಕೊಂಡಿರುವ ಆರ್‌.ವಿ. ರಸ್ತೆ – ಬೊಮ್ಮಸಂದ್ರ ಮೆಟ್ರೋ ರೈಲು ಮಾರ್ಗದ ಪಿಲ್ಲರ್‌ಗಳಿಗೆ ರಾಗಿಗುಡ್ಡದಿಂದ ಸೆಂಟ್ರಲ್‌ ಸಿಲ್ಕ್ ಬೋರ್ಡ್‌ವರೆಗೆ ಮೇಲು ರಸ್ತೆ ನಿರ್ಮಾಣ ಮಾಡಲಾಗುತ್ತದೆ.

ಆರ್‌.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿ ರಾಗಿಗುಡ್ಡದಿಂದ ಸೆಂಟ್ರಲ್‌ ಸಿಲ್ಕ್ ಬೋರ್ಡ್‌ವರೆಗೆ ಮೆಟ್ರೊ ಪಿಲ್ಲರ್‌ಗಳನ್ನು ಬಳಸಿಕೊಂಡು ಇಂಟರ್‌ಚೇಂಜ್‌ ನಿಲ್ದಾಣದವರೆಗೆ ಎತ್ತರಿಸಿದ ರಸ್ತೆ ನಿರ್ಮಾಣವಾಗಲಿದೆ. ಇದು ನೆಲಮಟ್ಟದ ರಸ್ತೆಯಿಂದ 8 ಮೀಟರ್‌ ಎತ್ತರ ಇರಲಿದೆ. ಮೆಟ್ರೊ ಮಾರ್ಗವು ನೆಲಮಟ್ಟದಿಂದ 16 ಮೀಟರ್‌ ಎತ್ತರ ಇರಲಿದೆ. ಹೀಗೆ ಒಂದೇ ಪಿಲ್ಲರ್‌ನಲ್ಲಿ ಮೇಲು ರಸ್ತೆ ಹಾಗೂ ಮೆಟ್ರೋ ಸೇತುವೆ ಎರಡನ್ನೂ ನಿರ್ಮಿಸುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ಸಿಗ್ನಲ್‌ವುುಕ್ತ ವ್ಯವಸ್ಥೆ: ಸಿಲ್ಕ್ಬೋರ್ಡ್‌ ಜಂಕ್ಷನ್‌ನಲ್ಲಿ ಮೆಟ್ರೋ ರೈಲು ಮಾರ್ಗ ಹಾಗೂ ಎಲಿವೇಟೆಡ್‌ ರಸ್ತೆಗಳನ್ನು ಸಂಯುಕ್ತಗೊಳಿಸಿ ಜಂಕ್ಷನ್‌ನ್ನು ಸಿಗ್ನಲ್‌ವುುಕ್ತಗೊಳಿಸಲಾಗುವುದು. ಈ ಯೋಜನೆ ಅಂಗವಾಗಿ ರಾಗಿಗುಡ್ಡ, ಬಿಟಿಎಂ ಬಡಾವಣೆ, ಜಯದೇವದ ಮೂಲಕ ಮೆಟ್ರೋ ಕಂಬಗಳಿಗೆ ನಿರ್ಮಾಣವಾಗಲಿರುವ ಎತ್ತರಿಸಿದ ರಸ್ತೆ ಸಿಲ್ಕ್ ಬೋರ್ಡ್‌ ಬಳಿ ಎರಡು ಪಥವಾಗಿ ಮುಂದುವರಿಯಲಿದೆ. ಒಂದು ಪಥ ಎಚ್‌ಎಸ್‌ಆರ್‌ ಲೇಔಟ್‌ ಕಡೆ ಹೋಗಿ ನೆಲಮಟ್ಟದ ರಸ್ತೆಗೆ ಸಂಪರ್ಕ ಕಲ್ಪಿಸಲಿದೆ.

ಮತ್ತೂಂದು ಪಥ ಈಗ ಇರುವ ಮೇಲ್ಸೇತುವೆಯ ಮೇಲೆ ತಿರುವು ಪಡೆದು ಎಚ್‌ಎಸ್‌ಆರ್‌ ಲೇಔಟ್‌ ಬಳಿ ನೆಲಮಟ್ಟದ ರಸ್ತೆಗೆ ಜೋಡಣೆಯಾಗುತ್ತದೆ. ತಿರುವಿನಲ್ಲಿ ಮತ್ತೂಂದು ರಸ್ತೆ ಹೊಸೂರು ರಸ್ತೆ ಕಡೆ ಹೋಗುವ ನೆಲಮಟ್ಟದ ರಸ್ತೆಗೆ ಜೋಡಣೆಯಾಗಲಿದೆ. 3 ಕಿ.ಮೀ. ಉದ್ದದ ಈ ರಸ್ತೆಯನ್ನು ಬಿಡಿಎ 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಿದೆ. ಇಂಟರ್‌ಚೇಂಜ್‌ ನಿಲ್ದಾಣ, ರಸ್ತೆ ಹಾಗೂ ಆರ್‌ವಿ.ರಸ್ತೆ-ಬೊಮ್ಮಸಂದ್ರ ಮಾರ್ಗದ ಕಾಮಗಾರಿಗೆ ಒಟ್ಟು 900 ಕೋಟಿ ರೂ. ವೆಚ್ಚವಾಗಲಿದೆ ಎಂದು ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ಸಿಲ್ಕ್ಬೋರ್ಡ್‌ ಜಂಕ್ಷನ್‌ನಲ್ಲಿ  ಮೆಟ್ರೋ ಇಂಟರ್‌ಚೇಂಜ್‌
ಸಿಲ್ಕ್ ಬೋರ್ಡ್‌ ಜಂಕ್ಷನ್‌ ಬಳಿ 4000 ಚ.ಮೀ. ವಿಸ್ತೀರ್ಣದಲ್ಲಿ ಇಂಟರ್‌ಚೇಂಜ್‌ ಮೆಟ್ರೋ ನಿಲ್ದಾಣ ನಿರ್ಮಾಣವಾಗಲಿದೆ. 135 ಮೀಟರ್‌ ಉದ್ದ ಹಾಗೂ ನೆಲಮಟ್ಟದಿಂದ 16.9 ಮೀಟರ್‌ ಎತ್ತರದಲ್ಲಿ ಇರಲಿದ್ದು, ದಿನಕ್ಕೆ 142324 ಪ್ರಯಾಣಿಕರು ಇಲ್ಲಿಂದ ಪ್ರಯಾಣ ಮಾಡಬಹುದು. ಆರ್‌ವಿ ರಸ್ತೆ- ಬೊಮ್ಮಸಂದ್ರ ಹಾಗೂ ಸಿಲ್ಕ್ಬೋರ್ಡ್‌- ಎಚ್‌ಎಸ್‌ಆರ್‌ ಬಡಾವಣೆ ಎರಡು ಮಾರ್ಗಗಳಲ್ಲಿ ಸಂಚರಿಸುವ ಮೆಟ್ರೋ ಪ್ರಯಾಣಿಕರು ಇಲ್ಲಿನ ಇಂಟರ್‌ಚೇಂಜ್‌ ನಿಲ್ದಾಣದಲ್ಲಿ ರೈಲು ಬದಲಿಸಿಕೊಳ್ಳಬಹುದು.

ಇದರಲ್ಲಿ ಮೆಟ್ರೋ ಎರಡನೇ ಹಂತದಲ್ಲಿ ಒಂದು ನಿಲ್ದಾಣದ ನಿರ್ಮಾಣಕ್ಕೆ ಈಗಾಗಲೇ ಟೆಂಡರ್‌ ಕರೆಯಲಾಗಿದೆ. ಮತ್ತೂಂದು ನಿಲ್ದಾಣ “ಮೆಟ್ರೋ 2-ಎ’ ಹಂತದಲ್ಲಿ ಬರಲಿದೆ. ನಿಲ್ದಾಣ ನಿರ್ಮಾಣವಾಗಿ ವಾಣಿಜ್ಯ ಸಂಚಾರಕ್ಕೆ ಲಭ್ಯವಾಗಲು ಸುಮಾರು 6 ವರ್ಷ ಬೇಕಾಗಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

7200 ಕೋಟಿ ರೂ. ಸಾಲ
ಎರಡನೇ ಹಂತದ ಯೋಜನೆಗೆ ಯುರೋಪಿಯನ್‌ ಇನ್‌ವೆಸ್ಟ್‌ಮೆಂಟ್‌ ಬ್ಯಾಂಕ್‌ (ಯುಐಬಿ) ಹಾಗೂ ಏಷ್ಯನ್‌ ಇನ್‌ಫ್ರಾಸ್ಟ್ರಕ್ಚರ್‌ ಇನ್‌ವೆಸ್ಟ್‌ಮೆಂಟ್‌ (ಎಐಇ) ಬ್ಯಾಂಕ್‌ ತಲಾ 3600 ಕೋಟಿ ರೂ. ಸಾಲ ನೀಡಲು ಪ್ರಾಥಮಿಕ  ಒಪ್ಪಿಗೆ ನೀಡಿವೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು. 24000 ಕೋಟಿ ರೂ. ವೆಚ್ಚದಲ್ಲಿ ಎರಡನೇ ಹಂತದ ಯೋಜನೆ ಕೈಗೊಳ್ಳಲಾಗಿದೆ. ಇದರಲ್ಲಿ 12,000 ಕೋಟಿ ರೂ. ಮೊತ್ತವನ್ನು ಸಾಲದಿಂದ ಪಡೆಯಲು ತೀರ್ಮಾನಿಸಲಾಗಿದೆ ಎಂದರು.

ಟಾಪ್ ನ್ಯೂಸ್

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.