ಕನ್ನಡದ ದಿಗ್ಗಜರ ಬೆಸೆದ ಬೆಳ್ಳಿ ಸೊಬಗು

ಬೆಂ.ವಿವಿ ಕನ್ನಡ ಅಧ್ಯಯನ ಕೇಂದ್ರದ ಗುರು-ಶಿಷ್ಯರ ಪ್ರಶಂಸೆ, ದಶಕಗಳ ನಂತರ ಸಿಕ್ಕ ಸ್ನೇಹಿತರ ಸಂತಸ

Team Udayavani, May 27, 2019, 12:18 PM IST

benglre-tdy-4..

ಬೆಳ್ಳಿ ಸೊಬಗು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 1992-94ನೇ ಸಾಲಿನ ವಿದ್ಯಾರ್ಥಿಗಳು.

ಬೆಂಗಳೂರು: ವೇದಿಕೆ ಮೇಲೆ ಗುರುಗಳು, ವೇದಿಕೆ ಮುಂಭಾಗ ಅವರ ಬಳಿ ಕಲಿತು ಉನ್ನತ ಹುದ್ದೆಗೆ ಏರಿದ ಸಾಧಕರು. ಗುರುಗಳಿಗೆ ತಕ್ಕ ಶಿಷ್ಯರೆಂಬ ಪ್ರಶಂಸೆಯ ಮಾತುಗಳು, ದಶಕಗಳ ನಂತರ ಸಿಕ್ಕ ಸ್ನೇಹಿತರ ಸಂತಸದ ಕ್ಷಣಗಳು…

ಇದು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಭಾನುವಾರ ನಡೆದ 1992-94ನೇ ಸಾಲಿನ ವಿದ್ಯಾರ್ಥಿಗಳ ‘ಬೆಳ್ಳಿ ಸೊಬಗು; ಸ್ನೇಹ ಸಮ್ಮಿಲನ ಮತ್ತು ಗುರುವಂದನೆ’ ಕಾರ್ಯಕ್ರಮದಲ್ಲಿ ಕಂಡು ಬಂದ ದೃಶ್ಯ.

ಡಾ.ಹಂಪ ನಾಗರಾಜಯ್ಯ, ಪ್ರೊ.ಬರಗೂರು ರಾಮಚಂದ್ರಪ್ಪ, ಡಾ.ಸಿದ್ದಲಿಂಗಯ್ಯ, ಡಾ.ಕೆ.ವೀರಣ್ಣ, ಡಾ.ಬಸವರಾಜ ಕಲ್ಗುಡಿ ಸೇರಿ ಗುರುಗಳು ವೇದಿಕೆ ಮೇಲಿದ್ದರೆ ವೇದಿಕೆ ಮುಂಭಾಗ ಒಂದು ಕಾಲದಲ್ಲಿ ಆ ಮೇಸ್ಟ್ರೆಗಳ ಕೈ ಕೆಳಗೆ ಕಲಿತು ಇಂದು ರಾಜ್ಯದ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರವ 33 ಕನ್ನಡ ಪ್ರಾಧ್ಯಾಪಕರು, ಆರು ಕೆಎಎಸ್‌ ಅಧಿಕಾರಿಗಳು ಕುಳಿತಿದ್ದರು.

1992-94ನೇ ಸಾಲಿನಲ್ಲಿ ಕನ್ನಡ ಅಧ್ಯಯನ ಕೇಂದ್ರದಲ್ಲಿ ಅಧ್ಯಯನ ನಡೆಸಿದ ಎಲ್ಲಾ ವಿದ್ಯಾರ್ಥಿಗಳನ್ನು ಒಟ್ಟಾಗಿ ಸೇರಿಸುವ ನಿಟ್ಟಿನಲ್ಲಿ ಹಿರಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮ ಆಯೋಜಿಸಿದ್ದರು. ಕಾರ್ಯಕ್ರಮದ ಮೊದಲು ಕಾಲೇಜಿಗೆ ಹೊಸದಾಗಿ ಬಂದ ವಿದ್ಯಾರ್ಥಿಗಳಂತೆ ಎಲ್ಲರು ತಮ್ಮ ಪರಿಚಯ ಮಾಡಿಕೊಂಡರು. ಕಾಲೇಜು ದಿನಗಳಲ್ಲಿ ಕಳೆದ ಸಂತಸದ ಕ್ಷಣಗಳನ್ನು ಮೆಲುಕು ಹಾಕಿದರು. ನಂತರ ತಮ್ಮ ಸಾಧನೆಗೆ ಕಾರಣವಾದ ಕನ್ನಡ ಅಧ್ಯಯನ ಕೇಂದ್ರದ ಅಂದಿನ ಪ್ರಾಧ್ಯಾಪಕರಾಗಿದ್ದ ಡಾ.ಹಂ.ಪ.ನಾಗರಾಜಯ್ಯ, ಡಾ.ಸಿ.ವೀರಣ್ಣ, ಪ್ರೊ.ಬರಗೂರು ರಾಮಚಂದ್ರಪ್ಪ, ಡಾ.ಕಾರ್ಲೋಸ್‌, ಡಾ.ಸಿದ್ದಲಿಂಗಯ್ಯ, ಡಾ.ಬಸವರಾಜ್‌ ಸಿ.ಕಲ್ಗುಡಿ ಅವರನ್ನು ಸ್ಮರಣಿಕೆ ಕೊಟ್ಟು ಗೌರವಿಸಿ ಗುರುವಂದನೆ ಸಲ್ಲಿಸಿದರು. ಗುರುವಂದನೆ ಸ್ವೀಕರಿಸಿ ಮಾತನಾಡಿದ ಪ್ರೊ.ಹಂಪ ನಾಗರಾಜಯ್ಯ ಅವರು, ವಿದಾರ್ಥಿಗಳಿಗೆ ವಿದ್ಯೆಗಿಂತ ವಿವೇಕ ಮುಖ್ಯ ಎಂಬ ಮಾತು ಎಂದಿಗೂ ಸತ್ಯ. ವಿವೇಕ ಇಲ್ಲದೇ ಯಾವುದೇ ಕಾರ್ಯಸಿದ್ಧಿ ಆಗಲಾರದು. ಎಷ್ಟೇ ಪದವಿಗಳನ್ನು ಪಡೆದರು ಅವಿವೇಕದಂತಹ ಅಂಶದಿಂದ ಅದು ವ್ಯರ್ಥವಾಗುತ್ತದೆ. ಅದರೆ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ವಿವೇಕ ಮರೆಯಾಗುತ್ತಿದೆ. ಗುರು ಹಾಗೂ ಪುಸ್ತಕದಿಂದ ಅರ್ಧ ಭಾಗ ಕಲಿತು ಉಳಿದ ಅರ್ಧಭಾಗವನ್ನು ಸ್ವಬುದ್ಧಿಯಿಂದ ಕಲಿತು ಮುನ್ನಡೆದರೆ ಜೀವನದಲ್ಲಿ ಗುರಿ ಸಾಧಿಸಬಹುದು. ಅಂದು ಬೆಂಗಳೂರು ವಿವಿ ಕನ್ನಡ ಅಧ್ಯಯನ ಕೇಂದ್ರ ರಾಜ್ಯಕ್ಕೇ ಮಾದರಿಯಾಗಿದ್ದು, ಅದಕ್ಕೆ ಕಾರಣರಾದ ಜಿ.ಎಸ್‌.ಶಿವರುದ್ರಪ್ಪ, ಕಿ.ರಂ.ನಾಗರಾಜ, ಡಿ.ಆರ್‌.ನಾಗರಾಜ್‌ ಒಳಗೊಂಡು ಸಾಕಷ್ಟು ಜನರ ಸೇವೆ ಸ್ಮರಣೀಯ ಎಂದು ಹೇಳಿದರು.

ಗುರುಕುಲ ಪದ್ಧತಿಯಲ್ಲಿ ಈ ರೀತಿ ಸಾಧನೆ ಮಾಡಿದ ನಂತರ ಗುರುಗಳಿಗೆ ವಂದನೆ ತಿಳಿಸುವ ವಿಚಾರ ಬರುತ್ತದೆ. ನಮ್ಮಂತ ಮೇಸ್ಟ್ರೆಗಳ ಪಾಠದ ಆಚೆಗೆ ನೀವು ಸಾಕಷ್ಟು ಕಲಿತು ಇಂದು ಸಾಧನೆ ಮಾಡಿರುವುದು ಸಂತಸದ ವಿಚಾರ. ನೀವು ನಮ್ಮ ವಿದ್ಯಾರ್ಥಿಗಳು ಎಂದು ಹೇಳಿಕೊಳ್ಳುವುದು ಹೆಮ್ಮೆಯ ವಿಚಾರ ಎಂದು ತಿಳಿಸಿದರು.

ಪ್ರೊ.ಬರಗೂರು ರಾಮಚಂದ್ರಪ್ಪ ಮಾತನಾಡಿ, ಇಂದು ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರ ಸಂಖ್ಯೆ ಹೆಚ್ಚಾಗಿ ವಿದ್ಯಾರ್ಥಿಗಳಿಗೆ ಪ್ರಿಯವಾಗುವ ಮೇಸ್ಟ್ರೆಗಳ ಸಂಖ್ಯೆ ಕಡಿಮೆಯಾಗಿರುವುದು ಬೇಸರದ ಸಂಗತಿ. ನಮ್ಮ ಕನ್ನಡ ಅಧ್ಯಯನ ಕೇಂದ್ರವು ಕರ್ನಾಟಕದ ಎಲ್ಲಾ ರೀತಿಯ ವಿಚಾರಗಳ ಒಕ್ಕೂಟವಾಗಿತ್ತು. ಮನುಷ್ಯನ ಸಂಬಂಧಗಳು ಕಾಲಾತೀತವಾದವು ಎನ್ನುತ್ತಾರೆ. ಆದರೆ, ಇಂದು ಮಾನವೀಯ ಸಂಬಂಧ ಕುಸಿದು ಹೊಗುತ್ತಿದೆ. ತಾಂತ್ರಿಕತೆಯು ತಾತ್ವಿಕತೆಯನ್ನು ನಾಶ ಮಾಡುತ್ತಿದೆ. ಹಸಿವಿನ ರಾಜಕಾರಣ ಬಿಟ್ಟು ಹಸುವಿನ ರಾಜಕಾರಣ ನಡೆಯುತ್ತಿದೆ. ಭಾವನಾತ್ಮಕತೆ ಬಿಟ್ಟು ಭಾವೋನ್ಮಾದಲ್ಲಿ ಭಾರತವನ್ನು ಕೆಡವಲಾಗುತ್ತಿದೆ. ಇಂತಹ ಕಾಲದಲ್ಲಿ ಮತ್ತೆ ಎಲ್ಲರೂ ಸೇರಿರುವುದು ಸಂತಸ ವಿಚಾರ ಎಂದು ಹೇಳಿದರು.

ಕವಿ ಸಿದ್ದಲಿಂಗಯ್ಯ ಮಾತನಾಡಿ, ಗುರುಗಳ ಸ್ಥಾನ ಮಹತ್ವದ್ದು. ವಿದ್ಯಾರ್ಥಿಗಳ ಜತೆ ಭಾವನಾತ್ಮಕ ಸಂಬಂಧ ಸಾಧ್ಯವಾಗುವುದು ಕನ್ನಡ ಶಿಕ್ಷಕರಿಗೆ ಮಾತ್ರ. ಚಂದ್ರಮತಿ ಪ್ರಲಾಪದಂತಹ ಭಾವನಾತ್ಮಕ ಸಂದರ್ಭ ಗಳ ಕುರಿತು ಪಾಠ ಮಾಡುವಾಗ ಪ್ರಾಧ್ಯಾಪಕರು ಕಣ್ಣಿರು ಹಾಕಿ ಪಾಠ ಮಾಡಿದ್ದು, ಮಕ್ಕಳೂ ಕಣ್ಣೀರು ಹಾಕಿಕೊಂಡು ಕೇಳಿದ್ದುಂಟು. ಇನ್ನು ಕನ್ನಡ ಹೊರತುಪಡಿಸಿ ವಿಜ್ಞಾನದಲ್ಲಿ ಪ್ರಯೋಗ ಶಾಲೆಯ ಹೊಗೆಯಿಂದ, ಗಣಿತದಲ್ಲಿ ಕಠಿಣ ಲೆಕ್ಕ ಅರ್ಥವಾಗದೇ ಕಣ್ಣೀರು ಬರಬಹುದಷ್ಟೇ ಹೊರತು ಭಾವನಾತ್ಮಕವಾಗಿ ಅಲ್ಲ ಎಂದು ಹಾಸ್ಯಚಟಾಕಿ ಹಾರಿಸಿದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.