ಆರಕ್ಕೇರಿದ ಆರು ಬೋಗಿ ರೈಲುಗಳು
Team Udayavani, Mar 2, 2019, 6:11 AM IST
ಬೆಂಗಳೂರು: ತಿಂಗಳ ಅಂತರದಲ್ಲಿ “ನಮ್ಮ ಮೆಟ್ರೋ’ಗೆ ಮತ್ತೂಂದು ಆರು ಬೋಗಿಗಳ ರೈಲು ಸೇರ್ಪಡೆಗೊಂಡಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಇನ್ನೂ ಎರಡು ರೈಲುಗಳು ಆರು ಬೋಗಿಗಳಿಗೆ ಪರಿವರ್ತನೆ ಆಗಲಿವೆ.
ಪೂರ್ವ-ಪಶ್ಚಿಮ ಕಾರಿಡಾರ್ (ಬೈಯಪ್ಪನಹಳ್ಳಿ-ನಾಯಂಡಹಳ್ಳಿ)ನಲ್ಲಿ ಶುಕ್ರವಾರ ಆರು ಬೋಗಿಗಳ ಒಂದು ರೈಲನ್ನು ಪರಿಚಯಿಸಲಾಗಿದೆ. ಈ ಮೂಲಕ ಹೆಚ್ಚುವರಿ ಬೋಗಿಗಳ ಮೆಟ್ರೋ ರೈಲುಗಳ ಸಂಖ್ಯೆ ಈಗ ಆರಕ್ಕೆ ಏರಿಕೆಯಾಗಿದೆ. ಈ ಹಿಂದೆ ಜ. 28ರಂದು ಉತ್ತರ-ದಕ್ಷಿಣ ಕಾರಿಡಾರ್ನಲ್ಲಿ ಆರು ಬೋಗಿಯ ಮೊದಲ ರೈಲು ಸೇವೆಯನ್ನು ಆರಂಭಿಸಲಾಗಿತ್ತು.
ಮಾರ್ಚ್ ಅಂತ್ಯಕ್ಕೆ ಇನ್ನೂ ಎರಡು ಆರು ಬೋಗಿಗಳ ರೈಲುಗಳು ಬೈಯಪ್ಪನಹಳ್ಳಿ-ಮೈಸೂರು ರಸ್ತೆ ನಡುವೆ ಕಾರ್ಯಾಚರಣೆ ಆರಂಭಿಸಲಿವೆ. ಅಲ್ಲದೆ, ಏಪ್ರಿಲ್ ನಂತರ ಆರು ಬೋಗಿಗಳ ಇನ್ನೂ ಮೂರ್ನಾಲ್ಕು ರೈಲುಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದೆ. ತದನಂತರ ಉತ್ತರ-ದಕ್ಷಿಣ ಕಾರಿಡಾರ್ನಲ್ಲಿ ಇನ್ನಷ್ಟು ಆರು ಬೋಗಿಗಳ ರೈಲುಗಳು ಬರಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿ) ತಿಳಿಸಿದೆ.
ಮೂರು ಬೋಗಿಗಳ ರೈಲು ಗರಿಷ್ಠ 800ರಿಂದ 900 ಪ್ರಯಾಣಿಕರನ್ನು ಕೊಂಡೊಯ್ಯುತ್ತಿದೆ. ಆರು ಬೋಗಿಗಳ ರೈಲು ದುಪ್ಪಟ್ಟು ಪ್ರಯಾಣಿಕರನ್ನು ಕೊಂಡೊಯ್ಯುವ ಸಾಮರ್ಥ್ಯ ಹೊಂದಿದೆ. ಏಕಕಾಲದಲ್ಲಿ ಹೆಚ್ಚು ಜನರನ್ನು ಕೊಂಡೊಯ್ಯುವುದರಿಂದ ಶೇ.15ರಷ್ಟು ವಿದ್ಯುತ್ ಉಳಿತಾಯ ಕೂಡ ಆಗಲಿದೆ.
ತುರ್ತು ಸಂದರ್ಭಗಳಲ್ಲಿ ಹೊಸದಾಗಿ ಜೋಡಣೆ ಮಾಡಿದ ಹೆಚ್ಚುವರಿ ಬೋಗಿಗಳ (ಮೂರು) ಯೂನಿಟ್ ಅನ್ನು ಪ್ರತ್ಯೇಕಗೊಳಿಸಿ ಚಾಲನೆ ಮಾಡುವ ಸೌಲಭ್ಯವೂ ಇದರಲ್ಲಿದ್ದು, ಇದಕ್ಕಾಗಿ ಸ್ವಯಂಚಾಲಿತ ಪೆಂಡಂಟ್ ಕಂಟ್ರೋಲ್ ಆಪರೇಷನ್ ವ್ಯವಸ್ಥೆ ಅಳವಡಿಸಲಾಗಿದೆ ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.
ಮತ್ತೆ ಕೈಕೊಟ್ಟ ಮೆಟ್ರೋ; ಪರದಾಡಿದ ಪ್ರಯಾಣಿಕರು: ಉತ್ತರ-ದಕ್ಷಿಣ ಕಾರಿಡಾರ್ (ನಾಗಸಂದ್ರ-ಯಲಚೇನಹಳ್ಳಿ)ನಲ್ಲಿ ಶುಕ್ರವಾರ ತಾಂತ್ರಿಕ ದೋಷದಿಂದಾಗಿ ಮೆಟ್ರೋ ಸೇವೆಯಲ್ಲಿ ಸುಮಾರು ಒಂದು ತಾಸು ವ್ಯತ್ಯಯ ಉಂಟಾಯಿತು. ಇದರಿಂದ ಪ್ರಯಾಣಿಕರು ಪರದಾಡಿದರು.
ಮಧ್ಯಾಹ್ನ 2.25ರ ಸುಮಾರಿಗೆ ಚಿಕ್ಕಪೇಟೆ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಇಡೀ ಮಾರ್ಗದುದ್ದಕ್ಕೂ ಬರುವ ನಿಲ್ದಾಣಗಳಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಯಿತು. ಪರಿಣಾಮ ಉದ್ದೇಶಿತ ಮಾರ್ಗದಲ್ಲಿ ಮೂರು ಟ್ರಿಪ್ಗ್ಳನ್ನು ರದ್ದುಗೊಳಿಸಲಾಯಿತು.
ಇದರ ಬಿಸಿ ಸಾವಿರಾರು ಜನರಿಗೆ ತಟ್ಟಿತು. ದಿಢೀರ್ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ನಿಲ್ದಾಣ, ಸಂಪಿಗೆ ರಸ್ತೆ, ಚಿಕ್ಕಪೇಟೆ ನಿಲ್ದಾಣಗಳಲ್ಲಿನ ಪ್ರಯಾಣಿಕರನ್ನು ರೈಲಿನಿಂದ ಕೆಳಗಿಳಿಸಲಾಯಿತು. ಕಾದು ಕಾದು ಸುಸ್ತಾದ ಪ್ರಯಾಣಿಕರು ಬಸ್, ಟ್ಯಾಕ್ಸಿ ಮತ್ತು ಆಟೋ ಮೊರೆಹೋದರು. 3.25ಕ್ಕೆ ಮೆಟ್ರೋ ಸೇವೆ ಪುನರಾರಂಭಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ