ಮೌಲ್ಯದ ಜತೆ ಕೌಶಲ್ಯಾಧಾರಿತ ಶಿಕ್ಷಣ ಅಗತ್ಯ


Team Udayavani, Aug 8, 2018, 12:20 PM IST

art workshop 1.jpg

ಬೆಂಗಳೂರು: ಕೌಶಲ್ಯತೆ ಇಲ್ಲದ ಮೌಲ್ಯಾಧಾರಿತ ಶಿಕ್ಷಣದಿಂದ ಯಾವ ಪ್ರಯೋಜನವೂ ಇಲ್ಲ. ಕಾಲೇಜು ಪಠ್ಯಕ್ರಮದಲ್ಲಿ ಕೌಶಲಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ವಿ.ಎಚ್‌.ಡಿ. ಕೇಂದ್ರೀಯ ಗೃಹ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ  ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಾಂಸ್ಕೃತಿಕ ಸಂಘ ಹಾಗೂ ವಿವಿಧ ಸಂಘಗಳ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಿದ ಅವರು, ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಕೌಶಲ್ಯಾಭಿವೃದ್ಧಿಗೆ ಹೆಚ್ಚು ಒತ್ತು ಸಿಗುತ್ತಿಲ್ಲ ಎಂದು ತಿಳಿಸಿದರು.

ರಾಜ್ಯದ 100ಕ್ಕೂ ಅಧಿಕ ಕಾಲೇಜಿನಲ್ಲಿ ಸ್ವಂತ ಕಟ್ಟಡ ಇಲ್ಲ. ಅನೇಕ ಕಾಲೇಜುಗಳಲ್ಲಿ ಲ್ಯಾಬ್‌, ಶೌಚಾಲಯ, ತರಗತಿ ಕೊಠಡಿ ಸೇರಿದಂತೆ ಮೂಲ ಸೌಕರ್ಯ ಇಲ್ಲ.  ಆದರೂ ಕಾಲೇಜಿನ ಪ್ರಾಧ್ಯಾಪಕರಿಗೆ 70 ಸಾವಿರದಿಂದ 2 ಲಕ್ಷ ರೂ.ಗಳ ವರೆಗೂ ವೇತನ ನೀಡುತ್ತೇವೆ. ಇಷ್ಟಾದರೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಈ ಬಗ್ಗೆ ಪ್ರಾಧ್ಯಾಪಕರು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದರು.

ಖಾಸಗಿ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಆಗಾಗ ಪಠ್ಯಕ್ರಮ ಪರಿಷ್ಕರಣೆಯಾಗುತ್ತದೆ. ಆದರೆ, ಸರ್ಕಾರಿ ಕಾಲೇಜಿನಲ್ಲಿ ಹತ್ತು ವರ್ಷಗಳಿಂದ ಪಠ್ಯಕ್ರಮದ ಪರಿಷ್ಕರಣೆ ಸರಿಯಾಗಿ ಆಗಿಲ್ಲ. ವಿದ್ಯಾರ್ಥಿಗಳಿಗೆ ಕೌಶಲಾಧಾರಿತ ಶಿಕ್ಷಣ ನೀಡಬೇಕು. ಅದಕ್ಕಾಗಿ ಪಠ್ಯಕ್ರಮದ ಪರಿಷ್ಕರಣೆ ಅಗತ್ಯವಿದೆ. ಕೌಶಲಾಧಾರಿತ ಶಿಕ್ಷಣ ಇಲ್ಲದೇ ಮೌಲ್ಯಾಧಾರಿತ ಶಿಕ್ಷಣ ನೀಡದರೇ ಯಾವುದೇ ಪ್ರಯೋಜನ ಇಲ್ಲ ಎಂದು ಹೇಳಿದರು.

ಕಾಲೇಜುಗಳನ್ನು ಮದ್ಯಪಾನ, ಧೂಮಪಾನ ಸೇರಿದಂತೆ ಎಲ್ಲ ರೀತಿಯ ವ್ಯಸನ ಮುಕ್ತ ಮಾಡಲು ಸಿದ್ಧತೆ ನಡೆಸುತ್ತಿದ್ದೇವೆ.  ಮುಂದಿನ ವರ್ಷದಿಂದ ಈ ಸಂಬಂಧ ಕೆಲವು ಕೋರ್ಸ್‌ಗಳನ್ನು ಅನುಷ್ಠಾನಕ್ಕೆ ಚಿಂತನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮಾತನಾಡಿ, ಪ್ರತಿಯೊಬ್ಬರು ಸಮಾಜದ ಏಳಿಗೆಗಾಗಿ ಶ್ರಮಿಸಬೇಕು. ಕಾಲೇಜಿನಲ್ಲಿ ಜಾತಿ ವ್ಯವಸ್ಥೆ ಇರಬಾರದು. ಎಲ್ಲರ ಸಂಪ್ರದಾಯ, ಆಚರಣೆ ಗೌರವಿಸಬೇಕು. ಆದರೆ ದೇಶ ಕಟ್ಟಲು ಏನು ಬೇಕು ಎಂಬದನ್ನು ಯೋಚಿಸಬೇಕಿದೆ. ವಿದ್ಯಾರ್ಥಿಗಳು ಪೂರ್ವ ಗ್ರಹಪೀಡಿತರಾಗಬಾರದು ಎಂದು ಸಲಹೆ ನೀಡಿದರು.

ಬಿಬಿಎಂಪಿ ಸದಸ್ಯೆ ಆರ್‌.ಜೆ.ಲತಾ ರಾಥೋಡ್‌, ಪ್ರಾಂಶುಪಾಲರಾದ ಪ್ರೊ.ನಜೀಬಾ ಖಾನಂ, ಸಾಂಸ್ಕೃತಿಕ ಹಾಗೂ ಕನ್ನಡ ಸಂಘದ ಸಂಚಾಲಕಿ ಡಾ. ಸೆಲ್ವ ಕುಮಾರಿ, ಕ್ರೀಡಾ ವಿಭಾಗದ ಸಂಚಾಲಕ ಡಾ. ಜಗದೀಶ್‌ ಕುಮಾರ್‌, ಎನ್‌ಸಿಸಿ ಅಧಿಕಾರಿ ಡಾ. ನೀತಾ ಪಠಾಣ್‌,  ನಟಿ ಅಶ್ವಿ‌ನಿ ಶೆಟ್ಟಿ  ಉಪಸ್ಥಿತರಿದ್ದರು.

ಸಂಪ್ರದಾಯ ಮರೆಯಬೇಡಿ: ನಮ್ಮ ಸಂಪ್ರದಾಯ ಮರೆಯಾಗುತ್ತಿದೆ. ಮಹಿಳೆಯರು ಹಣೆಗೆ ಕುಂಕುಮ ಇಡುತ್ತಿಲ್ಲ. ಹಿಂದೆ ವಿಚ್ಛೇಧನೆ ಎಂಬ ಪದವೇ ಇರಲಿಲ್ಲ. ಈಗ ಪ್ರೀತಿಸಿ ಮದುವೆಯಾಗಿ ಒಂದು ತಿಂಗಳಲ್ಲಿ ವಿಚ್ಛೇಧನೆ ಪಡೆಯುತ್ತಾರೆ. ನಂತರ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.

ವಿದ್ಯಾರ್ಥಿಗಳು ಎಲ್ಲ ವಿಷಯದಲ್ಲೂ ಎಚ್ಚರದಿಂದ ಇರಬೇಕು. ಪ್ರೀತಿ ಮತ್ತು ಸ್ನೇಹದ ಅರ್ಥ ತಿಳಿದುಕೊಳ್ಳಬೇಕು. ಪೇಲಾದಾಗ ಆತ್ಮಹತ್ಯೆ ಪರಿಹಾರ ಅಲ್ಲ. ನಾನು ಮೈಸೂರು ರಾಜವಂಶಸ್ಥರ ವಿರುದ್ಧ ಸ್ಪರ್ಧಿಸಿ ಸೋತ್ತಿದ್ದೆ, ಆದರೂ, ಛಲ ಬಿಟ್ಟಿಲ್ಲ. ಈಗ ಉನ್ನತ ಶಿಕ್ಷಣ ಸಚಿವನಾಗಿದ್ದೇನೆ ಎಂದು ಸಚಿವ ಜಿ.ಟಿ.ದೇವೇಗೌಡ ವಿದ್ಯಾರ್ಥಿಗಳಿಗೆ ಬುದ್ಧಿ ಮಾತು ಹೇಳಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.