ಸ್ಕೈವಾಕ್ ವಿವಾದ: ಬಿಬಿಎಂಪಿಗೆ ನೋಟಿಸ್
Team Udayavani, Feb 22, 2019, 6:22 AM IST
ಬೆಂಗಳೂರು: ಇಂದಿರಾನಗರ 100 ಅಡಿ ರಸ್ತೆ ಸಮೀಪದ ದೂಪನಹಳ್ಳಿ ಬಳಿ ನಿರ್ಮಿಸುತ್ತಿರುವ “ಸ್ಕೈವಾಕ್’ (ಪಾದಚಾರಿ ಮೇಲ್ಸೇತುವೆ) ಕಾಮಗಾರಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗುರುವಾರ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿದೆ.
ಸ್ಕೈವಾಕ್ ಕಾಮಗಾರಿಗೆ 2018ರ ಮಾ.14ರಂದು ಬಿಬಿಎಂಪಿ ನೀಡಿರುವ ಕಾರ್ಯಾದೇಶ ಪ್ರಶ್ನಿಸಿ ಇಂದಿರಾನಗರದ ಜಗದೀಶ್ ಸಂತೋಷ್, ಅರಿಫುಲ್ಲಾ ರವೂಫ್ ಖಾನ್ ಸೇರಿ 16 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯಪೀಠ, ಪ್ರತಿವಾದಿಗಳಾದ ಬಿಬಿಎಂಪಿ ಆಯುಕ್ತರು, ರಸ್ತೆ ಮೂಲಸೌಕರ್ಯ ವಿಶೇಷ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಸ್ಕೈವಾಕ್ ಕಾಮಗಾರಿ ಗುತ್ತಿಗೆ ಪಡೆದಿರುವ ಖಾಸಗಿ ಕಂಪೆನಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆ ಮುಂದೂಡಿತು.
ಸದ್ಯ ಸ್ಕೈವಾಕ್ ನಿರ್ಮಾಣಕ್ಕೆ ಗುರುತಿಸಿರುವ ಸ್ಥಳದಿಂದ 100 ಮೀ. ಅಂತರದಲ್ಲೇ ಮತ್ತೂಂದು ಸ್ಕೈವಾಕ್ ಇದೆ. ಹಾಗಾಗಿ ಹೊಸ ಮೇಲ್ಸೇತುವೆ ಅಗತ್ಯವಿಲ್ಲ. ಅದರ ಬದಲಿಗೆ ಇಂದಿರಾನಗರ 12ನೇ ಮುಖ್ಯರಸ್ತೆಯಲ್ಲಿ ಶಾಲೆಯಿದ್ದು, ಅಲ್ಲಿ ನಿರ್ಮಿಸಿದರೆ ಅನುಕೂಲವಾಗುತ್ತದೆ.
ಈ ಬಗ್ಗೆ ಬಿಬಿಎಂಪಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಮನವಿ ಪರಿಗಣಿಸಿಲ್ಲ. ಆದ್ದರಿಂದ ಕಾಮಗಾರಿ ಆದೇಶ ರದ್ದುಗೊಳಿಸಬೇಕು. ಅಲ್ಲದೇ ಅರ್ಜಿ ಇತ್ಯರ್ಥವಾಗುವವರೆಗೆ ಕಾಮಗಾರಿ ಮುಂದುವರಿಸದಂತೆ ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ