ಕಸಾಯಿ ತ್ಯಾಜ್ಯ ವಿಲೇವಾರಿಗೆ ಘಟಕ


Team Udayavani, Oct 14, 2019, 3:09 AM IST

kasayi

ಬೆಂಗಳೂರು: ನಗರದಲ್ಲಿ ಉತ್ಪತ್ತಿಯಾಗುವ ಪ್ರಾಣಿ ಮಾಂಸ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ನಗರದ ಹೊರವಲಯದಲ್ಲಿ ಮಾಂಸ ತ್ಯಾಜ್ಯ ವಿಲೇವಾರಿ ಘಟಕ (ರೆಂಡರಿಂಗ್‌ ಪ್ಲಾಂಟ್‌) ಅಳವಡಿಸಲು ಬಿಬಿಎಂಪಿ ಮುಂದಾಗಿದೆ.

ನಗರದಲ್ಲಿ ಎಲ್ಲೆಂದರಲ್ಲಿ ಪ್ರಾಣಿ ಮಾಂಸ ತ್ಯಾಜ್ಯ ವಿಲೇವಾರಿ ಮಾಡುವುದರಿಂದ ನಾನಾ ಸಮಸ್ಯೆಗಳು ಉದ್ಭವವಾಗುತ್ತಿವೆ. ಜತೆಗೆ, ಬೀದಿ ನಾಯಿಗಳು ಮಾಂಸ ತ್ಯಾಜ್ಯ ಸೇವಿಸಿ ಆಕ್ರಮಣಕಾರಿ ವರ್ತನೆ ತೋರುತ್ತಿರುವ ಬಗ್ಗೆಯೂ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ರೆಂಡರಿಂಗ್‌ ಪ್ಲಾಂಟ್‌ ಅಳವಡಿಕೆಗೆ ನಿರ್ಧರಿಸಲಾಗಿದೆ.

ಚೆನ್ನೈ ನಗರದಲ್ಲಿ ಪ್ರಾಣಿ ಮಾಂಸ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆ ಮಾಡುತ್ತಿರುವ ಜೀವನ್‌ ದಾಸ್‌ ಎಂಬವರೊಂದಿಗೆ ಬಿಬಿಎಂಪಿಯ ಅಧಿಕಾರಿಗಳು ಇತ್ತೀಚೆಗೆ ಸಭೆ ನಡೆಸಿದ್ದರು. ಚೈನ್ನೈನಲ್ಲಿ ಮಾಂಸ ತ್ಯಾಜ್ಯ ವೈಜ್ಞಾನಿಕವಾಗಿ ಸಂಸ್ಕರಣೆ ಮಾಡುತ್ತಿದ್ದು ಅದೇ ಮಾದರಿಯಲ್ಲಿ ಇಲ್ಲಿಯೂ ಅಳವಡಿಕೆ ಮಾಡುವ ಉದ್ದೇಶ ಹೊಂದಲಾಗಿದೆ. ಈಗಾಗಲೇ ಟೆಂಡರ್‌ ಪ್ರಕ್ರಿಯೆ ಸಹ ಮುಗಿಸಿದೆ.

ನಗರದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಮಾಂಸದ ಮಳಿಗೆಗಳಿದ್ದು, ಪ್ರತಿ ನಿತ್ಯ 40 ಟನ್‌ ಪ್ರಾಣಿತ್ಯಾಜ್ಯ ಉತ್ಪತ್ತಿ ಆಗುತ್ತಿದ್ದು, ಭಾನುವಾರ ಹಾಗೂ ವಿಶೇಷ ದಿನಗಳಲ್ಲಿ 80 ರಿಂದ 90 ಟನ್‌ ತ್ಯಾಜ್ಯ ಉತ್ಪತ್ತಿ ಆಗುತ್ತಿದೆ. ಇದರಲ್ಲಿ ಬಹುತೇಕ ಪ್ರಾಣಿ ಮಾಂಸ ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿಯಾಗುತ್ತಿಲ್ಲ. ರಾಜಕಾಲುವೆಗಳಲ್ಲಿ, ಕೆರೆ ಬದಿಗಳಲ್ಲಿ ಹಾಗೂ ನಿರ್ಜನ ಪ್ರದೇಶಗಳಲ್ಲಿ ಪ್ರಾಣಿ ಮಾಂಸ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗುತ್ತಿದೆ.

ನಗರದಲ್ಲಿ ಪ್ರಾಣಿ ಮಾಂಸ ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿಗೆ ಎಂಟೂ ವಲಯಗಳ ಹೊರವಲಯದಲ್ಲಿ ರೆಂಡರಿಂಗ್‌ ಪ್ಲಾಂಟ್‌ ಅಳವಡಿಸಲು ಪಾಲಿಕೆ ತೀರ್ಮಾನಿಸಿದೆ. ಈ ಯೋಜನೆಯ ಗುತ್ತಿಗೆ ಪಡೆಯುವವರೇ ಮಾಂಸ ತ್ಯಾಜ್ಯವನ್ನು ಅಂಗಡಿಗಳಿಂದ ತೆಗೆದುಕೊಂಡು ಹೋಗುತ್ತಾರೆ’ ಎಂದು ಪಾಲಿಕೆಯ ವಿಶೇಷ (ಘನತ್ಯಾಜ್ಯ ನಿರ್ವಹಣೆ)ಆಯುಕ್ತ ರಂದೀಪ್‌ ತಿಳಿಸಿದ್ದಾರೆ.

“ಮಾಂಸದ ಅಂಗಡಿಗಳಲ್ಲಿ ಉತ್ಪತ್ತಿಯಾಗುವ ಪ್ರಾಣಿ ಮಾಂಸ ತ್ಯಾಜ್ಯ ವಿಲೇವಾರಿಗೆ ಅಂಗಡಿಯವರಿಂದ ನಿರ್ದಿಷ್ಟ ಮೊತ್ತವನ್ನು ಪಡೆದು ಇದರ ಸಾಗಾಣಿಕೆ ಮಾಡಲಾಗುತ್ತದೆ. ಇದರ ನಿರ್ವಹಣೆಗೆ ಅಥವಾ ಸಾಗಾಣಿಕೆಗೆ ಬಿಬಿಎಂಪಿಯಿಂದ ಹಣ ಖರ್ಚು ಮಾಡುವುದಿಲ್ಲ. ಆದರೆ, ನಿರ್ವಹಣೆಯಲ್ಲಿ ಲೋಪ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ವೈಜ್ಞಾನಿಕ ಮಾದರಿಯಲ್ಲಿ ವಿಲೇವಾರಿ ಮಾಡುವುದಕದಕ್ಕೆ ವಾಹನದಲ್ಲಿ ಜಿಪಿಎಸ್‌ ಕಡ್ಡಾಯವಾಗಿ ಇರಬೇಕು ಎಂಬ ಷರತ್ತು ವಿಧಿಸಲಾಗುವುದು.

ಸದ್ಯಕ್ಕೆ ರಾಮನಗರ ಮತ್ತು ನೆಲಮಂಗಲದಲ್ಲಿ ಎರಡು ಖಾಸಗಿ ರೆಂಡರಿಂಗ್‌ ಸಂಸ್ಕರಣಾ ಘಟಕಗಳು ಇವೆ. ಟೆಂಡರ್‌ದಾರರು ಈ ಘಟಕದೊಂದಿಗೆ ಒಪ್ಪಂದ ಮಾಡಿಕೊಳ್ಳಬಹುದು ಅಥವಾ ಅವರೇ ಹೊಸದಾಗಿ ಘಟಕ ನಿರ್ಮಾಣ ಮಾಡಬಹುದು. ನಗರದ ಒಳಭಾಗದಲ್ಲಿ ಘಟಕ ಸ್ಥಾಪನೆಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳುತ್ತಾರೆ.

ಪ್ರಾಣಿ ಮಾಂಸ ತ್ಯಾಜ್ಯದಿಂದ ಬಯೋ-ಡೀಸೆಲ್‌: ಈಗಾಗಲೇ ರೆಂಡರಿಂಗ್‌ ಪ್ಲಾಂಟ್‌ ಅಳವಡಿಸಿರುವ ಕಡೆ ಪ್ರಾಣಿ ಮಾಂಸ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ ನಂತರ,ಅದನ್ನು ಸಂಸ್ಕರಿಸಿ ಮೀನು ಮತ್ತು ಕೋಳಿಗಳ ಆಹಾರ ತಯಾರಿಸಲಾಗುತ್ತಿದೆ. ಜತೆಗೆ ಪ್ರಾಣಿ ತ್ಯಾಜ್ಯದಲ್ಲಿ ಬಿಡುಗಡೆಯಾಗುವ ಎಣ್ಣೆ ಅಂಶವನ್ನು ಬಯೋ-ಡೀಸೆಲ್‌ ಆಗಿ ಪರಿವರ್ತನೆ ಮಾಡಲಾಗುತ್ತಿದೆ.

* ಹಿತೇಶ್‌ ವೈ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.