ಮೌನಿ ಹೋರಾಟಗಾರನ ಚುನಾವಣಾ ಗುರುತು ಸ್ಲೇಟ್

ಬೆಂ. ದಕ್ಷಿಣದಲ್ಲಿ ಈ ಬಾರಿ ಅಂಬ್ರೋಸ್‌ ಡಿ'ಮೆಲ್ಲೋ ಕರಾಮತ್ತು

Team Udayavani, Apr 10, 2019, 3:00 AM IST

chappa-haka

ಬೆಂಗಳೂರು: ಲೋಕಸಭಾ ಚುನಾವಣಾ ಅಭ್ಯರ್ಥಿ ಎಂದಾಕ್ಷಣ ಬಿರುಸಿನ ಓಡಾಟ, ಭರ್ಜರಿ ರ್ಯಾಲಿ, ರೋಡ್‌ ಶೋ, ಬಾಯಿ ಮಾತಿನ ಆಶ್ವಾಸನೆ ಹಾಗೂ ಆಮಿಷಗಳ ಅಬ್ಬರವು ಸಾಮಾನ್ಯ. ಆದರೆ, ಇಲ್ಲೊಬ್ಬ ಅಭ್ಯರ್ಥಿ ಕಳೆದ 14 ವರ್ಷಗಳಿಂದ ಮಾತು ಬಿಟ್ಟಿದ್ದು, ಮೌನವಾಗಿಯೇ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ.

ತಾನು ಕಾಲಿಗೆ 16 ವರ್ಷಗಳಿಂದ ಚಪ್ಪಲಿ ಹಾಕದೇ ಹೋರಾಟ ಮಾಡುತ್ತಿರುವ ಇವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಪ್ಪಲಿ ಗುರುತನ್ನು ಪಡೆದು ಸುದ್ದಿಯಾದರೆ, ಈ ಬಾರಿ ಈ ಹೋರಾಟಗಾರನ ಗುರುತು ಮಾತ್ರ ಸ್ಲೇಟು. ಸದ್ಯ ಈವರೆಗೂ ಇವರ ಚುನಾವಣಾ ವೆಚ್ಚ 90 ರೂ.ಮಾತ್ರ. ಹೌದು, ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿರುವ ಅಂಬ್ರೋಸ್‌ ಡಿ’ಮೆಲ್ಲೋ(ಅಮೃತ್‌) ಎಂಬ ಹೋರಾಟಗಾರನ ಕತೆಯಿದು.

ಈ ಅಭ್ಯರ್ಥಿ ಕಳೆದ 16 ವರ್ಷಗಳಿಂದ ಸಾಮಾಜಿಕ, ರಾಜಕೀಯ ಹಾಗೂ ಸರ್ಕಾರದ ವಿವಿಧ ನಿಯಮಗಳ ವಿರುದ್ಧ ಏಕಾಂಗಿಯಾಗಿ ಹೋರಾಟ ಮಾಡುತ್ತಿದ್ದಾರೆ. ಪ್ರಮುಖವಾಗಿ ನೀರಿನ್ನು ವ್ಯಾಪಾರೀಕರಣ ಮಾಡುತ್ತಿರುವುದನ್ನು ಖಂಡಿಸಿ ಮಾತು ಬಿಟ್ಟಿದ್ದು, ಹಗಲು ಹೊತ್ತಲ್ಲಿ ನೀರು, ಆಹಾರ ಸೇವನೆ ಮಾಡದೇ ಸಂಜೆಯಾದ ಮೇಲೆ ಶೌಚಾಲಯದಲ್ಲಿ ಬಳಸುವ ನೀರನ್ನೇ ಕುಡಿದು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.

ಕೇಂದ್ರ ಸರ್ಕಾರದ ನೋಟು ರದ್ಧತಿ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ಇವರು ಇಂದಿಗೂ ಹಳೆಯ ನೋಟುಗಳನ್ನೇ ಬಳಸುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಚುನಾವಣೆ ನಡೆದರೂ ಸ್ಪರ್ಧಿಸುವ ಅಮೃತ್‌ “ಜನ ಸಾಮಾನ್ಯರ ಸಮಸ್ಯೆಗಳೇ ನನ್ನ ಹೋರಾಟದ ಭಾಗವಾಗಿದ್ದು, ನನ್ನ ಸ್ಪರ್ಧೆಯ ಮೂಲಕವಾದರೂ ವಿಧಾನಸಭೆ, ಸಂಸತ್ತಿಗೆ ಸಾಮಾನ್ಯ ಜನರ ಸಮಸ್ಯೆಗಳು ತಿಳಿಯಲಿ ಎಂಬ ಉದ್ದೇಶದಿಂದ ಚುನಾವಣೆಗೆ ಸ್ವರ್ಧಿಸುತ್ತಿದ್ದೇನೆ’ ಎಂದು ತಮ್ಮ ಚುನಾವಣಾ ಕರಪತ್ರದಲ್ಲಿ ನಮೂದಿಸಿದ್ದಾರೆ.

ಪುಸ್ತಕ ಮಾರಿ ಗಳಿಸಿದ್ದೇ ಠೇವಣಿ: ಪ್ರಗತಿ ಪರ ಪುಸ್ತಕಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿರುವ ಅಮೃತ್‌, ಈ ಬಾರಿ ಚುನಾವಣೆಗೆಂದು ಕೆಲ ಸಾಹಿತಿಗಳ ಬಳಿ ಪುಸ್ತಕಗಳನ್ನು ರಿಯಾಯ್ತಿ ದರದಲ್ಲಿ ಪಡೆದು ಅವುಗಳನ್ನು ಮಾರಿ ಸಂಗ್ರಹವಾದ ಹಣದಲ್ಲಿಯೇ ಠೇವಣಿ ಇಟ್ಟಿದ್ದಾರೆ. ಠೇವಣಿ ಮೊತ್ತ 25,000 ರೂ. ಇದ್ದು,

ಮೊದಲು ನಾಮಪತ್ರ ಸಲ್ಲಿಸುವಾಗ ಹಣ ಕಡಿಮೆ ಇದ್ದ ಹಿನ್ನೆಲೆ 22,000 ರೂ. ಕಟ್ಟಿ ಚುನಾವಣಾ ಆಯೋಗಕ್ಕೆ ಠೇವಣಿ ಬಾಕಿ ಇರಿಸಿ ವಾರದ ಮಟ್ಟಿಗೆ ಕಾಲಾವಕಾಶ ಪಡೆದು ಬಂದಿದ್ದರು. ಆ ನಂತರ ಐದು ದಿನಗಳಲ್ಲಿ ಒಂದಿಷ್ಟು ಪುಸ್ತಕಗಳನ್ನು ಮಾರಿ ಬಾಕಿ 3,000 ರೂ. ಸಂಗ್ರಹಿಸಿ ಚುನಾವಣಾ ಆಯೋಗಕ್ಕೆ ಕಟ್ಟಿದ್ದಾರೆ. ಅದಾದ ನಂತರವೇ ಇವರ ನಾಮಪತ್ರ ಅಂಗೀಕೃತವಾಗಿದೆ.

ಕಳೆದ ಬಾರಿ ಮೋದಿ ಜತೆ ಸ್ಪರ್ಧೆ: ಚುನಾವಣೆಯಲ್ಲಿ ನಾನು ಯಾರ ವಿರುದ್ಧವೂ ಸ್ಪರ್ಧಿಸುವುದಿಲ್ಲ ಎನ್ನುವ ಇವರು, 2014ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್‌ ಹಾಗೂ ಪ್ರಧಾನಿ ನರೇಂದ್ರ ಮೋದಿ ಕ್ಷೇತ್ರವಾದ ವಾರಣಾಸಿಯಲ್ಲಿಯೂ ಸ್ಪರ್ಧಿಸಿದ್ದರು. ಇದಲ್ಲದೇ 2013 ಚಿಕ್ಕಪೇಟೆ, 2015ರಲ್ಲಿ ಶಿಕಾರಿಪುರ, 2017 ಹೆಬ್ಟಾಳ, 2018ರಲ್ಲಿ ಶಿವಾಜಿನಗರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ವರ್ಧಿಸಿದ್ದಾರೆ.

ಇಂದಿಗೂ ಪುಸ್ತಕ ಮಾರಾಟ ವೇಳೆ ಹೊಸ 500, 2,000 ಮುಖಬೆಲೆಯ ಹೊಸನೋಟು ಕೊಟ್ಟರೇ ನಿರಾಕರಿಸುವ ಈ ಅಭ್ಯರ್ಥಿಯು ಆಸ್ತಿ ಘೋಷಣಾ ಪತ್ರದಲ್ಲಿ ಒಟ್ಟಾರೆ ಆಸ್ತಿ 70,000 ರೂ. ಅವುಗಳಲ್ಲಿ ಬಹುಪಾಲು ಹಳೆಯ ನೋಟುಗಳೇ ಇದೆ ಎಂದು ನಮೂದಿಸಿದ್ದಾರೆ. ಇನ್ನು ಕ್ಷೇತ್ರದಲ್ಲಿ ಕರಪತ್ರ ಹಂಚಿಕೆ ಮಾಡುತ್ತಾ, ಕುತ್ತಿಗೆಗೊಂದು ಮಾಹಿತಿ ಫ‌ಲಕ ಹಾಕಿಕೊಂಡ ಪ್ರಚಾರದಲ್ಲಿ ತೊಡಗಿದ್ದಾರೆ.

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.