ಮುಂಬೈ ಕಣ್ಣಿಗೆ ಬೆಣ್ಣೆ, ಬೆಂಗ್ಳೂರಿಗೆ ಸುಣ್ಣ!

ಮೆಟ್ರೋ ಕಾಮಗಾರಿ ನಡೆಸುವ ಕಂಪನಿ ಒಂದೇ | ಆದರೆ, ಅಲ್ಲಿ ವ್ಯವಸ್ಥಿತ, ಇಲ್ಲಿ ಎಲ್ಲವೂ ಅವ್ಯವಸ್ಥೆ

Team Udayavani, May 28, 2019, 1:01 PM IST

bengaluru-tdy-3..

ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಫ‌ುಟ್ಪಾತ್‌ ಇಲ್ಲದೆ ರಸ್ತೆಯಲ್ಲೇ ನಡೆದು ಬರುತ್ತಿರುವ ಬೆಂಗಳೂರಿಗ.

ಬೆಂಗಳೂರು: ಎರಡು ಮಹಾನಗರಗಳಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಒಂದೇ. ಎರಡೂ ಕಡೆಗಳಲ್ಲಿ ಕಾಮಗಾರಿ ಕೈಗೆತ್ತಿಕೊಂಡಿರುವ ಕಂಪನಿಯೂ ಒಂದೇ. ಆದರೆ, ಅದು ನಿರ್ವಹಿಸುತ್ತಿರುವ ಕಾರ್ಯವೈಖರಿ ಭಿನ್ನ. ಈ ‘ಭಿನ್ನ ಧೋರಣೆ’ಯನ್ನು ಪ್ರಶ್ನಿಸುವವರೂ ಇಲ್ಲ. ಪರಿಣಾಮ ನಗರದ ಜನ ತೊಂದರೆ ಅನುಭವಿಸುವಂತಾಗಿದೆ.

ಆ ಎರಡು ಮಹಾನಗರಗಳು ಬೆಂಗಳೂರು ಮತ್ತು ಮುಂಬೈ. ಎರಡೂ ಕಡೆ ನಡೆಯುತ್ತಿರುವ ಕಾರ್ಯ ಮೆಟ್ರೋ. ವಾಣಿಜ್ಯ ನಗರಿ ಮುಂಬೈನಲ್ಲಿ ಉದ್ದೇಶಿತ ಕಾಮಗಾರಿ ನಡೆಯುತ್ತಿರುವ ಮಾರ್ಗದುದ್ದಕ್ಕೂ ವೈಜ್ಞಾನಿಕವಾಗಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಿ, ತಾತ್ಕಾಲಿಕ ಬೀದಿ ದೀಪಗಳನ್ನು ಅಳವಡಿಸಿ, ಪಾದಚಾರಿಗಳು ಮತ್ತು ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗಿದೆ. ಆದರೆ, ಉದ್ಯಾನ ನಗರಿಯಲ್ಲಿ ವ್ಯವಸ್ಥೆಯು ಇದಕ್ಕೆ ತದ್ವಿರುದ್ಧವಾಗಿದೆ.

ಮೆಟ್ರೋ ಕಾಮಗಾರಿ ನಡೆಯುವ ಮಾರ್ಗದಲ್ಲೆಲ್ಲಾ ವಿಭಜಕಗಳಲ್ಲಿದ್ದ ಬೀದಿ ದೀಪಗಳನ್ನು ತೆರವುಗೊಳಿಸಲಾಗಿದೆ. ಇದು ರಸ್ತೆ ಅಪಘಾತಗಳಿಗೆ ಎಡೆಮಾಡಿಕೊಡುತ್ತಿದೆ. ಇನ್ನು ಕಾಮಗಾರಿಯಿಂದ ರಸ್ತೆಗಳ ಗಾತ್ರ ಕಿರಿದಾಗುತ್ತಿದ್ದಂತೆ ವಾಹನಗಳು ಫ‌ುಟ್ಪಾತ್‌ಗಳನ್ನು ಆಕ್ರಮಿಸಿಕೊಂಡಿವೆ. ಆ ಮಾರ್ಗಗಳಲ್ಲಿ ಓಡಾಡುವ ಪಾದಚಾರಿಗಳು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗುವಂತಾಗಿದೆ. ಟ್ರಾಫಿಕ್‌ ವಾರ್ಡನ್‌ಗಳು ಕೂಡ ಇಲ್ಲದ್ದರಿಂದ ವಾಹನ ಸವಾರರೂ ಪರದಾಡುವಂತಾಗಿದೆ. ಅಷ್ಟೇ ಅಲ್ಲ, ಕಾಮಗಾರಿ ವೇಗ ಕೂಡ ಇಲ್ಲಿಗಿಂತ ಮುಂಬೈನಲ್ಲಿ ವೇಗವಾಗಿ ಸಾಗುತ್ತಿದೆ. ಈ ತಾರತಮ್ಯ ಧೋರಣೆ ಯಾಕೆ? ಎದ್ದುಕಾಣುವಂತಿದ್ದರೂ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ) ಮೌನ ವಹಿಸಿದ್ದು ಯಾಕೆ ಎಂಬ ಪ್ರಶ್ನೆ ಪ್ರಜಾರಾಗ್‌ ಸಂಸ್ಥೆಯ ಸಂಜೀವ್‌ ದ್ಯಾಮಣ್ಣವರ ಕೇಳುತ್ತಾರೆ.

ಸಮಸ್ಯೆ ಇರೋದು ಎಲ್ಲಿ?: ನಗರದ ಅತಿ ಹೆಚ್ಚು ವಾಹನದಟ್ಟಣೆ ಇರುವ ಆರ್‌.ವಿ. ರಸ್ತೆ-ಎಲೆಕ್ಟ್ರಾನಿಕ್‌ ಸಿಟಿ-ಬೊಮ್ಮಸಂದ್ರ ಮಾರ್ಗ, ಬನ್ನೇರುಘಟ್ಟ ರಸ್ತೆಯಲ್ಲಿ ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ಎಲ್ಲ ಬೀದಿ ದೀಪಗಳನ್ನು ತೆರವುಗೊಳಿಸಲಾಗಿದೆ. ಮುಖ್ಯವಾಗಿ ಜಯನಗರ ಈಸ್ಟ್‌ ಎಂಡ್‌ ಬಳಿ ಇಂಟರ್‌ಸೆಕ್ಷನ್‌ (ಮಾರ್ಗಗಳು ಕೂಡುವ ಜಾಗ) ಇದೆ. ಅಲ್ಲಿ ಸಿಗ್ನಲ್ಗಳೂ ಇಲ್ಲ; ಟ್ರಾಫಿಕ್‌ ವಾರ್ಡನ್‌ಗಳೂ ಇಲ್ಲ. ಇನ್ನು ಸಿಲ್ಕ್ಬೋಡ್ನ್ ಎಕ್ಸಾ ಜಂಕ್ಷನ್‌ ಬಳಿ ಅವೈಜ್ಞಾನಿಕವಾಗಿ ಇಂಟರ್‌ಸೆಕ್ಷನ್‌ ಮಧ್ಯದಲ್ಲೇ ದೊಡ್ಡ ಕಂಬವನ್ನು ಹಾಕಲಾಗಿದೆ. ಅಲ್ಲಿಯೂ ಸಿಗ್ನಲ್ಗಳಿಲ್ಲ ಹಾಗೂ ವಾರ್ಡನ್‌ಗಳಿಲ್ಲ. ಈ ಮೊದಲೇ ಪೀಕ್‌ ಅವರ್‌ನಲ್ಲಿ ವಾಹನಗಳಿಂದ ತುಂಬಿತುಳುಕುತ್ತಿದ್ದ ಈ ರಸ್ತೆಗಳು ಈಗ ವಾಹನ ಸವಾರರ ಪಾಲಿಗೆ ನರಕಸದೃಶವಾಗಿ ಪರಿಣಮಿಸಿವೆ ಎಂದು ಕ್ಲೀನ್‌ ಏರ್‌ ಪ್ಲಾಟ್ಫಾರಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಶ್‌ ರಂಗನಾಥ್‌ ತಿಳಿಸುತ್ತಾರೆ.

ಮುಂಬೈನಲ್ಲೂ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಆದರೆ, ಆ ಕಾಮಗಾರಿಯಿಂದ ಸ್ವಲ್ಪವೂ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಯಾಕೆ ಈ ಅವ್ಯವಸ್ಥೆ? ಈ ಕಾಮಗಾರಿಯಿಂದ ಸ್ಥಳೀಯರಿಗಂತೂ ತುಂಬಾ ತೊಂದರೆ ಆಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ವಾಹನಗಳ ಹೊಗೆ ಜತೆ ಮಣ್ಣಿನ ಧೂಳು: ಇನ್ನು ಪೈಲಿಂಗ್‌ ಮಾಡುವಾಗ ಸಾಕಷ್ಟು ಮಣ್ಣು ಹೊರತೆಗೆಯಲಾಗುತ್ತದೆ. ಅದನ್ನು ನಿಯಮಿತವಾಗಿ ವಿಲೇವಾರಿ ಮಾಡಬೇಕು. ಇದು ಕೂಡ ಸರಿಯಾಗಿ ಆಗುತ್ತಿಲ್ಲ. ವಾಹನಗಳ ಹೊಗೆ ಜತೆಗೆ ಈ ಮಣ್ಣಿನ ಧೂಳು ಸೇರಿಕೊಂಡು ಮತ್ತಷ್ಟು ಸಮಸ್ಯೆ ಸೃಷ್ಟಿಸುತ್ತಿದೆ. ಇದಕ್ಕಿಂತ ಮುಖ್ಯವಾಗಿ ಪೈಲಿಂಗ್‌ ಆರಂಭಿಸುವ ಮುನ್ನ ತಾತ್ಕಾಲಿಕ ಪಾದಚಾರಿ ಮಾರ್ಗ ನಿರ್ಮಿಸಬೇಕು. ಮುಂಬೈನಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗಿದೆ ಎಂದೂ ಅವರು ಹೇಳಿದರು.

ಕೇವಲ ಮೆಟ್ರೋ ಕಾಮಗಾರಿ ನಡೆಯುವ ಮಾರ್ಗಗಳಿಗೆ ಇದು ಸೀಮಿತವಾಗಿಲ್ಲ. ಫ್ಲೈಓವರ್‌, ವೈಟ್ಟಾಪಿಂಗ್‌ ಮತ್ತಿತರ ಕಾಮಗಾರಿ ನಡೆಯುವ ಸ್ಥಳಗಳಲ್ಲೂ ಇದನ್ನು ಕಾಣಬಹುದು. ಸಿಗ್ನಲ್ಗಳೇ ಇರುವುದಿಲ್ಲ. ಇದ್ದರೂ ಬಹುತೇಕ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಟ್ರಾಫಿಕ್‌ ವಾರ್ಡನ್‌ಗಳಿರುವುದಿಲ್ಲ. ಈ ಮಧ್ಯೆ ಕಿರಿದಾದ ರಸ್ತೆಗಳಲ್ಲಿ ವಾಹನ ಸವಾರರು ಪರದಾಡುವುದು ನಿತ್ಯದ ಗೋಳು ಎಂದು ಸಂಜೀವ್‌ ದ್ಯಾಮಣ್ಣವರ ತಿಳಿಸುತ್ತಾರೆ.

● ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.