“ಗ್ರಾಫಿಕ್‌ ಸ್ಟುಡಿಯೋ’ ಕಾಮಗಾರಿ ತೆವಳುತ್ತಿದೆ…

ಗಡುವು ಮುಗಿದರೂ ಪೂರ್ಣವಾಗಿಲ್ಲ„ 2018ರಿಂದ ಆರಂಭವಾಗಿದ್ದ 3,60 ಕೋಟಿ ರೂ.ವೆಚ್ಚ¨ ‌ಕಾಮಗಾರಿ

Team Udayavani, Dec 20, 2020, 3:04 PM IST

“ಗ್ರಾಫಿಕ್‌ ಸ್ಟುಡಿಯೋ’ ಕಾಮಗಾರಿ ತೆವಳುತ್ತಿದೆ…

ಬೆಂಗಳೂರು: ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಲಲಿತ ಕಲಾ ಅಕಾಡೆಮಿಯ ಗ್ರಾಫಿಕ್‌ ಸ್ಟುಡಿಯೋ ಕಾಮಗಾರಿಗೆ ನಿಗದಿಪಡಿಸಿದ್ದ ಅವಧಿ ಮುಗಿದರೂ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ಕಲಿಕಾ ತರಗತಿ ಸೇರಿದಂತೆ ಇನ್ನಿತರ ಕ್ರಿಯಾ ಯೋಜನೆ ಜಾರಿಗೆ ತೀವ್ರ ಹಿನ್ನಡೆ ಉಂಟಾಗಿದೆ.

ಈ ಹಿಂದೆ ಉಮಾಶ್ರೀ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದಾಗಲೇ ಅಕಾಡೆಮಿ ಗ್ರಾಫಿಕ್‌ ಸ್ಟುಡಿಯೋ ಕಾಮಗಾರಿಗೆ ಶಂಕುಸ್ಥಾಪನೆ ನಡೆದಿತ್ತು. ಹಾಗೆಯೇ ಸ್ಟುಡಿಯೋ ನಿರ್ಮಾಣದ ಸಂಪೂರ್ಣ ನಿರ್ವಹಣೆಯನ್ನು ಪಿಡಬ್ಲ್ಯುಡಿ ಇಲಾಖೆಗೆ ನೀಡಲಾಗಿತ್ತು. ಜತೆಗೆ ಸ್ಟುಡಿಯೋ ನಿರ್ಮಾಣಕ್ಕಾಗಿ 3,60 ಕೋಟಿ ರೂ.ಪಾವತಿ ಮಾಡಲಾಗಿತ್ತು. 2018 ರಲ್ಲಿ ನಿರ್ಮಾಣ ಕಾರ್ಯ ಆರಂಭಿಸಲಾಗಿದ್ದರೂ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. 2020ರಲ್ಲಿ ಸ್ಟುಡಿಯೋ ಕಾಮಗಾರಿ ಸಂಪೂರ್ಣಗೊಳ್ಳಬೇಕಾಗಿತ್ತು. ಆದರೆ, ಇನ್ನೂ ಕೆಲಸ ಕುಂಟುತ್ತಲೇ ಸಾಗಿದೆ. ಕಾಮಗಾರಿ ಪೂರ್ಣಗೊಳ್ಳಲು ಇನ್ನೂ 4-5 ತಿಂಗಳು ಬೇಕಾಗಬಹುದು ಎಂದು ಲಲಿತ ಕಲಾ ಅಕಾಡೆಮಿ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈಗಾಗಲೇಈಸಂಬಂಧ ಲಲಿತ ಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರ ಅವರು ಅಕಾಡೆಮಿ ಸದಸ್ಯರ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಅಲ್ಲದೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಸ್ಥಿತಿಗತಿ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಸ್ಥಳ ಪರಿಶೀಲನೆ ನಡೆಸಿರುವ ಲಲಿತ ಕಲಾ ಅಕಾಡೆಮಿ ಅಧ್ಯಕ್ಷರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಗ್ರಾಫಿಕ್‌ ಸ್ಟುಡಿಯೋ ಕಾಮಗಾರಿ ವಿಳಂಬ ಸಂಬಂಧ ಅಸಮಾಧಾನ ತೊಡಿಕೊಂಡಿದ್ದಾರೆ.

ಕ್ರಿಯಾ ಯೋಜನೆಗೆ ಅಡ್ಡಿ: ಲಲಿತಕಲಾ ಅಕಾಡೆಮಿ ಹಲವು ಕ್ರಿಯಾ ಯೋಜನೆ ಹಮ್ಮಿಕೊಂಡಿದೆ. ವಿದ್ಯಾರ್ಥಿಗಳ ಕಲಿಕಾ ತರಗತಿ, ಕಲಾಕೃತಿಗಳ ವಿನ್ಯಾಸ, ಗ್ರಾಫಿಕ್‌ ಮುದ್ರಣ ಸೇರಿ ಇನ್ನಿತರ ಕಲಿಕಾ ಯೋಜನೆ ರೂಪಿಸಿದೆ. ಆದರೆ, ಇದಕ್ಕೆಲ್ಲಾ ಸ್ಥಳಾವಕಾಶದ ಕೊರತೆ ಇರುವುದರಿಂದ ದೊಡ್ಡ ಪ್ರಮಾಣದ ಕಾರ್ಯಕ್ರಮ ರೂಪಿಸಲು ಆಗದ ಸ್ಥಿತಿಯಲ್ಲಿ ಲಲಿತಕಲಾ ಅಕಾಡೆಮಿ ಇದೆ. ಈ ಹಿಂದೆ ಸಿ.ಟಿ.ರವಿ ಅವರು ಕನ್ನಡ ಮತ್ತುಸಂಸ್ಕೃತಿಇಲಾಖೆಸಚಿವರಾಗಿದ್ದಾಗಲೇ ಡಿಸೆಂಬರ್‌ ಅಂತ್ಯದ ಒಳಗೆ ಗ್ರಾಫಿಕ್‌ ಸ್ಟುಡಿಯೋ ಕಾಮಗಾರಿ ಪೂರ್ಣಗೊಳಿಸುವ ಗಡುವು ನೀಡಿದ್ದರು. ಆದರೆ ಗಡುವು ಮುಗಿದರೂ ಕೆಲಸ ಮುಗಿದಿಲ್ಲ ಎಂದು ಲಲಿತ ಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ಸ್ಥಿತಿಗತಿ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಸಮಸ್ಯೆ ಪರಿಹರಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಅಧಿಕಾರಿಗಳೊಂದಿಗೆ ಸಭೆ :  ಗ್ರಾಫಿಕ್‌ ಸ್ಟುಡಿಯೋ ಕಾಮಗಾರಿ ಸಕಾಲದಲ್ಲಿ ನಡೆಯುತ್ತಿಲ್ಲ. ಜತೆಗೆ ಗುಣಮಟ್ಟದ ಕೆಲಸ ನಡೆಯುತ್ತಿಲ್ಲ ಎಂಬುವುದೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಮನಕ್ಕೆ ಬಂದಿದೆ. ಹೀಗಾಗಿ ಶೀಘ್ರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ವಿ.ರಶ್ಮಿ ಮಹೇಶ್‌ ಅವರು ಲೋಕೋಪಯೋಗಿ ಇಲಾಖೆಹಿರಿಯ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯುಕ್ತ ಎಸ್‌.ರಂಗಪ್ಪ ಹೇಳಿದ್ದಾರೆ.

ಲಲಿತ ಕಲಾ ಅಕಾಡೆಮಿಯ ಗ್ರಾಫಿಕ್‌ ಸ್ಟುಡಿಯೋ ನಿರ್ಮಾಣದ ಸಂಬಂಧಈಗಾಗಲೇಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಲೋಕೋಪಯೋಗಿ ಇಲಾಖೆಗೆ ಸಂಪೂರ್ಣ ಅನುದಾನ ಪಾವತಿಮಾಡಿದೆ.ಆದರೆ ನೀಡಿರುವ ಗಡುವು ಮುಗಿದರೂ ಇನ್ನೂ ಕೆಲಸ ಪೂರ್ಣವಾಗಿಲ್ಲ.ಕೋವಿಡ್ ನೆಪ ನೀಡಲಾಗುತ್ತಿದೆ. ಎಸ್‌.ರಂಗಪ್ಪ, ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

 

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.