ಸ್ಮಾರ್ಟ್ ಸಿಟಿ ವಿಳಂಬಕ್ಕೆ ಗರಂ
Team Udayavani, Jul 19, 2018, 12:33 PM IST
ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಗೆ ಬಿಡುಗಡೆ ಆಗಿರುವ ಹಣವನ್ನು ವೆಚ್ಚ ಮಾಡದೆ ಉಳಿಸಿಕೊಂಡಿರುವುದಕ್ಕೆ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ತುಮಕೂರು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರಗಳನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆ ಮಾಡಲಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಣ ಬಿಡುಗಡೆ ಮಾಡಿದ್ದರೂ, ನಿಗದಿತ ಪ್ರಗತಿ ಸಾಧಿಸಲಾಗಿಲ್ಲ ಏಕೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.
ಆರು ಮಹಾನಗರಗಳಿಗೆ ಈಗಾಗಲೇ 1,656 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಬೆಂಗಳೂರಿಗೆ 53 ಕೋಟಿ ರೂ.
ಬಿಡುಗಡೆಯಾಗಿದೆ. ಆದರೂ, ನಿರೀಕ್ಷಿತ ಪ್ರಗತಿ ಸಾಧಿಸದಿರಲು ಕಾರಣ ಏನು ಎಂದು ಕೇಳಿದ್ದಾರೆ.
ಪ್ರಗತಿಯಲ್ಲಿರುವ ಸ್ಮಾರ್ಟ್ ಸಿಟಿ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿಯನ್ನು ನೀಡದೇ ಇರುವುದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವಂತಾಗಿದೆ. ಒಂದು ತಿಂಗಳಲ್ಲಿ ಯೋಜನೆಯ ಪ್ರಗತಿ ಬಗ್ಗೆ ಮಾಹಿತಿ ನೀಡದಿದ್ದರೆ ಇದಕ್ಕೆ ಆಯಾ ನಗರಗಳ ಆಯುಕ್ತರೇ ಹೊಣೆ. ಯೋಜನೆ ಪೂರ್ಣಗೊಳಿಸಲು ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದ್ದು, ಕೆಲಸ ಮಾಡಲು ಇಷ್ಟವಿಲ್ಲದಿರುವ
ಅಧಿಕಾರಿಗಳು ಹೋಗಬಹುದು ಎಂದು ಸಚಿವರು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು. ಚುನಾವಣೆ ಘೋಷಣೆಯಾಗಿದ್ದರಿಂದ ಸ್ಮಾರ್ಟ್ ಸಿಟಿ ಯೋಜನೆ ಪ್ರಗತಿ ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು ಎಂದು ತಿಳಿದು ಬಂದಿದೆ.
ಸಭೆ ನಂತರ ಮಾತನಾಡಿದ ಯು.ಟಿ.ಖಾದರ್, ಸ್ಮಾರ್ಟ್ ಸಿಟಿ ಯೋಜನೆ ಪ್ರಗತಿಯಲ್ಲಿದ್ದು, ಪ್ರತಿ ತಿಂಗಳು ಆಯಾ ಸ್ಮಾರ್ಟ್ ಸಿಟಿ ಉಸ್ತುವಾರಿಗಳು ಹಾಗೂ ಸಂಬಂಧಪಟ್ಟ ಶಾಸಕರು ಸಭೆ ನಡೆಸಿ ಕಾಮಗಾರಿ ವೇಗ ಹೆಚ್ಚಿಸಿ ಪೂರ್ಣಗೊಳಿಸಲು ಆದೇಶಿಸಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳನ್ನು ಸ್ಮಾರ್ಟ್ ಸಿಟೀಸ್ ಕರ್ನಾಟಕ ವೆಬ್ಸೈಟ್ ಮೂಲಕ ಸಾರ್ವಜನಿಕರೂ ನೋಡಲು ಅವಕಾಶ ಕಲ್ಪಿಸಲಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವ ಪ್ರತಿ ನಗರಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ತಲಾ 100 ಕೋಟಿ ರೂ.ಬಿಡುಗಡೆ ಮಾಡಿವೆ. ಬೆಳಗಾವಿ, ದಾವಣಗೆರೆಯಲ್ಲಿ ಈಗಾಗಲೇ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 21 ಕಾರ್ಯಕ್ರಮಗಳು ಬರುತ್ತವೆ. ಈ ಕಾರ್ಯಕ್ರಮಗಳ ಜೊತೆಗೆ ಹೊಸದಾಗಿ ಬೇರೆ ಯೋಜನೆಗಳನ್ನು ಸೇರಿಸಿಕೊಳ್ಳಲು ಅವಕಾಶವಿದೆ ಎಂದರು.
ಎಲ್ಲ ಸ್ಮಾರ್ಟ್ ಸಿಟಿಗಳ ಸರ್ವರ್ಗಳು ಬೆಂಗಳೂರಿನಲ್ಲಿ ಇರುತ್ತವೆ. ಅಲ್ಲದೇ ಆಯಾ ಸ್ಮಾರ್ಟ್ ಸಿಟಿಗಳಲ್ಲಿ ಒಂದೊಂದು ನಿಯಂತ್ರಣ ಕೊಠಡಿ ಇರುತ್ತದೆ. ಐದು ವರ್ಷದಲ್ಲಿ ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ದಾವಣಗೆರೆ 6 ನೇ ಸ್ಥಾನ, ತುಮಕೂರು 20 ನೇ ಸ್ಥಾನ, ಬೆಳಗಾವಿ 22 ನೇ ಸ್ಥಾನ, ಹುಬ್ಬಳ್ಳಿ -ಧಾರವಾಡ 51 ನೇ ಸ್ಥಾನ ಗಳಿಸಿವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ